AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Doddaballapur: ದೊಡ್ಡಬಳ್ಳಾಪುರ ಬಳಿ ಮಹಿಳೆಯ ಸೀರೆ ಬಿಚ್ಚಿ, ಅದೇ ಸೀರೆಯಿಂದ ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಆರೋಪ

Doddaballapur: ಗಲಾಟೆಯ ವೇಳೆ ಪಕ್ಕದ ಮನೆಯ ಮಹಿಳೆಯ ಸೀರೆ ಬಿಚ್ಚಿ ಅದೇ ಸೀರೆಯಿಂದ ಗ್ರಾಮದ ಮಧ್ಯಭಾಗದಲ್ಲಿ ಹುಣಸೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆಂದು ಹಲ್ಲೆಗೊಳಗಾದ ಜಯಮ್ಮ ಮತ್ತು ಗ್ರಾಮದ ಮುಖಂಡ ಹೆಚ್.ಆರ್. ಮುನಿಶ್ಯಾಮಯ್ಯ ಆರೋಪಿಸಿದ್ದಾರೆ.

Doddaballapur: ದೊಡ್ಡಬಳ್ಳಾಪುರ ಬಳಿ ಮಹಿಳೆಯ ಸೀರೆ ಬಿಚ್ಚಿ, ಅದೇ ಸೀರೆಯಿಂದ ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಆರೋಪ
ದೊಡ್ಡಬಳ್ಳಾಪುರ ಬಳಿ ಮಹಿಳೆಯ ಸೀರೆ ಬಿಚ್ಚಿ, ಅದೇ ಸೀರೆಯಿಂದ ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಆರೋಪ
TV9 Web
| Edited By: |

Updated on:Mar 08, 2022 | 4:19 PM

Share

ದೊಡ್ಡಬಳ್ಳಾಪುರ: ರಾಜಧಾನಿ ಬೆಂಗಳೂರಿನ ಹೊರವಲಯಕ್ಕೆ ಅಂಟಿಕೊಂಡಂತಿರುವ ದೊಡ್ಡಬಳ್ಳಾಪುರದಿಂದ ವಿಶ್ವ ಮಹಿಳಾ ದಿನಾಚರಣೆಯಂದು ಕೆಟ್ಟ ಸುದ್ದಿಯೊಂದು ಕೇಳಿಬಂದಿದೆ. ಘಟನೆ ಇತ್ತೀಚೆಗೆ ನಡೆದಿದ್ದು, ಮಹಿಳೆಯ ಗೌರವಕ್ಕೆ ಚ್ಯುತಿ ಬರುವಂತೆ ಮಹಿಳೆಯೊಬ್ಬರ ಸೀರೆ ಬಿಚ್ಚಿ, ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮಹಿಳೆಯ ಮೇಲಿನ ದೌರ್ಜನ್ಯದ ಹೇಯ ಘಟನೆ ಫೆಬ್ರವರಿ 28 ರಂದು ದೊಡ್ಡಬಳ್ಳಾಪುರ ತಾಲೂಕಿನ ಮಲ್ಲೋಹಳ್ಳಿಯಲ್ಲಿ ನಡೆದಿದ್ದು, ತಡವಾಗಿ‌ ಬೆಳಕಿಗೆ ಬಂದಿದೆ (Womens Day 2022).

ಆಸ್ತಿ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳವಾಗಿದ್ದು ಪತ್ನಿಯನ್ನ ಪತಿರಾಯ ಬಿಟ್ಟು ಹೋಗಿದ್ದಾನೆ. ಅದಕ್ಕೆ ಪಕ್ಕದ ಮನೆಯವರೆ ಕಾರಣ ಅಂತ ಅಕ್ರೋಶಗೊಂಡ ಹೆಂಡತಿ, ಪಕ್ಕದ್ಮನೆ ಮಹಿಳೆಯ ಸೀರೆ ಬಿಚ್ಚಿ ಅದೇ ಸೀರೆಯಿಂದ ಮರಕ್ಕೆ ಕಟ್ಟಿ ಹಲ್ಲೆಯನ್ನ ನಡೆಸಿದ್ದಾಳೆ ಅನ್ನೂ ಆರೋಪ ಕೇಳಿ‌ ಬಂದಿದೆ. ಗ್ರಾಮದ ಸುಧಮ್ಮ ಎಂಬುವರು ಜಯಮ್ಮ ಎಂಬುವರ ಸೀರೆ ಬಿಚ್ಚಿ ಅದೇ ಸೀರೆಯಿಂದ ಗ್ರಾಮದ ಹುಣಸೆ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಸೀರೆ ಬಿಚ್ಚಿ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ನಮಗೆ ನ್ಯಾಯ ಕೊಡಿಸಿಲ್ಲ ಎಂದು ಹಲ್ಲೆಗೊಳಗಾದ ಜಯಮ್ಮ ಕುಟುಂಬಸ್ಥರು ಆರೋಪಿಸಿದ್ದಾರೆ. ಅಂದಹಾಗೆ ಮಲ್ಲೋಹಳ್ಳಿಯ ನಿವಾಸಿ ಸುಧಮ್ಮ, ಮುನಿರಾಜುಗೆ ಎರಡನೆ ಹೆಂಡತಿಯಾಗಿದ್ದು ಆಸ್ತಿ ಭಾಗದ ವಿಚಾರದಲ್ಲಿ ಗಲಾಟೆಯಾಗಿ ಗಂಡ ಪತ್ನಿಯಿಂದ ದೂರವಾಗಿದ್ದನಂತೆ.

ಹೀಗಾಗಿ ಪತಿರಾಯ ದೂರವಾಗಲು‌ ಪಕ್ಕದ ಮನೆ ನಿವಾಸಿ ಜಯಮ್ಮ ಮತ್ತು ಆಕೆಯ ಪತಿ ನಂಜಪ್ಪ ಕಾರಣ ಅಂತ ಕ್ಯಾತೆ ತೆಗೆದ ಸುಧಮ್ಮ ಮತ್ತು ಜಯಮ್ಮ ನಡುವೆ ಗಲಾಟೆ ಶುರುವಾಗಿದೆ. ಗಲಾಟೆಯ ವೇಳೆ ಪಕ್ಕದ ಮನೆಯ ಮಹಿಳೆಯ ಸೀರೆ ಬಿಚ್ಚಿ ಅದೇ ಸೀರೆಯಿಂದ ಗ್ರಾಮದ ಮಧ್ಯಭಾಗದಲ್ಲಿ ಹುಣಸೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆಂದು ಹಲ್ಲೆಗೊಳಗಾದ ಜಯಮ್ಮ ಮತ್ತು ಗ್ರಾಮದ ಮುಖಂಡ ಹೆಚ್.ಆರ್. ಮುನಿಶ್ಯಾಮಯ್ಯ ಆರೋಪಿಸಿದ್ದಾರೆ.

ಹಳ್ಳಿಗಾಡಿನಲ್ಲಿ ಕುಡಿತದ ಚಟಕ್ಕೆ ಚಟ್ಟಕಟ್ಟಲು ಇನ್ನೂ ಎಷ್ಟು ಗೃಹಿಣಿಯರು ಪ್ರಾಣ ತೆರಬೇಕೋ… ವಿಜಯನಗರ: ಒಂದು ಕಡೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಭ್ರಮದಿಂದ ನಡೆದಿದೆ. ಆದರೆ ಇತ್ತ ನೂತನ ಜಿಲ್ಲೆ ವಿಜಯನಗರದಲ್ಲಿ ಸೂತಕದ ಛಾಯೆ ಆವರಿಸಿದೆ. ಪುರಾತನ ಕುಡಿತದ ಚಟ ಬಿಡಿಸುವ ಯತ್ನದಲ್ಲಿ ಮಹಿಳೆಯೊಬ್ಬರು ಜೀವತೆತ್ತಿದ್ದಾರೆ. ಭಾರತದ ಹಳ್ಳಿಗಾಡಿನಲ್ಲಿ ಇನ್ನೂ ಅದೆಷ್ಟೋ ಗೃಹಿಣಿಯರು ಹೀಗೆ ಪ್ರಾಣ ತೆರಬೇಕೋ ಈ ಕುಡಿತದ ಚಟಕ್ಕೆ ಚಟ್ಟಕಟ್ಟಲು.

ಕುಡಿತ ಬಿಡಲು ಪತಿ ಒಪ್ಪಲಿಲ್ಲವೆಂದು ಪತ್ನಿ ನೇಣಿಗೆ ಶರಣಾಗಿದ್ದಾರೆ. ಕೂಡ್ಲಗಿ ತಾಲೂಕಿನ ಬೆಳಗಟ್ಟಿ ಗ್ರಾಮದಲ್ಲಿ ಈ ಅತಿರೇಕದ ಘಟನೆ ನಡೆದಿದೆ. ಶೃತಿ (22) ಮನೆಯಲ್ಲಿ ನೇಣಿಗೆ ಶರಣಾದ ಗೃಹಿಣಿ. ಪತಿ ಶಶಿಧರ ಕುಡಿತದ ಚಟಕ್ಕೆ ದಾಸನಾಗಿದ್ದಾನೆ. ಗುಡೇಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

10 ಸಾವಿರ ಲಂಚ ಕೇಳಿ, 5 ಸಾವಿರ ರೂ ಹಣ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಪಿಎಸ್‌ಐ ಬಳ್ಳಾರಿ: ಸಮರ್ಪಕ ನೋಂದಣಿ ದಾಖಲೆ ಇಲ್ಲದ ಬೈಕ್ ಬಿಡಲು 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಹಿನ್ನೆಲೆಯಲ್ಲಿ ಕಂಪ್ಲಿ ಪೊಲೀಸ್ ಠಾಣೆಯ ಕ್ರೈಂ ಪಿಎಸ್‌ಐ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಪರಾಧ ವಿಭಾಗದ ಪೊಲೀಸ್​ ಸಬ್​ಇನ್ಸ್​ಪೆಕ್ಟರ್​​ (ಪಿಎಸ್‌ಐ) ಬಸಪ್ಪ ಲಮಾಣಿ ಎಸಿಬಿ ಬಲೆಗೆ ಬಿದ್ದ ಪೊಲೀಸ್​ ಅಧಿಕಾರಿ. ಲಂಚ ನೀಡದಿದ್ದರೆ ಬೈಕ್ ಸೀಜ್ ಮಾಡುವುದಾಗಿ ಪಿಎಸ್‌ಐ ಬಸಪ್ಪ ಬೆದರಿಸಿದ್ದರು. ಆ ಬಾಬತ್ತಿನಲ್ಲಿ, 5 ಸಾವಿರ ರೂಪಾಯಿ ಹಣ ಸ್ವೀಕರಿಸುವ ವೇಳೆ ಪಿಎಸ್ಐ ಬಲೆಗೆ ಬಿದ್ದಿದ್ದಾರೆ. ಕಂಪ್ಲಿಯ ನಾರಾಯಣಸ್ವಾಮಿ ಎಂಬುವರ ದೂರಿನ ಮೇರೆಗೆ ಎಸಿಬಿ ದಾಳಿ ನಡೆದಿತ್ತು. ಎಸಿಬಿ DySp ಹರಿಬಾಬು ನೇತೃತ್ವದಲ್ಲಿ ದಾಳಿ ನಡೆದಿತ್ತು. ಎಸಿಬಿ ಅಧಿಕಾರಿಗಳು ತದನಂತರ ಪಿಎಸ್‌ಐ ಬಸಪ್ಪ ಲಮಾಣಿ ವಿಚಾರಣೆ ನಡೆಸ್ತಿದ್ದಾರೆ.

Also Read: ಗೋವಾದಲ್ಲಿ ನಿಮ್ಮ ನೇತೃತ್ವದಲ್ಲಿ ಸರ್ಕಾರ ರಚನೆಯಾಗುತ್ತಾ? ಉಸ್ತುವಾರಿ ನಾಯಕ ಡಿ.ಕೆ. ಶಿವಕುಮಾರ್ ಏನಂದರು? Also Read: Women‘s Day 2022: ‘ನಂಬಿಕೆ ಬಾರದೆ ಜವಾಬ್ದಾರಿ ಹೇಗೆ ತಗೋಳೋದು?’ 

Published On - 2:34 pm, Tue, 8 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್