AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆತಂಕದ ನಡುವೆ ಗ್ರಾಮಸ್ಥರಿಗೆ ಎದುರಾಗಿದೆ ಕುಡಿಯುವ ನೀರಿನ ಸಮಸ್ಯೆ

ದೊಡ್ಡಬಳ್ಳಾಪುರ: ಒಂದು ಕಡೆ ಕೊರೊನಾದಿಂದ ಜನರು ಭಯಭೀತರಾಗಿದ್ದರೆ. ಈ ಗ್ರಾಮದ ಜನರು ಕುಡಿಯಲು ಮತ್ತು ಬಳಕೆ ಮಾಡಲು ನೀರಿಲ್ಲದೆ ಪರದಾಡುವಂತ ಪರಿಸ್ಥತಿ ಉಂಟಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮದುರೆ ಸಮೀಪದ ಇಸ್ತೂರು ಪಾಳ್ಯ ಗ್ರಾಮದಲ್ಲಿ ಕಳೆದ20 ದಿನದಿಂದ ಕುಡಿಯಲು ಮತ್ತು ಬಳಕೆ ಮಾಡಲು ನೀರಿಲ್ಲದೆ ಪರದಾಡುವಂತಾಗಿದೆ. ಅಧಿಕಾರಿಗಳು ಕಂಡರೂ ಕಾಣದಂತೆ ಕುರುಡು ಜಾಣತನವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಸುಮಾರು 50 ಕುಟುಂಬಗಳು ನೀರಿಲ್ಲದೆ ಪರದಾಡುತ್ತಿದ್ದಾರೆ. ಜಾನುವಾರುಗಳಿಗೆ ನೀರಿಲ್ಲ ಸರಿಯಾಗಿ ಮಳೆಯಾಗದೆ ಕೆರೆ, ಕುಂಟೆಗಳಲ್ಲಿ ನೀರಿಲ್ಲದೆ […]

ಕೊರೊನಾ ಆತಂಕದ ನಡುವೆ ಗ್ರಾಮಸ್ಥರಿಗೆ ಎದುರಾಗಿದೆ ಕುಡಿಯುವ ನೀರಿನ ಸಮಸ್ಯೆ
ಆಯೇಷಾ ಬಾನು
| Edited By: |

Updated on:Jun 24, 2020 | 4:57 PM

Share

ದೊಡ್ಡಬಳ್ಳಾಪುರ: ಒಂದು ಕಡೆ ಕೊರೊನಾದಿಂದ ಜನರು ಭಯಭೀತರಾಗಿದ್ದರೆ. ಈ ಗ್ರಾಮದ ಜನರು ಕುಡಿಯಲು ಮತ್ತು ಬಳಕೆ ಮಾಡಲು ನೀರಿಲ್ಲದೆ ಪರದಾಡುವಂತ ಪರಿಸ್ಥತಿ ಉಂಟಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮದುರೆ ಸಮೀಪದ ಇಸ್ತೂರು ಪಾಳ್ಯ ಗ್ರಾಮದಲ್ಲಿ ಕಳೆದ20 ದಿನದಿಂದ ಕುಡಿಯಲು ಮತ್ತು ಬಳಕೆ ಮಾಡಲು ನೀರಿಲ್ಲದೆ ಪರದಾಡುವಂತಾಗಿದೆ. ಅಧಿಕಾರಿಗಳು ಕಂಡರೂ ಕಾಣದಂತೆ ಕುರುಡು ಜಾಣತನವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಸುಮಾರು 50 ಕುಟುಂಬಗಳು ನೀರಿಲ್ಲದೆ ಪರದಾಡುತ್ತಿದ್ದಾರೆ.

ಜಾನುವಾರುಗಳಿಗೆ ನೀರಿಲ್ಲ ಸರಿಯಾಗಿ ಮಳೆಯಾಗದೆ ಕೆರೆ, ಕುಂಟೆಗಳಲ್ಲಿ ನೀರಿಲ್ಲದೆ ಜಾನುವಾರುಗಳು ಬಾಯಾರಿಕೆಯಿಂದ ಬಳಲುವಂತಾಗಿದೆ. ಬಹುತೇಕ ಕುಟುಂಬಗಳು ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತ್ತಿದ್ದು, ದನಕರುಗಳಿಗೆ ನೀರಿಲ್ಲದೆ ಪರದಾಡುತ್ತಿದ್ದಾರೆ.

ನೀರಿಗಾಗಿ ಸರ್ಕಾರದಿಂದ ಯಾವುದೇ ಸೌಕರ್ಯಗಳು ಸಿಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೋಟಗಳಲ್ಲಿನ ಬೋರ್‌ವೆಲ್‌ಗಳಿಗೆ ಅವಲಂಬಿತರಾಗಿದ್ದಾರೆ. ಮಳೆ ಇಲ್ಲದೆ ತೋಟಗಳಲ್ಲಿರುವ ಬೆಳೆಗಳಿಗೆ ನೀರು ಸಾಕಾಗುತ್ತಿಲ್ಲ. ಇನ್ನೂ ಬೋರ್‌ವೆಲ್‌ ನೀರನ್ನು ಎಲ್ಲಾ ಕುಟುಂಬಗಳಿಗೆ ಬಿಡಲು ಹೇಗೆ ಸಾಧ್ಯ ಎಂದು ತೋಟಗಳ ಮಾಲೀಕರು ಅಸಹನೆ ವ್ಯಕ್ತಪಡಿಸಿದ್ದಾರೆ. ಆದರೆ ತೋಟಗಳಲ್ಲಿ ಬಿಡುವ ನೀರನ್ನೇ ನಂಬಿ ಜೀವನ ಮಾಡುವಂತ ಪರಿಸ್ಥಿರಿ ಉದ್ಭವಿಸಿದೆ.

ಇನ್ನೂ ಮೂಲಭೂತ ಸೌಕರ್ಯವಾದ ಕುಡಿಯುವ ನೀರಿನ ಸಮಸ್ಯೆ ಗ್ರಾಮದಲ್ಲಿ ಉಲ್ಬಣಿಸಿದ್ದು ಹೊನ್ನಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಈ ಇಸ್ತೂರು ಪಾಳ್ಯ ಗ್ರಾಮಕ್ಕೆ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಸೇರಿದಂತೆ ಸಂಬಂಧ ಪಟ್ಟ ಅಧಿಕಾರಿಗಳು ಯಾರೂ ಸಹ ಭೇಟಿ ನೀಡಿಲ್ಲ. ಪಿಡಿಒಗೆ ಕರೆ ಮಾಡಿದರೆ ಬೇಜವಾಬ್ದಾರಿ ಉತ್ತರವನ್ನು ನೀಡುತ್ತಾರೆ. ಇನ್ನು ಕೆಲವೊಮ್ಮೆ ಉತ್ತರಿಸದೆ ಸಂಪರ್ಕಕ್ಕೆ ಸಿಗುವುದಿಲ್ಲ ಎಂಬುದು ಗ್ರಾಮಸ್ಥರು ಆರೋಪಿಸಿದ್ದಾರೆ.

ನಮಗೆ ಕಳೆದ 20 ದಿನಗಳಿಂದ ಕುಡಿಯಲು ನೀರಿಲ್ಲದೆ ಜೀವನ ಕಷ್ಟವಾಗಿದೆ. ಅಧಿಕಾರಿಗಳು ಯಾರೂ ನಮ್ಮ ಕಡೆ ಗಮನ ಹರಿಸುತ್ತಿಲ್ಲ. ಬರಿ ಕಂದಾಯ ವಸೂಲಿ ಮಾಡಲು ಮಾತ್ರ ಬರುತ್ತಾರೆ. ನಮ್ಮ ಕಷ್ಟಗಳಿಗೆ ಸ್ಪಂದಿಸುವುದಿಲ್ಲ ನಮಗೆ ಕುಡಿಯಲು ನೀರು ಕೊಡಿ ಇಲ್ಲದಿದ್ದರೆ ನೀರಿಲ್ಲದೆ ಸಾಯಬೇಕಾಗುತ್ತದೆ ಎಂದು ಗ್ರಾಮಸ್ಥೆ ಲಕ್ಷ್ಮಮ್ಮ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ‌.

ನೀರಿನ ಸಮಸ್ಯೆ ಬಗೆಹರಿಸಲು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಆದಷ್ಟು ಬೇಗ ಪರ್ಯಾಯವಾಗಿ ನೀರನ್ನು ಒದಗಿಸಲು ತಿಳಿಸುತ್ತೇನೆ ಎಂದು ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಮುರುಡಯ್ಯ ತಿಳಿಸಿದ್ದಾರೆ.

Published On - 4:06 pm, Wed, 24 June 20

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ