ಅಪ್ಪನ ಜೊತೆ ಸೇರಿ ಪತಿಯಿಂದ ಪತ್ನಿಯ ಕೊಲೆ: ಹತ್ಯೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಮೃತ ರೇಖಾ

ಕಳೆದ ಎರಡು ವರ್ಷಗಳಿಂದ ಹಣಕ್ಕಾಗಿ ದಿನನಿತ್ಯ ಕಿರುಕುಳ ಕೊಡುತ್ತಿದ್ದ ಅರೋಪ ಕೇಳಿಬಂದಿದೆ. ರೇಖಾ ಕೊಲೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದರು. ಪೋಷಕರು ಮನೆ ಬಳಿ ಬರುವಷ್ಟರಲ್ಲಿ ಕೊಲೆ ನಡೆದುಹೋಗಿದೆ.

ಅಪ್ಪನ ಜೊತೆ ಸೇರಿ ಪತಿಯಿಂದ ಪತ್ನಿಯ ಕೊಲೆ: ಹತ್ಯೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಮೃತ ರೇಖಾ
ಅಪ್ಪನ ಜೋತೆ ಪತಿ ಸೇರಿ ಪತ್ನಿಯ ಕೊಲೆ: ಕೊಲೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಮೃತ ರೇಖಾ
Edited By:

Updated on: Feb 11, 2022 | 6:06 AM

ನೆಲಮಂಗಲ: ಅಪ್ಪನ ಜೊತೆ ಪತಿ ಸೇರಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್ ಪೇಟೆಯಲ್ಲಿ ನಡೆದಿದೆ. ರೇಖಾ (30) ಮೃತ ದುರ್ದೈವಿ. ರೇಖಾ ಮಾವ ನಾರಯಣಪ್ಪ ಮತ್ತು ಪತಿ ಗಿರೀಶ್​ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ತುಮಕೂರಿನ ದಿಬ್ಬೂರು ಮೂಲದ ಮೃತ ರೇಖಾ 12 ವರ್ಷದ ಹಿಂದೆ ಗಿರೀಶ್ ಜೊತೆ ಮದುವೆಯಾಗಿತ್ತು.

ಕಳೆದ ಎರಡು ವರ್ಷಗಳಿಂದ ಹಣಕ್ಕಾಗಿ ದಿನನಿತ್ಯ ಕಿರುಕುಳ ಕೊಡುತ್ತಿದ್ದ ಅರೋಪ ಕೇಳಿಬಂದಿದೆ. ರೇಖಾ ಕೊಲೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದರು. ಪೋಷಕರು ಮನೆ ಬಳಿ ಬರುವಷ್ಟರಲ್ಲಿ ಕೊಲೆ ನಡೆದುಹೋಗಿದೆ. ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಸರ್ಕಾರಿ ಅಸ್ಪತ್ರೆಗೆ ಮೃತ ದೇಹವನ್ನು ರವಾನೆ ಮಾಡಲಾಗಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈ ಗೊರೆಗಾವ್​​ನಲ್ಲಿ ಕಾರಿನಲ್ಲಿ ಯುವತಿಯ ಶವ ಪತ್ತೆ:

ಮುಂಬೈ: ಗೊರೆಗಾವ್​​ನ ನಿರ್ಜನ ಪ್ರದೇಶದಲ್ಲಿ ಕಾರೊಂದರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಪೊಲೀಸರು (Mumbai Goregaon Police Station) ಸ್ಥಳಕ್ಕೆ ಹಾಜರಾಗಿದ್ದು, ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಗೊರೆಗಾವ್​​ನಲ್ಲಿರುವ ರಾಮ ಮಂದಿರ ಸಮೀಪ ರಸ್ತೆಯಲ್ಲಿ ಕಾರು ಪತ್ತೆಯಾಗಿದ್ದು, ಅದರಲ್ಲಿ ಗುರುತು ಸಿಗಲಾರದಷ್ಟು ಕೊಳೆತುಹೋಗಿರುವ ಸ್ಥಿತಿಯಲ್ಲಿ ಈ ಯುವತಿಯ ಶವ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ:
Human Age: ಅರವತ್ತಕ್ಕೆ ಅರಳು ಮರಳು ಎನ್ನುವುದು ಏಕೆ? ಏನಿದು 60ರ ಲೆಕ್ಕಾಚಾರ?

ಇದನ್ನೂ ಓದಿ:

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ತೀರ್ಥಯಾತ್ರಾ ಸ್ಥಳಗಳಿಗೆ ಪ್ರಯಾಣ ಕೈಗೊಳ್ಳುವ ಅವಕಾಶ ಬರಲಿದೆ

Published On - 6:28 am, Thu, 10 February 22