AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತಮ್ಮ ಹತ್ಯೆಯಾಗಿರುವುದು ಮೊದಲು ನೋಡಿದ್ದು ಆಕೆಯ ಮಕ್ಕಳು, ಕೊಲೆಯಾಗಿದ್ದು ಏಕೆ?

ಮಕ್ಕಳು ಎಂದಿನಂತೆ ಶಾಲೆ ಮುಗಿಸಿ ಮನೆಗೆ ಬಂದಿದ್ರು, ಮನೆಗೆ ಬಂದವರೇ ಅಮ್ಮ ಅಮ್ಮ ಎಂದು ಕರೆದಿದ್ರು. ಆದ್ರೆ ಆಕೆ ಮನೆಯ ಹಾಲ್ ನಲ್ಲಿ ಕೊಲೆಯಾಗಿ ಬಿದ್ದಿದ್ರು. ಮಹಿಳೆಯನ್ನ ಹಾಡಹಗಲೇ ದುಷ್ಕರ್ಮಿಗಳು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

ಹೆತ್ತಮ್ಮ ಹತ್ಯೆಯಾಗಿರುವುದು ಮೊದಲು ನೋಡಿದ್ದು ಆಕೆಯ ಮಕ್ಕಳು, ಕೊಲೆಯಾಗಿದ್ದು ಏಕೆ?
ಹೆತ್ತಮ್ಮ ಹತ್ಯೆಯಾಗಿರುವುದು ಮೊದಲು ನೋಡಿದ್ದು ಆಕೆಯ ಮಕ್ಕಳು, ಕೊಲೆಯಾಗಿದ್ದು ಏಕೆ?
ರಾಮು, ಆನೇಕಲ್​
| Edited By: ಸಾಧು ಶ್ರೀನಾಥ್​|

Updated on: Jan 05, 2024 | 12:24 PM

Share

ಹಾಡಹಗಲೇ ಗೃಹಿಣಿಯೋರ್ವಳನ್ನ (woman) ಕತ್ತು ಹಿಸುಕಿ ಹತ್ಯೆ (murder) ಮಾಡಿರುವ ಘಟನೆ ಸಿಲಿಕಾನ್ ವ್ಯಾಲಿ ಖ್ಯಾತಿಯ ಎಲೆಕ್ಟ್ರಾನಿಕ್ ಸಿಟಿಯ (Electronic City) ಮಗ್ಗಲಿನಲ್ಲಿಯೇ ನಡೆದಿದೆ. ಇದು ಐಟಿಬಿಟಿ ಸಿಲಿಕಾನ್​​ ಸಿಟಿಯ ಜನರನ್ನ ಬೆಚ್ಚಿ ಬೀಳಿಸಿದೆ. ಹಾಡಹಗಲೇ ಈ ರೀತಿಯ ಹತ್ಯೆ ನಡೆದ್ರೆ ನಮ್ಮ‌ಜೀವಕ್ಕೂ ರಕ್ಷಣೆ ಇದ್ಯಾ ಎನ್ನುವ ಪ್ರಶ್ನೆ ಜನರನ್ನ ಕಾಡ್ತಿದೆ.‌ ಅಷ್ಟಕ್ಕೂ ಹತ್ಯೆ ನಡೆದಿದ್ದು ಯಾವಾಗ, ಮೃತದೇಹವನ್ನ ಮೊದಲು ನೋಡಿದ್ದು ಯಾರು ಅಂತ ಕೇಳಿದ್ರೆ ನಿಮ್ಗೆ ಬೇಜಾರ್ ಆಗುತ್ತೆ.

ಮಕ್ಕಳು ಎಂದಿನಂತೆ ಶಾಲೆ ಮುಗಿಸಿ ಮನೆಗೆ ಬಂದಿದ್ರು, ಮನೆಗೆ ಬಂದವರೇ ಅಮ್ಮ ಅಮ್ಮ ಎಂದು ಕರೆದಿದ್ರು. ಆದ್ರೆ ಆಕೆ ಮನೆಯ ಹಾಲ್ ನಲ್ಲಿ ಕೊಲೆಯಾಗಿ ಬಿದ್ದಿದ್ರು. ಹೌದು ಮೇಲಿನ ಪೋಟೋದಲ್ಲಿ ಕಾಣ್ತಾ ಇರೋ ಲೇಡಿಯ ಹೆಸರು ನೀಲಂ (30) ಅಂತ, ಇದೇ ಮಹಿಳೆಯನ್ನ ಹಾಡಹಗಲೇ ದುಷ್ಕರ್ಮಿಗಳು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

ಮೂಲತಃ ಉತ್ತರ ಪ್ರದೇಶ ಮೂಲದವರಾಗಿದ್ದು, ಕಳೆದ ಕೆಲ ವರ್ಷಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬೆಟ್ಟದಾಸನಪುರದ ಸಾಯಿ ಶಕ್ತಿ ಬಡಾವಣೆಯ ಗಂಗಾ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಿದ್ರು. ಪತಿ ಹಾರ್ಡ್ ವೇರ್ ಶಾಪ್ ಜೊತೆಗೆ ಪೈಂಟಿಂಗ್ ಕಾಂಟ್ರಾಕ್ಟ್ ಕೆಲಸ ಮಾಡಿಕೊಂಡಿದ್ದ. ಎಂದಿನಂತೆ ಮಕ್ಕಳು ಶಾಲೆಗೆ ಹೋಗಿದ್ರೆ, ಪತಿ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ. ಮನೆಯಲ್ಲಿ ಮಹಿಳೆ ನೀಲಂ ಮಾತ್ರ ಒಬ್ಬಂಟಿಯಾಗಿದ್ದಾಗ ಯಾರೋ ಅಪರಿಚಿತರು ಮನೆಗೆ ನುಗ್ಗಿ ಮಹಿಳೆಯ ಹತ್ಯೆ ಮಾಡಿದ್ದಾರೆ.

Also Read: ಹಾಯಾಗಿದ್ದ ದಂಪತಿ ಬಾಳಲ್ಲಿ ಬಿರುಗಾಳಿಯಂತೆ ಮೂರನೆಯವ ಎಂಟ್ರಿ ಕೊಟ್ಟ, ಗರ್ಭಿಣಿಯಾದ ಬಳಿಕ ನಡು ನೀರಲ್ಲಿ ಕೈಬಿಟ್ಟ

ಸದ್ಯ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಶ್ವಾನದಳ ಹಾಗೂ ಎಫ್ಎಸ್ಎಲ್ ತಂಡ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕವಾಗಿ ಪರಿಚಿತರೇ ಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ಹಾಗೂ ಆಕೆಯ ಕಾಲ್ ಡಿಟೈಲ್ಸ್ ಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಪ್ರಕರಣ ಆರೋಪಿಯನ್ನ ಬಂಧಿಸಲು ವಿಶೇಷ ತಂಡ ಮಾಡಲಾಗಿದೆ.

ಇನ್ನು ಈ ಕೊಲೆ ಲಾಭಕ್ಕಾಗಿ ಅಲ್ಲ, ಬಹುಷಃ ವೈಯಕ್ತಿಕ ವಿಚಾರವಾಗಿ ನಡೆದಿದ್ಯಾ ಎನ್ನುವ ಶಂಕೆ ವ್ಯಕ್ತವಾಗಿದೆ.‌ ಒಟ್ಟಿನಲ್ಲಿ ಕೊಲೆ ಯಾವೊಂದು ವಿಚಾರವಾಗಿ ನಡೆದಿದೆ ಅನ್ನೋದು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು