ಮದುವೆಯ ಬಳಿಕವೂ ಸಂಬಂಧಿಕನ ಜೊತೆ ಪ್ರೀತಿ; ಬಾಡಿಗೆ ಮನೆಯಲ್ಲಿ ಪ್ರಿಯಕರನ ಜೊತೆ ಆತ್ಮಹತ್ಯೆಗೆ ಶರಣಾದ ಮಹಿಳೆ

ಆತ್ಮಹತ್ಯೆ ಮಾಡಿಕೊಂಡ ಜ್ಯೋತಿ ಮದುವೆಯಾದ ನಂತರವು ಸಂಬಂಧಿಕನಾಗಿದ್ದ ಬಸವರಾಜ್ ಜೊತೆ ಪ್ರೀತಿಯಲ್ಲಿದ್ದರು. ಪ್ರೀತಿಯಿಂದಾಗಿ ಮನೆಬಿಟ್ಟು ಪ್ರಿಯಕರನ ಜೊತೆ ಬಂದಿದ್ದರು.

ಮದುವೆಯ ಬಳಿಕವೂ ಸಂಬಂಧಿಕನ ಜೊತೆ ಪ್ರೀತಿ; ಬಾಡಿಗೆ ಮನೆಯಲ್ಲಿ ಪ್ರಿಯಕರನ ಜೊತೆ ಆತ್ಮಹತ್ಯೆಗೆ ಶರಣಾದ ಮಹಿಳೆ
ಬಸವರಾಜ್, ಜ್ಯೋತಿ
Follow us
| Updated By: ಆಯೇಷಾ ಬಾನು

Updated on:Jan 18, 2022 | 9:25 AM

ದೇವನಹಳ್ಳಿ: ಮದುವೆಯಾಗಿದ್ದ ಮಹಿಳೆ, ಪ್ರಿಯಕರ ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಶಾಂತಿನಗರದ ಮನೆಯಲ್ಲಿ ನಡೆದಿದೆ. ರಾಯಚೂರಿನ ಬಸವರಾಜ್(28), ಜ್ಯೋತಿ(26) ಆತ್ಮಹತ್ಯೆ ಮಾಡಿಕೊಂಡವರು.

ಆತ್ಮಹತ್ಯೆ ಮಾಡಿಕೊಂಡ ಜ್ಯೋತಿ ಮದುವೆಯಾದ ನಂತರವು ಸಂಬಂಧಿಕನಾಗಿದ್ದ ಬಸವರಾಜ್ ಜೊತೆ ಪ್ರೀತಿಯಲ್ಲಿದ್ದರು. ಪ್ರೀತಿಯಿಂದಾಗಿ ಮನೆಬಿಟ್ಟು ಪ್ರಿಯಕರನ ಜೊತೆ ಬಂದಿದ್ದರು. ಆದ್ರೆ ಈಗ ಜ್ಯೋತಿ ಹಾಗೂ ಆಕೆಯ ಪ್ರಿಯಕರ ಇಬ್ಬರೂ ನೇಣಿಗೆ ಶರಣಾಗಿದ್ದಾರೆ. ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

20 ದಿನಗಳಿಂದಷ್ಟೆ ಗಂಡ ಹೆಂಡತಿ ಅಂತ ಹೇಳಿ ಬಸವರಾಜ್ ಮತ್ತು ಜ್ಯೋತಿ ಮನೆ ಬಾಡಿಗೆಗೆ ಪಡೆದುಕೊಂಡಿದ್ರು. ಆದ್ರೆ ಬಾಡಿಗೆ ಮನೆಯಲ್ಲೆ ಕಳೆದ ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಿಂದ ದುರ್ವಾಸನೆ ಬರ್ತಿದ್ದನ್ನ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಹಿನ್ನೆಲೆ ಸ್ಥಳಕ್ಕೆ ಬಂದ ದೇವನಹಳ್ಳಿ ಪೊಲೀಸರು ಮನೆ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈದ್ಯನ ಮನೆಗೆ ನುಗ್ಗಿ ದರೋಡೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ವೈದ್ಯ ರಾಜಕುಮಾರ್ ಮನೆಗೆ ನುಗ್ಗಿ ಚಾಕು, ಗನ್ ತೋರಿಸಿ ದರೋಡೆ ಮಾಡಲಾಗಿದೆ. ವೈದ್ಯನ ಅಳಿಯ, ಮಗಳ ಕತ್ತಿನಲ್ಲಿದ್ದ ಚಿನ್ನದ ಸರಗಳು, ನಗದು ದೋಚಿ ನಾಲ್ವರು ದರೋಡೆಕೋರರು ಪರಾರಿಯಾಗಿದ್ದಾರೆ. ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೈರ್ ಸ್ಫೋಟಗೊಂಡು ಕಾರು ಅಪಘಾತ, ಇಬ್ಬರ ದುರ್ಮರಣ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಸೇತುವೆ ಬಳಿ ಭೀಕರ ಅಪಘಾತ ಸಂಭವಿಸಿದೆ.ಟೈರ್ ಸ್ಫೋಟಗೊಂಡು ಕಾರು ಅಪಘಾತವಾಗಿದ್ದು ಕಾರಿನಲ್ಲಿದ್ದ ರಾಜಶೇಖರ್, ಮಣಿಕಂಠ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Gold Rate: ಇಂದು ಆಭರಣ ಖರೀದಿಸುವವರು ಚಿನ್ನ, ಬೆಳ್ಳಿ ದರ ಎಷ್ಟಿದ ಅಂತ ನೋಡಿ

Published On - 8:59 am, Tue, 18 January 22

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ