AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devanahalli: ಬ್ಯೂಟಿ ಪಾರ್ಲರ್ ಆಂಟಿಗಾಗಿ ಪತ್ನಿಯನ್ನೆ ಕೊಲೆ ಮಾಡಿದನಾ ಗಂಡ? ಮದುವೆಯಾಗಿ ಮಗುವಿದ್ದರೂ ಗಂಡನಿಗೆ ಬೇರೊಂದು ಲವ್ವಿಡವ್ವಿ!

Illicit Relation: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಜಯಮಹಲ್ ಬಡಾವಣೆಯಲ್ಲಿ ನೆಮ್ಮದಿಯಾಗಿದ್ದ ಕುಟುಂಬದಲ್ಲಿ ಎದ್ದ ಅನೈತಿಕ ಸಂಬಂಧದ ಬಿರುಗಾಳಿ ಪತ್ನಿಯನ್ನೆ ಬಲಿ ತೆಗೆದುಕೊಂಡಿದ್ದು ನಿಜಕ್ಕೂ ದುರಂತ. 

Devanahalli: ಬ್ಯೂಟಿ ಪಾರ್ಲರ್ ಆಂಟಿಗಾಗಿ ಪತ್ನಿಯನ್ನೆ ಕೊಲೆ ಮಾಡಿದನಾ ಗಂಡ? ಮದುವೆಯಾಗಿ ಮಗುವಿದ್ದರೂ ಗಂಡನಿಗೆ ಬೇರೊಂದು ಲವ್ವಿಡವ್ವಿ!
ಬ್ಯೂಟಿ ಪಾರ್ಲರ್ ಆಂಟಿಗಾಗಿ ಪತ್ನಿಯನ್ನೆ ಕೊಲೆ ಮಾಡಿದನಾ ಗಂಡ?
ಸಾಧು ಶ್ರೀನಾಥ್​
|

Updated on: Apr 03, 2023 | 12:12 PM

Share

ಗಂಡ-ಹೆಂಡತಿ ಮತ್ತು ಒಂದು ಮಗು ಜೊತೆಗೆ ಹೆತ್ತುಹೊತ್ತ ತಂದೆ-ತಾಯಿಯಿಂದ ಪರಿಪೂರ್ಣವಾಗಿದ್ದ ಕುಟುಂಬ ಅದು, ದುಡಿಯೋಕ್ಕೆ ಕೆಲಸ, ಇರೋಕ್ಕೆ ಮನೆ ಎಲ್ಲವೂ ಇದ್ದ ಸುಖೀ ಕುಟುಂಬವದು. ಆದ್ರೆ ಮುದ್ದಾದ ಪತ್ನಿಯಿದ್ದರೂ ಪರಸ್ತ್ರೀಯ ಪರಸಂಗಕ್ಕೆ ಬಿದ್ದ ಪತಿರಾಯ (Husband), ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ (Illicit Relation) ಅಗ್ನಿಸಾಕ್ಷಿಯಾಗಿ ಮದುವೆಯಾಗಿದ್ದ ಪತ್ನಿಗೆ (Wife) ಕೊಳ್ಳಿಯಿಟ್ಟಿದ್ದಾನೆ. ಮನೆ ಮಗಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕೂಗಾಟ ಚೀರಾಟ ನೋವು ಆಕ್ರಂದನ ಆಕ್ರೋಶ ಎಲ್ಲವೂ ಒಮ್ಮೆಲೆಗೆ ಉಮ್ಮಳಿಸಿ ಬರ್ತಿದೆ ಜೊತೆಯಲ್ಲಿ ಆಡಿ ಬೆಳೆದಿದ್ದ ಸಹೋದರಿ ಇಷ್ಟು ಬೇಗ ನಮ್ಮನ್ನೆಲ್ಲ ಬಿಟ್ಟು ಹೋದ್ಲಾ ಅಂತ ಒಡ ಹುಟ್ಟಿದವಳು ಗೋಳಾಡುತ್ತಿದ್ರೆ ಇತ್ತ ಸಂಬಂಧಿಕರು ಸಹ ಒಂದು ಕ್ಷಣ ಮೌನಕ್ಕೆ ಜಾರಿದ್ದಾರೆ. ಹೌದು ಅಷ್ಟಕ್ಕೂ ಈ ಆಕ್ರಂದನ ನೋವಿಗೆ ಕಾರಣವಾಗಿದ್ದು ಜಯಂತಿ ಎಂಬ ಮಹಿಳೆಯ ಸಾವು.

ಅಂದಹಾಗೆ ಮೇಲಿನ ಪೋಟೋದಲ್ಲಿರುವ ಈ ಮುದ್ದಾದ ಜೋಡಿಯ ಹೆಸರು ಜಯಂತಿ ಮತ್ತು ಲಕ್ಷ್ಮೀಪತಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ (Devanahalli) ಜಯಮಹಲ್ ಬಡಾವಣೆಯಲ್ಲಿ ವಾಸವಾಗಿದ್ದ ಈ ಕುಟುಂಬ ಒಂದು ಮಗು ಅತ್ತೆ ಮಾವ ಜೊತೆ ಕಳೆದ 16 ವರ್ಷಗಳಿಂದ ಸುಖವಾಗಿಯೇ ಸಂಸಾರ ನಡೆಸುತ್ತಿತ್ತು. ಆದ್ರೆ ಚೆನ್ನಾಗಿದ್ದ ಕುಟುಂಬದಲ್ಲಿ ವಿಜಯಪುರ ಪಟ್ಟಣದಲ್ಲಿ ಬ್ಯೂಟಿ ಪಾರ್ಲರ್ (Beauty Parlour) ನಡೆಸುತ್ತಿದ್ದ ಓರ್ವ ಮಹಿಳೆಯ ಜೊತೆ ಗಂಡ ಲಕ್ಷ್ಮೀಪತಿಗೆ ಪರಿಚಯವಾಗಿದ್ದು ಆಕೆಯ ಜೊತೆ ಅನೈತಿಕ ಸಂಬಂಧವಿಟ್ಟು ಕೊಂಡಿದ್ನಂತೆ.

Also Read:

ಬ್ಯೂಟಿ ಮರ್ಡರ್​: ಮಹಿಳೆಯ ಕಾಲು ಬಿಟ್ಟು ದೇಹವೆಲ್ಲ ಸುಟ್ಟಿತ್ತು, ಪೊಲೀಸರ ಸಮಯಪ್ರಜ್ಞೆಯಿಂದ ಗುರುತು ಪತ್ತೆ, ಜೊತೆಗೆ ಒಂದೇ ಗಂಟೆಯಲ್ಲಿ ಆರೋಪಿ ಅಂದರ್​!

ಹೀಗಾಗಿ ಈ ವಿಚಾರ ಪತ್ನಿಗೆ ಗೊತ್ತಾಗಿದ್ದು ಹಲವು ಬಾರಿ ಇದೇ ವಿಚಾರವಾಗಿ ಗಂಡ ಹೆಂಡತಿ ನಡುವೆ ಗಲಾಟೆ ನಡೆದಿತ್ತಂತೆ. ಅಲ್ಲದೆ ಇದನ್ನ ಮನಸಿನಲ್ಲಿಟ್ಟುಕೊಂಡಿದ್ದ ಗಂಡ, ತನ್ನ ಪತ್ನಿಗೆ ಪದೇ ಪದೇ ತವರು ಮನೆಯಿಂದ ಹಣ ತರುವಂತೆ ವರದಕ್ಷಿಣೆ ಕಿರುಕುಳ ನೀಡ್ತಿದ್ದ ಅಂತಾ ಕುಟುಂಬಸ್ಥರು ಆರೋಪಿಸಿದ್ದಾರೆ. ಜೊತೆಗೆ ಇದೇ ರೀತಿ ಕಳೆದ ರಾತ್ರಿ ಸಹ ಗಂಡ ಜಯಂತಿಗೆ ಕಿರುಕುಳ ನೀಡಿ ಕೊಲೆ ಮಾಡಿದ್ದು ಕೊಲೆಯ ನಂತರ ಪತ್ನಿಯ ಮೃತದೇಹವನ್ನ ಸರ್ಕಾರಿ ಆಸ್ಪತ್ರೆಗೆ ತಂದು ಹಾಕಿ ಎಸ್ಕೇಪ್ ಆಗಿದ್ದಾನೆ ಅಂತಾ ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಅನೈತಿಕ ಸಂಬಂಧ ವಿಚಾರವಾಗಿ ಗಂಡ ಹೆಂಡತಿ ನಡುವೆ ಗಲಾಟೆ ನಡೆಯುತ್ತಿದ್ದು ಹಲವು ಬಾರಿ ಎರಡು ಕುಟುಂಬಗಳು ಕೂತು ರಾಜಿ ಪಂಚಾಯತಿ ಮಾಡಿದ್ರಂತೆ. ಆದ್ರೆ ಎಷ್ಟೇ ಸಂಧಾನ ಮಾಡಿದರೂ ಸರಿಹೋಗದ ಗಂಡ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತೆ ಅಂತಾ ಗಂಡನೆ ಕೊಲೆ ಮಾಡಿ ಆಸ್ಪತ್ರೆಗೆ ತಂದು ಹಾಕಿ ಹೋಗಿದ್ದಾನೆ ಅಂತ ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು ಮೃತದೇಹ ನೋಡಲು ಬಂದ ಕುಟುಂಬಸ್ಥರ ಆಕ್ರಂದನ ಆಸ್ವತ್ರೆಯ ಮುಂದೆ ಮುಗಿಲು ಮುಟ್ಟಿದ್ದು ನೋಡುಗರ ಕಣ್ಣಲ್ಲಿಯೂ ಕಣ್ಣೀರು ತರಿಸುವಂತಿತ್ತು.

ಒಟ್ಟಾರೆ ನೆಮ್ಮದಿಯಾಗಿದ್ದ ಕುಟುಂಬದಲ್ಲಿ ಎದ್ದ ಅನೈತಿಕ ಸಂಬಂಧದ ಬಿರುಗಾಳಿ ಪತ್ನಿಯನ್ನೆ ಬಲಿ ಪಡೆದುಕೊಂಡಿದ್ದು ನಿಜಕ್ಕೂ ದುರಂತ. ಇನ್ನು ಈ ಸಂಬಂಧ ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು ತನಿಖೆಯ ನಂತರ ಗೃಹಿಣಿಯದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಅನ್ನೋದು ಗೊತ್ತಾಗಬೇಕಿದೆ.

ವರದಿ: ನವೀನ್, ಟಿವಿ 9, ದೇವನಹಳ್ಳಿ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು