ಮದುವೆಯಾಗಿ ವರ್ಷ ಕಳೆದರೂ ನನಗೆ ಸಿಗಬೇಕಿರುವ ಸುಖ ಸಿಗುತ್ತಿಲ್ಲ, ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಮದುವೆಯಾದ ಒಂದೇ ವರ್ಷಕ್ಕೆ ಯುವತಿ ತನ್ನ ಗಂಡನ ವಿರುದ್ಧ ಘೋರ ಆರೋಪವೊಂದನ್ನು ಮಾಡಿ ಠಾಣೆಯ ಮೆಟ್ಟಿಲೇರಿದ್ದಾಳೆ.

ಮದುವೆಯಾಗಿ ವರ್ಷ ಕಳೆದರೂ ನನಗೆ ಸಿಗಬೇಕಿರುವ ಸುಖ ಸಿಗುತ್ತಿಲ್ಲ, ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ
ಸಾಂದರ್ಭಿಕ ಚಿತ್ರ
Edited By: ಆಯೇಷಾ ಬಾನು

Updated on: Jun 08, 2023 | 3:29 PM

ಆನೇಕಲ್: ಬೆಟ್ಟದಷ್ಟು ಆಸೆ, ಕನಸುಗಳನ್ನು ಕಟ್ಟಿಕೊಂಡಿದ್ದ ಯುವತಿ ತನ್ನ ಗಂಡನ ವಿರುದ್ಧ ಘೋರ ಆರೋಪವೊಂದನ್ನು ಮಾಡಿ ಠಾಣೆಯ ಮೆಟ್ಟಿಲೇರಿದ್ದಾಳೆ. ನನಗೆ ನನ್ನ ಗಂಡನಿಂದ ಸಿಗಬೇಕಿದ್ದ ಸುಖ ಸಿಗುತ್ತಿಲ್ಲ ಎಂದು ದೂರು ದಾಖಲಿಸಿದ್ದಾಳೆ. ಆಕೆಗಿನ್ನೂ‌ 21 ವರ್ಷ, ಎಲ್ಲಾ ಯುವತಿಯರಂತೆ ಆಕೆಗೂ ತನ್ನ ಗಂಡನ ಜೊತೆ ಸುಮಧುರ ಕ್ಷಣಗಳನ್ನು ಕಳೆಯಬೇಕೆಂಬ ಹಂಬಲ ಆಸೆ ಇದೆ. ಗಂಡನ ರೂಪದಲ್ಲಿ ಒಬ್ಬ ಜೊತೆಗಾರ ಸಿಕ್ಕ ಎನ್ನುವ ಖುಷಿಯಿಂದ ತನ್ನ ಮನೆಯವರು ನೋಡಿದ ಹುಡುಗನನ್ನು ಮದುವೆಯಾದ ಯುವತಿ ಸಂಸಾರದ ಬಗ್ಗೆ ನೂರಾರು ಕನಸು ಕಂಡಿದ್ದಳು. ಆದರೆ ಆ ಕನಸುಗಳೆಲ್ಲಾ ಕನಸುಗಳಾಗಿಯೇ ಉಳಿದುಹೋಗಿದೆ ಅಂತ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.

ಹೌದು. ಇಂತಹದ್ದೊಂದು ಪ್ರಕರಣ‌ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಮಂಡ್ಯ ಮೂಲದ ಯುವತಿ, ಹಾಸನ ಮೂಲದ ಯುವಕ, ಇಬ್ಬರಿಗೆ ಕಳೆದ ವರ್ಷ ಮದುವೆ ಆಗಿದೆ. ಹುಡುಗ ಎಲೆಕ್ಟ್ರಾನಿಕ್ ಸಿಟಿಯ ಅಪಾರ್ಟ್ ಮೆಂಟ್ ಸೆಕ್ಯುರಿಟಿ ಸೂಪರವೈಸರ್ ಆಗಿ ಕೆಲಸ ಮಾಡುತ್ತಿದ್ದು, ಎಲ್ಲರ‌ ಜೊತೆಗೆ ಅನೋನ್ಯವಾಗಿದ್ದಾನೆ. ಆದರೆ ಪತ್ನಿಯ ಜತೆ ಸಲುಗೆ ಬೆಳೆಸೊದಾಗ್ಲಿ, ಲೈಂಗಿಕತೆಯಲ್ಲಿ ತೊಡೊಗೋದಾಗ್ಲಿ ಮಾಡ್ತಾ ಇಲ್ಲ ಅಂತ ಪತ್ನಿ ದೂರಿನಲ್ಲಿ ತಿಳಿಸಿದ್ದಾಳೆ.‌ ಅಲ್ಲದೇ ‌ಪ್ರೀತಿಯಿಂದ ಮಾತನಾಡಿಸೋಕೆ‌ ಸಮೀಪ ಹೋದ್ರೂ ಚಿಕ್ಕ ಚಿಕ್ಕ ವಿಚಾರಗಳನ್ನು ತೆಗೆದು ಜಗಳ‌ಮಾಡುತ್ತಾನೆ.

ಇದನ್ನೂ ಓದಿ: ಬಾಡಿಗೆಗೆ ಮನೆ ಕೊಟ್ಟಿದ್ದ ಓನರ್ ಆಂಟಿಯನ್ನೇ ತುಂಡು ತುಂಡಾಗಿ ಕತ್ತರಿಸಿದ ಬಿಹಾರ ಯುವಕರು; ಆನೇಕಲ್​ನ ಬೀಭತ್ಸ ಘಟನೆಗೆ ಟ್ವಿಸ್ಟ್

ಎಷ್ಟೂ ಅಂತ‌ ನಾನು ಸಹಿಸಲಿ, ಅದಕ್ಕೆ ವಿಚ್ಛೇದನ ಕೋರಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಆದ್ರೆ ಅದಕ್ಕೂ ಸಹಿ ಮಾಡೋದಕ್ಕೆ ಕೊರ್ಟ್ ಗೆ ಬಂದಿಲ್ಲ ಅಂತ ಯುವತಿ ದೂರಿದ್ದಾಳೆ. ಅತ್ತ ವಿಚ್ಛೇದನಾ ನೀಡಿದೆ, ಇತ್ತ ಸರಿಯಾಗಿ ಸಂಸಾರವೂ ಮಾಡದೇ ನನ್ನ ಜೀವನ ಹಾಳಾಗ್ತಿದೆ ಅದಕ್ಕೆ ನ್ಯಾಯ ಬೇಕು ಅಂತ ಯುವತಿ ಪರಪ್ಪನ ಅಗ್ರಹಾರ ಪೊಲೀಸರಿಗೆ ದೂರು ನೀಡಿದ್ದು, ಯುವಕನ ವಿರುದ್ಧ ಕ್ರಮ ಕೈಗೊಂಡು ಒಂದು ನಿರ್ಧಾರಕ್ಕೆ ತನ್ನಿ ಅಂತ ಮನವಿ‌ ಮಾಡಿಕೊಂಡಿದ್ದಾಳೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us