AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳನನ್ನ ಹಿಡಿದಿದ್ದೇವೆ ಬನ್ನಿ ಅಂದರೂ ಬಾರದ ಪೊಲೀಸರು! ಪೊಲೀಸರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರಿಂದ ತೀವ್ರ ಆಕ್ರೋಶ

ಒಂದು ಠಾಣೆ ಪೊಲೀಸರು ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಗೆ ಬರಲ್ಲ ಅಂದರೆ, ಮತ್ತೊಂದು ಠಾಣೆ ಪೊಲೀಸರು ನೀವೇ ಕರೆತನ್ನಿ ಎಂದು ಬೇಜವಾಬ್ದಾರಿ ಉತ್ತರಗಳನ್ನ ನೀಡಿದ್ದಾರೆ

ಕಳ್ಳನನ್ನ ಹಿಡಿದಿದ್ದೇವೆ ಬನ್ನಿ ಅಂದರೂ ಬಾರದ ಪೊಲೀಸರು! ಪೊಲೀಸರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರಿಂದ ತೀವ್ರ ಆಕ್ರೋಶ
ನುಗ್ಗಿ ಕೇಬಲ್ ಕದ್ದಿದ್ದ ಕಳ್ಳ
TV9 Web
| Edited By: |

Updated on:Jun 23, 2022 | 9:19 AM

Share

ದೇವನಹಳ್ಳಿ: ಮಧ್ಯರಾತ್ರಿ ಗ್ರಾಮಸ್ಥರು (Villagers) ಕರೆ ಮಾಡಿ ಕಳ್ಳನನ್ನು ಹಿಡಿದಿದ್ದೇವೆ ಬನ್ನಿ ಅಂದರೂ ಪೊಲೀಸರು (Police) ಸ್ಪಂದಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಮತ್ತು ವಿಶ್ವನಾಥಪುರ ಪೊಲೀಸರ ವಿರುದ್ಧ ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಒಂದು ಠಾಣೆ ಪೊಲೀಸರು ನಮ್ಮ ಪೊಲೀಸ್ ಠಾಣಾ ವ್ಯಾಪ್ತಿಗೆ ಬರಲ್ಲ ಅಂದರೆ, ಮತ್ತೊಂದು ಠಾಣೆ ಪೊಲೀಸರು ನೀವೇ ಕರೆತನ್ನಿ ಎಂದು ಬೇಜವಾಬ್ದಾರಿ ಉತ್ತರಗಳನ್ನ ನೀಡಿದ್ದಾರೆ ಎಂದು ಗ್ರಾಮಸ್ಥರು ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳ್ಳನೊಬ್ಬ ಮಧ್ಯರಾತ್ರಿ ತೋಟಗಳಿಗೆ ನುಗ್ಗಿ ಕೇಬಲ್ ಕದ್ದಿದ್ದ. ಗ್ರಾಮಸ್ಥರು ದೇವನಹಳ್ಳಿ ತಾಲೂಕಿನ ಎಂಬ್ರಹಳ್ಳಿ ಬಳಿ ಕಳ್ಳನನ್ನ ಹಿಡಿದಿದ್ರು. ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕರೆ ಮಾಡಿ 2 ಗಂಟೆ ಕಾದರೂ ಪೊಲೀಸರು ಬಂದಿಲ್ಲ. ಸ್ಥಳಕ್ಕಾಗಮಿಸಿದ 112 ಸಿಬ್ಬಂದಿ ಕರೆದೊಯ್ಯಲ್ಲ ಎಂದು ವಾಪಸ್ ಹೋಗಿದ್ದಾರೆ. ಕೊನೆಗೆ ಬೈಕ್​ನಲ್ಲಿ ಕಳ್ಳನನ್ನ ಕರೆದೊಯ್ಯಲಾಗಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಪೊಲೀಸರ ನಿರ್ಲಕ್ಷ್ಯಕ್ಕೆ ಸೂಕ್ತ ಕ್ರಮವಹಿಸಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Children Health: ಹುಷಾರಿಲ್ಲದ ಮಕ್ಕಳನ್ನು ಶಾಲೆಗೆ ಕಳಿಸುತ್ತಿರುವ ಪೋಷಕರು: ಆರೋಗ್ಯ ನಿಯಮಗಳ ಉಲ್ಲಂಘನೆ, ಸೋಂಕು ಹರಡುವ ಆತಂಕ

ಇದನ್ನೂ ಓದಿ
Image
ನಾನು ಜುಲೈ ಮೂರರಂದು ಅಧಿಕೃತವಾಗಿ ಕಾಂಗ್ರೆಸ್ ಸೇರುತ್ತೇನೆ: ಮಾಜಿ ಎಂಎಲ್​ಸಿ ಹೆಚ್.ಆರ್ ಶ್ರೀನಾಥ್
Image
ಮಂಡ್ಯದಲ್ಲಿ ಮಠಕ್ಕೆ ನುಗ್ಗಿ ಬೇಟೆಯಾಡಿದ ಚಿರತೆ! ಭಯಾನಕ ವಿಡಿಯೋ ಇಲ್ಲಿದೆ
Image
World Test Championship: ಭಾರತ ಕ್ರಿಕೆಟ್ ತಂಡಕ್ಕೆ ಇಂದು ನೋವಿನ ದಿನ: ಜುಲೈ 23 ರಂದು ನಡೆದಿದ್ದೇನು ನೋಡಿ
Image
Vanijya Bhawan: ಪ್ರಧಾನಿ ನರೇಂದ್ರ ಮೋದಿಯಿಂದ ಇಂದು ವಾಣಿಜ್ಯ ಭವನ ಉದ್ಘಾಟನೆ; ನಿರ್ಯಾತ್ ಪೋರ್ಟಲ್​ಗೆ ಚಾಲನೆ

ಕಾಂಕ್ರಿಟ್ ಹಾಕದೇ ವಸತಿ ಕಟ್ಟಡ ನಿರ್ಮಿಸಿದ ಗುತ್ತಿಗೆದಾರರು: ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ತಿಪ್ಪರಸನಾಳ ಗ್ರಾಮದಲ್ಲಿ ಗುತ್ತಿಗೆದಾರರು ಕಾಂಕ್ರಿಟ್ ಹಾಕದೇ ವಸತಿ ಕಟ್ಟಡ ನಿರ್ಮಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ತಿಪ್ಪರಸನಾಳದಲ್ಲಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ವಸತಿ ಕಟ್ಟಡ ನಿರ್ಮಾಣವಾಗುತ್ತಿದೆ. ಆದರೆ ಕಟ್ಟಡಕ್ಕೆ ಕಳಪೆ ಗುಣಮಟ್ಟದ ವಸ್ತುಗಳನ್ನ ಬಳಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 10 ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:56 am, Thu, 23 June 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ