AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ‌ ಸಿಎಂ‌ ಆಗುತ್ತೇನೆ ಅಂತಾ ಕನಸು ಕಾಣುವವನು ಹುಚ್ಚ, ಈ ಬಗೆಗಿನ ಚರ್ಚೆ ಕೇವಲ ರಾಜಕೀಯ ತೆವಲು -ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಆನೇಕಲ್ನ ಶ್ರಿ ಸಾಯಿರಾಮ್ ಇಂಜಿನಿಯರಿಂಗ್ ಕಾಲೇಜಿನ 21ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗಿಯಾದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ದಲಿತ ಸಿಎಂ ಎಂಬ ಚರ್ಚೆ ಕೇವಲ ರಾಜಕೀಯ ತೆವಲು. ಆ ರೀತಿಯ ಚರ್ಚೆ ಆಗುವುದಿಲ್ಲ ಎಂದರು. ಸಂವಿಧಾನ ಬರೆದ ಡಾ.ಅಂಬೇಡ್ಕರ್ರಿಗೆ 5 ವರ್ಷ ಮುಂದುವರಿಯಲು ಬಿಡಲಿಲ್ಲ ಎಂದರು.

ದಲಿತ‌ ಸಿಎಂ‌ ಆಗುತ್ತೇನೆ ಅಂತಾ ಕನಸು ಕಾಣುವವನು ಹುಚ್ಚ, ಈ ಬಗೆಗಿನ ಚರ್ಚೆ ಕೇವಲ ರಾಜಕೀಯ ತೆವಲು -ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
TV9 Web
| Edited By: ಆಯೇಷಾ ಬಾನು|

Updated on:May 15, 2022 | 3:18 PM

Share

ಆನೇಕಲ್: ದಲಿತ ಮುಖ್ಯಮಂತ್ರಿ ಕೂಗು ಕರ್ನಾಟಕದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ದಲಿತ‌ ಸಿಎಂ‌ ಆಗುತ್ತೇನೆ ಅಂತಾ ಕನಸು ಕಾಣುವವನು ಹುಚ್ಚ ಎಂದು ಆನೇಕಲ್ನಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿಕ್ಕೆ ನೀಡಿದ್ದಾರೆ. ದಲಿತ ಸಿಎಂ‌ ಅನ್ನೋ ಚರ್ಚೆ ಅದು ಕೇವಲ ರಾಜಕೀಯ ತೆವಲು. ಯಾಕೆ ಸಿಎಂ ಆಗಲ್ಲ ಅನ್ನೋದಕ್ಕೆ ಬಹಳಷ್ಟು ಉದಾಹರಣೆ ಇದೆ ಎಂದರು.

ಆನೇಕಲ್ನ ಶ್ರಿ ಸಾಯಿರಾಮ್ ಇಂಜಿನಿಯರಿಂಗ್ ಕಾಲೇಜಿನ 21ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗಿಯಾದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ದಲಿತ ಸಿಎಂ ಎಂಬ ಚರ್ಚೆ ಕೇವಲ ರಾಜಕೀಯ ತೆವಲು. ಆ ರೀತಿಯ ಚರ್ಚೆ ಆಗುವುದಿಲ್ಲ ಎಂದರು. ಸಂವಿಧಾನ ಬರೆದ ಡಾ.ಅಂಬೇಡ್ಕರ್ರಿಗೆ 5 ವರ್ಷ ಮುಂದುವರಿಯಲು ಬಿಡಲಿಲ್ಲ. ಐದು ವರ್ಷ ಮುಂದುವರೀಲಿ ಅಂತ ಅಂಬೇಡ್ಕರ್ರ ಮನೆಗೆ ಹೋಗಿ ಒಂದ್ ಕಾಫಿಯೂ ಕುಡಿದಿಲ್ಲ. ಈ ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆ 9 ಬಾರಿ ಶಾಸಕರಾದರು. ಅವರು ಕೇವಲ ಮಂತ್ರಿಯಾಗಿ ಕೆಲಸ ಮಾಡಿದ್ರು, ಸಿಎಂ ಆಗಲಿಲ್ಲ. ಜಿ.ಪರಮೇಶ್ವರ್ ಸಿಎಂ ಆಗ್ತಾರೆ ಅಂತಾ ಅವರನ್ನು ಸೋಲಿಸಿದರು. ಕರ್ನಾಟಕದಲ್ಲಿ ದಲಿತ ಸಿಎಂ ಕನಸು ಕಾಣುವವನು ಹುಚ್ಚ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಬೊಮ್ಮಾಯಿಯವರೇ ಈ ರಾಜ್ಯದ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ ಎಂದು ಆನೇಕಲ್ನಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕರ್ನಾಟಕದಲ್ಲೂ ದಲಿತ ಸಿಎಂ ಬೇಡಿಕೆ ಇಡಬೇಕಾದ ಸ್ಥಿತಿ ಬರಬಹುದು: ಡಾ.ಜಿ.ಪರಮೇಶ್ವರ್ ಪಂಜಾಬ್​ನಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಅದೇ ರೀತಿ ಕರ್ನಾಟಕದಲ್ಲೂ ದಲಿತ ಸಿಎಂ ಬೇಕೆಂದು ಕೇಳುವಂತಾಗಬಹುದು ಎಂದು ತುಮಕೂರಿನಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದರೆ ದಲಿತರನ್ನು ಸಿಎಂ ಮಾಡಬೇಕೆಂದು ಕೇಳುವಂತಾಗಬಹುದು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮೊದಲ ಆದ್ಯತೆಯಾಗಿದೆ. ರಾಜ್ಯ ಬಿಜೆಪಿಯಲ್ಲಿ ಕಳೆದ ಬಾರಿಯೂ 3 ಜನ ಮುಖ್ಯಮಂತ್ರಿಯಾಗಿದ್ದರು. ಅದೇ ರೀತಿ ಈ ಬಾರಿಯೂ ಮೂವರು ಮುಖ್ಯಮಂತ್ರಿಯಾದರೂ ಆಶ್ಚರ್ಯವಿಲ್ಲ ಎಂದು ಅವರು ಅಭಿಪ್ರಾಯ ತಿಳಿಸಿದರು.

Published On - 3:18 pm, Sun, 15 May 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು