AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಫೇಸ್‌ಬುಕ್ ಖಾತೆಯಲ್ಲಿ ಪತ್ನಿಯ ಆರ್​ಐಪಿ ಪೋಸ್ಟ್; ಮನೆಯಲ್ಲಿದ್ದ ಹೆಂಡತಿ ನಿಗೂಡವಾಗಿ ನಾಪತ್ತೆ

ಈ ಬಗ್ಗೆ ಗಂಡ ಮುನಿಕೃಷ್ಣ ಸ್ಪಷ್ಟನೆ ಕೊಟ್ಟಿದ್ದು, ನಾನು ಆರ್​ಐಪಿ ಪೋಸ್ಟ್ ಮಾಡಿಲ್ಲ ಪತ್ನಿಯೆ ಪೋಸ್ಟ್ ಮಾಡಿ ನಾಪತ್ತೆಯಾಗಿದ್ದಾಳೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಪತಿಯ ಫೇಸ್‌ಬುಕ್ ಖಾತೆಯಲ್ಲಿ ಪತ್ನಿಯ ಆರ್​ಐಪಿ ಪೋಸ್ಟ್; ಮನೆಯಲ್ಲಿದ್ದ ಹೆಂಡತಿ ನಿಗೂಡವಾಗಿ ನಾಪತ್ತೆ
ಲೀಲಾವತಿ ಮತ್ತು ಮುನಿಕೃಷ್ಣ
TV9 Web
| Edited By: |

Updated on:Feb 26, 2022 | 1:32 PM

Share

ಬೆಂಗಳೂರು: ಪತ್ನಿ ನಾಪತ್ತೆಯಾದ ಬೆನ್ನೆಲ್ಲೇ ಪತಿ ಫೇಸ್‌ಬುಕ್(Facebook) ಖಾತೆಯಲ್ಲಿ ಆರ್​ಐಪಿ(RIP) ಎಂದು ಪೋಸ್ಟ್ ಮಾಡಿದ ಘಟನೆ ಬೆಂಗಳೂರು ನಗರದ ದೊಡ್ಡಬಳ್ಳಾಪುರ ತಾಲೂಕಿನ ಊದನಹಳ್ಳಿ ಬಳಿ ನಡೆದಿದೆ. ಲೀಲಾವತಿ(24) ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಹೀಗಾಗಿ ಪತಿ ಮುನಿಕೃಷ್ಣನೇ ಲೀಲಾವತಿಯನ್ನು ಕೊಂದಿದ್ದಾನೆಂದು ಪೋಷಕರು ಗಂಭೀರ ಆರೋಪ(Allegation) ಮಾಡಿದ್ದಾರೆ. ಸದ್ಯ ಈ ಸಂಬಂಧ ದೊಡ್ಡಬಳ್ಳಾಪುರ ಮಹಿಳಾ ಠಾಣೆಗೆ ಲೀಲಾವತಿ ಪೋಷಕರು ದೂರು ನೀಡಿದ್ದಾರೆ.

ಸಂಬಂಧಿಕರ ಮನೆಗೆ ಹುಟ್ಟು ಹಬ್ಬದ ಪಾರ್ಟಿಗೆ ಹೋಗಿದಕ್ಕೆ ಗಂಡ‌- ಹೆಂಡತಿ ನಡುವೆ ಜಗಳವಾಗಿದೆ. ಬೇಡ ಅಂದರು ಬರ್ತಡೆಗೆ ಹೋಗಿದ್ದಿಯಾ ಎಂದು ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಜಗಳದ ನಂತರ ಮನೆಯಲ್ಲಿದ್ದ ಪತ್ನಿ ಮೊಬೈಲ್ ಸ್ವಿಚ್ ಆಫ್​ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಹೀಗಾಗಿ ಗಂಡನೆ ಕೊಲೆ ಮಾಡಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರಬಹುದು ಎಂದು ಗೃಹಿಣಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಈ ಬಗ್ಗೆ ಗಂಡ ಮುನಿಕೃಷ್ಣ ಸ್ಪಷ್ಟನೆ ಕೊಟ್ಟಿದ್ದು, ನಾನು ಆರ್​ಐಪಿ ಪೋಸ್ಟ್ ಮಾಡಿಲ್ಲ ಪತ್ನಿಯೆ ಪೋಸ್ಟ್ ಮಾಡಿ ನಾಪತ್ತೆಯಾಗಿದ್ದಾಳೆ ಎಂದು ಪ್ರತ್ಯಾರೋಪ ಮಾಡಿದ್ದಾರೆ. ಒಟ್ಟಾರೆ ಗಂಡ- ಹೆಂಡತಿ ಮತ್ತು ಪೇಸ್ಬುಕ್ ಪೋಸ್ಟ್ ಜಗಳ ಪೊಲೀಸರಿಗೆ ತಲೆನೋವಾಗಿದೆ. ಸದ್ಯ ನಾಪತ್ತೆಯಾಗಿರುವ ಗೃಹಿಣಿ ಲೀಲಾವತಿಗಾಗಿ ಪೊಲೀಸರು, ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾರೆ.

ಗಲಾಟೆ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಕೊಲೆಗೈದ ಪತಿ

ಗಲಾಟೆ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಪತಿ ಕೊಲೆಗೈದ ಘಟನೆ ಬೆಂಗಳೂರಿನ ಗೋವಿಂದಪುರದ ಭೈರಪ್ಪ ಲೇಔಟ್​ನಲ್ಲಿ ನಡೆದಿದೆ. ಪತ್ನಿ ಆಯೇಷಾ ಬಾನು ತನ್ನನ್ನು ಸೇರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಪತಿ, ಎಷ್ಟೇ ರಾಜಿ ಪಂಚಾಯತಿ ಮಾಡಿದ್ದರೂ ಸೇರದಿದ್ದಕ್ಕೆ ಕೊಲೆ ಮಾಡಿದ್ದಾನೆ. ಆರೋಪಿ ಮುಜಾಮಿಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳದ ಕನ್ಯಾಡಿ ಬಳಿ ದಿನೇಶ್ ಕೊಲೆ ಪ್ರಕರಣ; ಟಿವಿ9ಗೆ ಹಲ್ಲೆ ಮಾಡಿದ ಸಿಸಿಟಿವಿ ದೃಶ್ಯ ಲಭ್ಯ

Viral Video: 7 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೀದಿ ನಾಯಿಗೆ ಆರತಿ ಎತ್ತಿ ಸ್ವಾಗತ!; ನೀವೂ ಈ ವಿಡಿಯೋ ಕಣ್ತುಂಬಿಕೊಳ್ಳಿ

Published On - 1:04 pm, Sat, 26 February 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ