ಬೆಂಗಳೂರಿನಲ್ಲಿ ಪೇಂಟ್ ಮಿಕ್ಸರ್​ಗೆ ಜಡೆ ಸಿಲುಕಿ ಮಹಿಳೆ ತಲೆ ಪೀಸ್​ ಪೀಸ್!

ಬಣ್ಣ ಬೆರೆಸುವ ಪೇಂಟ್ ಮಿಕ್ಸರ್​ಗೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ. ಈ ಘಟನೆ ಹೇಗಾಯ್ತು? ಹೇಗೆ ಬೆಳಕಿಗೆ ಬಂತು ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಪೇಂಟ್ ಮಿಕ್ಸರ್​ಗೆ ಜಡೆ ಸಿಲುಕಿ ಮಹಿಳೆ ತಲೆ ಪೀಸ್​ ಪೀಸ್!
ಶ್ವೇತಾ, ಮೃತ ಮಹಿಳೆ
Edited By:

Updated on: Nov 09, 2023 | 10:38 AM

ಬೆಂಗಳೂರು, (ನವೆಂಬರ್ 09): ಬಣ್ಣ ಬೆರೆಸುವ ಪೇಂಟ್ ಮಿಕ್ಸರ್​ಗೆ (Paint Mixing Grandeur) ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆಯಲ್ಲಿ ನಡೆದಿದೆ. 33 ವರ್ಷದ ಶ್ವೇತಾ ಮೃತ ದುರ್ದೈವಿ. ಮಲ್ಲತ್ತಹಳ್ಳಿಯಲ್ಲಿ ವಾಸವಿದ್ದ ಶ್ವೇತಾ, ಬೆಂಗಳೂರಿನ ನೆಲಗದರನಹಳ್ಳಿಯಲ್ಲಿರುವ ಶ್ರೀಪೇಂಟ್ಸ್ ಕಾರ್ಖಾನೆ ಕೆಲಸ ಮಾಡುತ್ತಿದ್ದರು. ಆದ್ರೆ, ನಿನ್ನೆ ಬಣ್ಣ ಬೆರೆಸುವ ಗ್ರೈಂಡರ್​ನಲ್ಲಿ ಜಡೆ ಸಿಲುಕಿದ ಪರಿಣಾಮ ಶ್ವೇತಾ ತಲೆ ಕತ್ತರಿಸಿ ಹೋಗಿದೆ. ಇದರಿಂದ ಮಹಿಳೆ ಸಾವನ್ನಪ್ಪಿದ್ದಾಳೆ.

ಬಣ್ಣ ಗಟ್ಟಿಯಾಗುತ್ತಿದ್ದರಿಂದ ಚೆಕ್ ಮಾಡಲು ಗ್ರೈಂಡರ್​ ಒಳಗೆ ಬಗ್ಗಿದಾಗ ಮಹಿಳೆಯ ಜಡೆ ಸಿಲುಕಿದೆ. ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಸಹ ಗ್ರೈಂಡರ್ ಸೌಂಡ್ ಗೆ ಯಾರಿಗೂ ಕೇಳಿಸಿಲ್ಲ. ಮಹಿಳೆ ಗ್ರೈಂಡರ್​ಗೆ ಸಿಲುಕಿ ಮೃತಪಟ್ಟ ಬಳಿಕ ಉಳಿದ ಕೆಲಸಗಾರರು ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಗ್ರೈಂಡರ್ ಸ್ಪೀಡ್​ಗೆ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ. ಈ ಬಗ್ಗೆ ಪ್ರಕರಣ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಳ್ಳತನ, ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಾಗಲಗುಂಟೆ ಮಾರಮ್ಮನ ಜಾತ್ರೆಯಲ್ಲಿ ಪುಂಡರ ಪುಂಡಾಟ

ಬೆಂಗಳೂರು: ಪ್ರಸಿದ್ಧ ಬಾಗಲಗುಂಟೆ ಮಾರಮ್ಮನ ಜಾತ್ರೆಯಲ್ಲಿ ವ್ಯಾಪಾರಸ್ಥರ ಮೇಲೆ ಪುಂಡರು ಪುಂಡಾಟ ಮೆರೆದಿದ್ದಾರೆ. ಸಿಕ್ಕ ಸಿಕ್ಕ ವಸ್ತುಗಳನ್ನ ಕಿತ್ತುಕೊಂಡು ವ್ಯಾಪಾರಸ್ಥರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಹಲ್ಲೆಗೆ ಮುಂದಾಗಿದ್ದಾರೆ. ಪುಂಡರ ದೌರ್ಜನ್ಯ ವಿಡಿಯೋ ಸ್ಥಳೀಯರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು. ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us