AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಫೇಸ್‌ಬುಕ್ ಖಾತೆಯಲ್ಲಿ ಪತ್ನಿಯ ಆರ್​ಐಪಿ ಪೋಸ್ಟ್; ಮನೆಯಲ್ಲಿದ್ದ ಹೆಂಡತಿ ನಿಗೂಡವಾಗಿ ನಾಪತ್ತೆ

ಈ ಬಗ್ಗೆ ಗಂಡ ಮುನಿಕೃಷ್ಣ ಸ್ಪಷ್ಟನೆ ಕೊಟ್ಟಿದ್ದು, ನಾನು ಆರ್​ಐಪಿ ಪೋಸ್ಟ್ ಮಾಡಿಲ್ಲ ಪತ್ನಿಯೆ ಪೋಸ್ಟ್ ಮಾಡಿ ನಾಪತ್ತೆಯಾಗಿದ್ದಾಳೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಪತಿಯ ಫೇಸ್‌ಬುಕ್ ಖಾತೆಯಲ್ಲಿ ಪತ್ನಿಯ ಆರ್​ಐಪಿ ಪೋಸ್ಟ್; ಮನೆಯಲ್ಲಿದ್ದ ಹೆಂಡತಿ ನಿಗೂಡವಾಗಿ ನಾಪತ್ತೆ
ಲೀಲಾವತಿ ಮತ್ತು ಮುನಿಕೃಷ್ಣ
TV9 Web
| Edited By: |

Updated on:Feb 26, 2022 | 1:32 PM

Share

ಬೆಂಗಳೂರು: ಪತ್ನಿ ನಾಪತ್ತೆಯಾದ ಬೆನ್ನೆಲ್ಲೇ ಪತಿ ಫೇಸ್‌ಬುಕ್(Facebook) ಖಾತೆಯಲ್ಲಿ ಆರ್​ಐಪಿ(RIP) ಎಂದು ಪೋಸ್ಟ್ ಮಾಡಿದ ಘಟನೆ ಬೆಂಗಳೂರು ನಗರದ ದೊಡ್ಡಬಳ್ಳಾಪುರ ತಾಲೂಕಿನ ಊದನಹಳ್ಳಿ ಬಳಿ ನಡೆದಿದೆ. ಲೀಲಾವತಿ(24) ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಹೀಗಾಗಿ ಪತಿ ಮುನಿಕೃಷ್ಣನೇ ಲೀಲಾವತಿಯನ್ನು ಕೊಂದಿದ್ದಾನೆಂದು ಪೋಷಕರು ಗಂಭೀರ ಆರೋಪ(Allegation) ಮಾಡಿದ್ದಾರೆ. ಸದ್ಯ ಈ ಸಂಬಂಧ ದೊಡ್ಡಬಳ್ಳಾಪುರ ಮಹಿಳಾ ಠಾಣೆಗೆ ಲೀಲಾವತಿ ಪೋಷಕರು ದೂರು ನೀಡಿದ್ದಾರೆ.

ಸಂಬಂಧಿಕರ ಮನೆಗೆ ಹುಟ್ಟು ಹಬ್ಬದ ಪಾರ್ಟಿಗೆ ಹೋಗಿದಕ್ಕೆ ಗಂಡ‌- ಹೆಂಡತಿ ನಡುವೆ ಜಗಳವಾಗಿದೆ. ಬೇಡ ಅಂದರು ಬರ್ತಡೆಗೆ ಹೋಗಿದ್ದಿಯಾ ಎಂದು ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಜಗಳದ ನಂತರ ಮನೆಯಲ್ಲಿದ್ದ ಪತ್ನಿ ಮೊಬೈಲ್ ಸ್ವಿಚ್ ಆಫ್​ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಹೀಗಾಗಿ ಗಂಡನೆ ಕೊಲೆ ಮಾಡಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರಬಹುದು ಎಂದು ಗೃಹಿಣಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಈ ಬಗ್ಗೆ ಗಂಡ ಮುನಿಕೃಷ್ಣ ಸ್ಪಷ್ಟನೆ ಕೊಟ್ಟಿದ್ದು, ನಾನು ಆರ್​ಐಪಿ ಪೋಸ್ಟ್ ಮಾಡಿಲ್ಲ ಪತ್ನಿಯೆ ಪೋಸ್ಟ್ ಮಾಡಿ ನಾಪತ್ತೆಯಾಗಿದ್ದಾಳೆ ಎಂದು ಪ್ರತ್ಯಾರೋಪ ಮಾಡಿದ್ದಾರೆ. ಒಟ್ಟಾರೆ ಗಂಡ- ಹೆಂಡತಿ ಮತ್ತು ಪೇಸ್ಬುಕ್ ಪೋಸ್ಟ್ ಜಗಳ ಪೊಲೀಸರಿಗೆ ತಲೆನೋವಾಗಿದೆ. ಸದ್ಯ ನಾಪತ್ತೆಯಾಗಿರುವ ಗೃಹಿಣಿ ಲೀಲಾವತಿಗಾಗಿ ಪೊಲೀಸರು, ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾರೆ.

ಗಲಾಟೆ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಕೊಲೆಗೈದ ಪತಿ

ಗಲಾಟೆ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಪತಿ ಕೊಲೆಗೈದ ಘಟನೆ ಬೆಂಗಳೂರಿನ ಗೋವಿಂದಪುರದ ಭೈರಪ್ಪ ಲೇಔಟ್​ನಲ್ಲಿ ನಡೆದಿದೆ. ಪತ್ನಿ ಆಯೇಷಾ ಬಾನು ತನ್ನನ್ನು ಸೇರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಪತಿ, ಎಷ್ಟೇ ರಾಜಿ ಪಂಚಾಯತಿ ಮಾಡಿದ್ದರೂ ಸೇರದಿದ್ದಕ್ಕೆ ಕೊಲೆ ಮಾಡಿದ್ದಾನೆ. ಆರೋಪಿ ಮುಜಾಮಿಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳದ ಕನ್ಯಾಡಿ ಬಳಿ ದಿನೇಶ್ ಕೊಲೆ ಪ್ರಕರಣ; ಟಿವಿ9ಗೆ ಹಲ್ಲೆ ಮಾಡಿದ ಸಿಸಿಟಿವಿ ದೃಶ್ಯ ಲಭ್ಯ

Viral Video: 7 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೀದಿ ನಾಯಿಗೆ ಆರತಿ ಎತ್ತಿ ಸ್ವಾಗತ!; ನೀವೂ ಈ ವಿಡಿಯೋ ಕಣ್ತುಂಬಿಕೊಳ್ಳಿ

Published On - 1:04 pm, Sat, 26 February 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್