AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ತಾಯಿ ಇಲ್ಲದ ತಬ್ಬಲಿಯಾದ ಇಬ್ಬರು ಮಕ್ಕಳು

ಎಂ.ಎ ಪದವೀಧರೆಯಾದ ಮೃತ ಮೀನಾ ನೆಲಮಂಗಲ ಸಿದ್ದಗಂಗಾ ಕಾಲೇಜ್ನಲ್ಲಿ ಎಂಎ ಕನ್ನಡ ಲಚ್ಚರ್ ಕೂಡ ಆಗಿದ್ರು. ಜೊತೆಗೆ ಕೆ‌ಎ‌ಎಸ್ ಸೇರಿದಂತೆ ಸರ್ಕಾರಿ ಉನ್ನತ ಹುದ್ದೆ ಆಕಾಂಕ್ಷಿಯಾಗಿದ್ದರು. ಆದರೆ ದುರದೃಷ್ಟವಶಾತ್ ಸತತ ಕೆಎಎಸ್ ಪರೀಕ್ಷೆ ಬರೆದು ಅನುತ್ತೀರ್ಣಗೊಂಡಿದ್ದರು. ಹೀಗಾಗಿ ಯಾವುದೇ ಕೆಲಸಕ್ಕೆ ಆಯ್ಕೆಯಾಗದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಮೀನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ತಾಯಿ ಇಲ್ಲದ ತಬ್ಬಲಿಯಾದ ಇಬ್ಬರು ಮಕ್ಕಳು
ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
TV9 Web
| Edited By: |

Updated on: Jul 25, 2021 | 1:27 PM

Share

ನೆಲಮಂಗಲ: ಮಾನಸಿಕ ಖಿನ್ನತೆಯಿಂದ ಮಹಿಳೆ ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ಮೀನಾ(42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಎಂ.ಎ ಪದವೀಧರೆಯಾದ ಮೃತ ಮೀನಾ ನೆಲಮಂಗಲ ಸಿದ್ದಗಂಗಾ ಕಾಲೇಜ್ನಲ್ಲಿ ಎಂಎ ಕನ್ನಡ ಲಚ್ಚರ್ ಕೂಡ ಆಗಿದ್ರು. ಜೊತೆಗೆ ಕೆ‌ಎ‌ಎಸ್ ಸೇರಿದಂತೆ ಸರ್ಕಾರಿ ಉನ್ನತ ಹುದ್ದೆ ಆಕಾಂಕ್ಷಿಯಾಗಿದ್ದರು. ಆದರೆ ದುರದೃಷ್ಟವಶಾತ್ ಸತತ ಕೆಎಎಸ್ ಪರೀಕ್ಷೆ ಬರೆದು ಅನುತ್ತೀರ್ಣಗೊಂಡಿದ್ದರು. ಹೀಗಾಗಿ ಯಾವುದೇ ಕೆಲಸಕ್ಕೆ ಆಯ್ಕೆಯಾಗದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಮೀನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಮೀನಾಳಿಗೆ ಎರಡು ಮಕ್ಕಳಿದ್ದು ದಾಂಪತ್ಯ ಜೀವನ ಚನ್ನಾಗಿತ್ತು. ಕೆಲ ಸ್ಥಳೀಯರ ಮಾಹಿತಿ ಪ್ರಕಾರ ಸಾಕಷ್ಟು ಜನರಿಗೆ ಹಣ ಸಹಾಯ ಮಾಡಿದ್ದು ಆ ಹಣವು ವಾಪಸ್ ಬಂದಿರಲಿಲ್ಲ. ಕೇಳಿದ್ರೆ ಲಾಕ್ಡೌನ್, ಕೊವಿಡ್ ಎಂಬ ನೆಪ ಹೇಳುತ್ತಿದ್ದರು. ಇತ್ತೀಚೆಗೆ ಲಚ್ಚರ್ ಹುದ್ದೆ ತೊರೆದು ಮಕ್ಕಳನ್ನ ನೋಡಿಕೊಳ್ಳುತ್ತಿದ್ರು. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ: 17 ವರ್ಷದ ಹುಡುಗನ ಬಲಿಪಡೆದ ಪ್ರೀತಿ; ಗುಪ್ತಾಂಗ ಕತ್ತರಿಸಿ, ಥಳಿಸಿ ಹತ್ಯೆ ಮಾಡಿದ ಹುಡುಗಿಯ ಕುಟುಂಬದವರು

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ