ದೇವನಹಳ್ಳಿ: ಕೋಟಿ ಆಸೆಗೆ ಉಂಡ ಮನೆಗೆ ಕನ್ನ ಹಾಕಲು ಯತ್ನಿಸಿ ಪೊಲೀಸರ ಅತಿಥಿಯಾದ ಕಾರ್ ಡ್ರೈವರ್ ಮತ್ತು ಸಹಚರರು

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ನಾಗಮಂಗಲ ಗ್ರಾಮದಲ್ಲಿ ಕಾರ್ ಡ್ರೈವರ್ ತಾನು ಕೆಲಸ ಮಾಡುತ್ತಿದ್ದ ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿ ಕಳ್ಳತನಕ್ಕೆ ಯತ್ನಿಸಿ ವಿಫಲವಾಗಿ ವಿಶ್ವನಾಥಪುರ ಪೊಲೀಸರ ಕೈಗೆ ಸಿಕ್ಕಿಬಿದಿದ್ದಾನೆ. ಸದ್ಯ ಚಾಲಕ ಕೃಷ್ಣಮೂರ್ತಿ ಮತ್ತು ಸಹಚರ ಅನಿಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಯತ್ನದ ದೃಶ್ಯಗಳು ಮನೆಯ ಸಿಸಿ ಟಿವಿಯಲ್ಲಿ ಸೆರೆಯಾಗಿವೆ.

ದೇವನಹಳ್ಳಿ: ಕೋಟಿ ಆಸೆಗೆ ಉಂಡ ಮನೆಗೆ ಕನ್ನ ಹಾಕಲು ಯತ್ನಿಸಿ ಪೊಲೀಸರ ಅತಿಥಿಯಾದ ಕಾರ್ ಡ್ರೈವರ್ ಮತ್ತು ಸಹಚರರು
ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯ
Edited By: ಆಯೇಷಾ ಬಾನು

Updated on: Aug 29, 2023 | 9:03 AM

ದೇವನಹಳ್ಳಿ, ಆ.29: ಕೋಟಿ ಕೋಟಿ ಹಣ ಸಿಗುತ್ತೆ ಎಂಬ ಆಸೆಗೆ 8 ವರ್ಷದಿಂದ ಡ್ರೈವರ್ ಆಗಿದ್ದ ಚಾಲಕನೋರ್ವ(Car Driver) ಉಂಡ ಮನೆಗೆ ಕನ್ನ ಹಾಕಲು ಯತ್ನಿಸಿ ವಿಫಲವಾಗಿ ಪೊಲೀಸರ ಅತಿಥಿಯಾಗಿದ್ದಾನೆ(Theft Attempt). ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ನಾಗಮಂಗಲ ಗ್ರಾಮದಲ್ಲಿ ಕಾರ್ ಡ್ರೈವರ್ ತಾನು ಕೆಲಸ ಮಾಡುತ್ತಿದ್ದ ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿ ಕಳ್ಳತನಕ್ಕೆ ಯತ್ನಿಸಿ ವಿಫಲವಾಗಿ ವಿಶ್ವನಾಥಪುರ ಪೊಲೀಸರ ಕೈಗೆ ಸಿಕ್ಕಿಬಿದಿದ್ದಾನೆ. ಸದ್ಯ ಚಾಲಕ ಕೃಷ್ಣಮೂರ್ತಿ ಮತ್ತು ಸಹಚರ ಅನಿಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಯತ್ನದ ದೃಶ್ಯಗಳು ಮನೆಯ ಸಿಸಿ ಟಿವಿಯಲ್ಲಿ ಸೆರೆಯಾಗಿವೆ.

ಕಾರ್ ಡ್ರೈವರ್ ಕೃಷ್ಣಮೂರ್ತಿ 8 ವರ್ಷಗಳಿಂದ ಒಂದೇ ಮನೆಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಮನೆ ಮಾಲೀಕ ಜಮೀನು ಮಾರಿ ಬಂದ ಹಣವನ್ನು ಮನೆಯಲ್ಲಿಟ್ಟಿದ್ದ. ಈ ವಿಚಾರ ತಿಳಿದ ಆರೋಪಿ ಕೃಷ್ಣಮೂರ್ತಿ ಹಣ ಲಪಟಾಯಿಸಲು ಸಂಚು ರೂಪಿಸಿದ್ದ. ತನ್ನ ಸ್ನೇಹಿತನೊಂದಿಗೆ ಸೇರಿಕೊಂಡು ಮನೆಯಲ್ಲಿರುವ ಹಣ ಕದಿಯಲು ಪ್ಲ್ಯಾನ್ ಮಾಡಿದ್ದ. ಅದರಂತೆ ಕಳೆದ ಶನಿವಾರ ಮುಂಜಾನೆ ಮನೆಗೆ ಕನ್ನ ಹಾಕಲು ಮೂವರು ಆರೋಪಿಗಳು ಮನೆಗೆ ಎಂಟ್ರಿಕೊಟ್ಟಿದ್ದರು. ಮುಂಜಾನೆ ಮನೆಯಿಂದ ಶೌಚಾಲಯಕ್ಕೆ ಅಂತ ಎದ್ದು ಹೊರಗಡೆ ಬಂದ ವೇಳೆ ಮನೆ ಮಾಲೀಕ ಹರೀಶ್ ಬಾಬು ಎಂಬುವವರ ಮೇಲೆ ಆರೋಪಿಗಳು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ಲಾಂಗು ಚಾಕು ತೋರಿಸಿ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಿತ ಉಗ್ರ ಜುನೈದ್​​ ಸಹಚರನ ಬಂಧನ; ಸಿನಿಮೀಯ ರೀತಿಯಲ್ಲಿ ​ಆರೋಪಿಯ​ನ್ನ ಲಾಕ್​ ಮಾಡಿದ ಪೊಲೀಸರು

ಈ ವೇಳೆ ಪತ್ನಿ ಕೋಣೆಯಲ್ಲಿ ಬಾಗಿಲು ಲಾಕ್ ಮಾಡಿಕೊಂಡು ಪೊಲೀಸರಿಗೆ ಫೋನ್ ಮಾಡ್ತಿದ್ದಂತೆ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಈ ಕೃತ್ಯ ಮನೆಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಗಳನ್ನು ಆಧರಿಸಿ ವಿಶ್ವನಾಥಪುರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧನ ವೇಳೆ ಮನೆ ಮಾಲೀಕ ಜಮೀನು ಮಾರಿದ್ದ‌ ಹಣ ಲಪಟಾಯಿಸಲು ಅಟ್ಯಾಕ್ ನಡೆಸಿದ್ದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಆರೋಪಿಗಳು ಕೃತ್ಯಕ್ಕೆ ಬಳಸಿದ್ಧ ಚಾಕು ಮತ್ತು ಬೈಕನ್ನು ವಿಶ್ವನಾಥಪುರ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:02 am, Tue, 29 August 23

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us