ಲವರ್​ಗಾಗಿ ಪತಿಗೆ ಚಟ್ಟಕಟ್ಟಿದ್ದ ಪತ್ನಿ ಪೊಲೀಸ್ ಬಲೆಗೆ: ಅಪಘಾತವೆಂದು ಬಿಂಬಿಸಿ ಗಂಡನ ಶವದೆದುರು ಹೈಡ್ರಾಮಾ ಮಾಡಿದ್ದ ಮಹಿಳೆ

ಸಿನಿಮೀಯ ಅಪರಾಧ ಕೃತ್ಯವೊಂದರಲ್ಲಿ, ಪ್ರಿಯಕರನ ಜತೆಗೂಡಿ ಪತಿಯನ್ನೇ ಕೊಲೆ ಮಾಡಿದ ಮಹಿಳೆಯೊಬ್ಬಳು ಅಪಘಾತ ಎಂದು ಬಿಂಬಿಸಿ ಹೈಡ್ರಾಮಾ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸದ್ಯ, ಪೊಲೀಸರ ತನಿಖೆಯಿಂದಾಗಿ ಕೊಲೆ ರಹಸ್ಯ ಬಯಲಾಗಿದ್ದು, ಮಹಿಳೆ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಲವರ್​ಗಾಗಿ ಪತಿಗೆ ಚಟ್ಟಕಟ್ಟಿದ್ದ ಪತ್ನಿ ಪೊಲೀಸ್ ಬಲೆಗೆ: ಅಪಘಾತವೆಂದು ಬಿಂಬಿಸಿ ಗಂಡನ ಶವದೆದುರು ಹೈಡ್ರಾಮಾ ಮಾಡಿದ್ದ ಮಹಿಳೆ
ಆರೋಪಿಗಳಾ ದೇವರಾಜ್ ಮತ್ತು ಪುಷ್ಪಾ
Image Credit source: tv9
Edited By:

Updated on: Feb 05, 2026 | 9:22 AM

ದೇವನಹಳ್ಳಿ, ಫೆಬ್ರವರಿ 5: ಪ್ರಿಯಕರನಿಗಾಗಿ ಹೆಂಡತಿಯೇ ಗಂಡನನ್ನು ಹತ್ಯೆ ಮಾಡಿ ಅಪಘಾತವೆಂದು ಬಿಂಬಿಸಿ ನಾಟಕವಾಡಿದ್ದ ಪ್ರಕರಣವನ್ನು ಸೂಲಿಬೆಲೆ ಪೊಲೀಸರು ಬಯಲಿಗೆಳೆದಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಗ್ರಾಮದಲ್ಲಿ ಜನವರಿ 24ರಂದು ನಡೆದ ಕೊಲೆ ರಹಸ್ಯ ಕೊನೆಗೂ ಬಯಲಾಗಿದ್ದು, ಮಹಿಳೆ ಪುಷ್ಪಾ ಮತ್ತು ಆಕೆಯ ಪ್ರಿಯಕರ ದೇವರಾಜ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಲವರ್ ದೇವರಾಜ್​ಗಾಗಿ ಪುಷ್ಪಾ ತನ್ನ ಪತಿ ಅಶೋಕ್ (40) ಅನ್ನು ಸಂಚು ರೂಪಿಸಿ ಕೊಲೆ ಮಾಡಿದ್ದಳು. ಇದೀಗ ಆಘಾತಕಾರಿ ರಹಸ್ಯ ಬಯಲಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿಬೀಳುವಂತೆ ಮಾಡಿದೆ.

ಜನವರಿ 24ರಂದು ಅಶೋಕ್ ಮೃತದೇಹ ಗ್ರಾಮದ ಸಮೀಪದ ರಸ್ತೆಯ ತಿರುವಿನಲ್ಲಿ ಪತ್ತೆಯಾಗಿತ್ತು. ಮೊದಲಿಗೆ ಇದೊಂದು ಅಪಘಾತವೆಂದು ಹೇಳಲಾಗಿತ್ತು. ಆದರೆ ಘಟನೆ ನಡೆದ ರೀತಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಸೂಲಿಬೆಲೆ ಪೊಲೀಸರು ತನಿಖೆ ನಡೆಸಿದಾಗ ಇದು ಪೂರ್ವಯೋಜಿತ ಕೊಲೆ ಎಂಬುದು ಬಹಿರಂಗವಾಗಿದೆ.

ಪ್ರಿಯಕರನ ಜತೆಗೂಡಿ ಗಂಡನನ್ನೇ ಹತ್ಯೆಗೈದಿದ್ದ ಪುಷ್ಪಾ

ಮೃತನ ಪತ್ನಿ ಪುಷ್ಪಾ ತನ್ನ ಪ್ರಿಯಕರ ದೇವರಾಜ್ ಹಾಗೂ ಸಹಚರರಾದ ಮುನಿಂದ್ರ ಮತ್ತು ಸಿದ್ದಪ್ಪ ಅವರ ಜೊತೆ ಸೇರಿ ಸಂಚು ರೂಪಿಸಿದ್ದಳು. ಎಣ್ಣೆ ಪಾರ್ಟಿ ಮಾಡುವ ನೆಪದಲ್ಲಿ ಅಶೋಕ್​​​ರನ್ನು ಕರೆದುಕೊಂಡು ಹೋಗಿ, ಕೆರೆಯ ಬಳಿ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಬಳಿಕ ಶವವನ್ನು ರಸ್ತೆಯ ತಿರುವಿನಲ್ಲಿ ಬಿಸಾಡಿ ಅಪಘಾತದಂತೆ ಬಿಂಬಿಸಲು ಯತ್ನಿಸಿದ್ದರು. ಪತಿಯ ಸಾವಿನ ನಂತರ ಪತ್ನಿ ಮತ್ತು ಪ್ರಿಯಕರ ಹೈಡ್ರಾಮಾ ನಡೆಸಿ ಅನುಮಾನ ತಪ್ಪಿಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಆದರೆ ಸ್ಥಳೀಯರ ಶಂಕೆ ಮೇರೆಗೆ ಪೊಲೀಸರು ತನಿಖೆ ತೀವ್ರಗೊಳಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಅರ್ಚಕ ಮಸಲತ್ತು: ಸಮಸ್ಯೆ ನಿವಾರಣೆ ನೆಪದಲ್ಲಿ ಅತ್ಯಾಚಾರ

ಸದ್ಯ, ಸೂಲಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪುಷ್ಪಾ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ಮುಂದುವರೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನವೀನ್ ಕುಮಾರ್ ಟಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us