AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಆ್ಯಂಬುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ, ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ

ಗೌರಿಬಿದನೂರು ತಾಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದ ರೂಪ ಅವರು ಕಂಟನಕುಂಟೆ ಬಳಿ ಆ್ಯಂಬುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ವತ್ರೆಗೆ ಕರೆತಂದು ತಾಯಿ ಮಗುವಿನ ಹಾರೈಕೆ ಮಾಡಲಾಗಿದೆ.

ದೇವನಹಳ್ಳಿ: ಆ್ಯಂಬುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ, ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ
ಆ್ಯಂಬುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ
TV9 Web
| Edited By: |

Updated on: Jul 26, 2023 | 3:03 PM

Share

ದೇವನಹಳ್ಳಿ, ಜುಲೈ 26: ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಬಳಿ ಆ್ಯಂಬುಲೆನ್ಸ್​ನಲ್ಲಿ(Ambulance) ಮಗುವಿಗೆ ಮಹಿಳೆ ಜನ್ಮ ನೀಡಿದ್ದಾರೆ. ಗೌರಿಬಿದನೂರು ತಾಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದ ರೂಪ ಅವರಿಗೆ ಇಂದು ಬೆಳಗ್ಗೆ 04:30 ರ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಕುಟುಂಬಸ್ಥರು ಆ್ಯಂಬುಲೆನ್ಸ್ ಮೂಲಕ ಆಸ್ವತ್ರೆಗೆ ದೊಡ್ಡಬಳ್ಳಾಪುರಕ್ಕೆ ಕರೆತರುತ್ತಿದ್ದರು. ಈ ವೇಳೆ ಆ್ಯಂಬುಲೆನ್ಸ್​ನಲ್ಲಿಯೇ ಹೆರಿಗೆ ಆಗಿದೆ. ಮಹಿಳೆಗೆ ನೋವು ಹೆಚ್ಚಾಗುತ್ತಿದ್ದಂತೆಯೇ ರಸ್ತೆ ಬದಿಯಲ್ಲಿ ಆ್ಯಂಬುಲೆನ್ಸ್ ನಿಲ್ಲಿಸಿ ಸಿಬ್ಬಂದಿ ಹೇಮಾವತಿ ಎಂಬುವವರು ಹೆರಿಗೆ ಮಾಡಿಸಿದ್ದಾರೆ. ನಂತರ ಆಸ್ವತ್ರೆಗೆ ಕರೆತಂದು ತಾಯಿ ಮಗುವಿನ ಹಾರೈಕೆ ಮಾಡಲಾಗಿದೆ. ಸುರಕ್ಷಿತ ಹೆರಿಗೆ ಮಾಡಿಸಿದ ಸಿಬ್ಬಂದಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ, ಕುಟುಂಬಸ್ಥರ ಪ್ರತಿಭಟನೆ

ಮಂಗಳೂರಿನ ಕುಂಟಿಕಾನ ಬಳಿಯ ಎಜೆ ಮೆಡಿಕಲ್ ಕಾಲೇಜು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಯುತ್ತಿದೆ. ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾರೆಂದು ಆರೋಪಿಸಿ ಮಂಗಳೂರಿನ ಎಜೆ ಆಸ್ಪತ್ರೆಗೆ ಸಂಬಂಧಿಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಯಿಂದ ಶವ ಸ್ಥಳಾಂತರಿಸಲು ಬಿಡದೆ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಪೊಲೀಸರು, ಪ್ರತಿಭಟನಾಕಾರರ ನಡುವೆ ವಾಗ್ವಾದ, ತಳ್ಳಾಟ ನೂಕಾಟವಾಗಿದೆ.

ಇದನ್ನೂ ಓದಿ: Bengaluru Metro: ಮೆಟ್ರೋ ಪಿಲ್ಲರ್ ಬಿದ್ದು ಮಹಿಳೆ, ಮಗು ಮೃತಪಟ್ಟ ಪ್ರಕರಣ; 10 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಬಾಣಂತಿ ಶಿಲ್ಪಾ ಆಚಾರ್ಯ(36) ಅವರಿಗೆ ಜುಲೈ 2ರಂದು ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿಲ್ಪಾಗೆ ಶಸ್ತ್ರಚಿಕಿತ್ಸೆ ನಡೆಸಿ ಮಗು ತೆಗೆಯಬೇಕು ಎಂದು ಡ್ಯೂಟಿ ಡಾಕ್ಟರ್​ ತಿಳಿಸಿದ್ದರು. ಭಾನುವಾರವಾಗಿದ್ದರಿಂದ ವೈದ್ಯೆ ವೀಣಾ ಕರ್ತವ್ಯಕ್ಕೆ ಬರಲ್ಲ ಎಂದಿದ್ದರು. ಡಾ.ವೀಣಾ ಅನುಪಸ್ಥಿತಿಯಲ್ಲಿ ಶಿಲ್ಪಾಗೆ ಬೇರೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಬಳಿಕ ಹೆಣ್ಣು ಮಗು ಜನಿಸಿದೆ, ಆದರೆ ಗರ್ಭಕೋಶ ತೆಗೆಯಬೇಕು ಎಂದು ವೈದ್ಯರು ಹೇಳಿದರು. ಇದೆಲ್ಲದರ ಬಳಿಕ ನಿನ್ನೆ ಸಂಜೆ ಶಿಲ್ಪಾ ಆಚಾರ್ಯ ಮೃತಪಟ್ಟಿರುವುದಾಗಿ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಶಿಲ್ಪಾ ಮೃತಪಟ್ಟಿರುವುದಾಗಿ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಪ್ರತಿಭಟನಾನಿರತ ಸಂಬಂಧಿಕರನ್ನು ಕದ್ರಿ ಠಾಣೆ ಪೊಲೀಸರು ಚದುರಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ