AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತಮ್ಮ ಹತ್ಯೆಯಾಗಿರುವುದು ಮೊದಲು ನೋಡಿದ್ದು ಆಕೆಯ ಮಕ್ಕಳು, ಕೊಲೆಯಾಗಿದ್ದು ಏಕೆ?

ಮಕ್ಕಳು ಎಂದಿನಂತೆ ಶಾಲೆ ಮುಗಿಸಿ ಮನೆಗೆ ಬಂದಿದ್ರು, ಮನೆಗೆ ಬಂದವರೇ ಅಮ್ಮ ಅಮ್ಮ ಎಂದು ಕರೆದಿದ್ರು. ಆದ್ರೆ ಆಕೆ ಮನೆಯ ಹಾಲ್ ನಲ್ಲಿ ಕೊಲೆಯಾಗಿ ಬಿದ್ದಿದ್ರು. ಮಹಿಳೆಯನ್ನ ಹಾಡಹಗಲೇ ದುಷ್ಕರ್ಮಿಗಳು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

ಹೆತ್ತಮ್ಮ ಹತ್ಯೆಯಾಗಿರುವುದು ಮೊದಲು ನೋಡಿದ್ದು ಆಕೆಯ ಮಕ್ಕಳು, ಕೊಲೆಯಾಗಿದ್ದು ಏಕೆ?
ಹೆತ್ತಮ್ಮ ಹತ್ಯೆಯಾಗಿರುವುದು ಮೊದಲು ನೋಡಿದ್ದು ಆಕೆಯ ಮಕ್ಕಳು, ಕೊಲೆಯಾಗಿದ್ದು ಏಕೆ?
ರಾಮು, ಆನೇಕಲ್​
| Edited By: |

Updated on: Jan 05, 2024 | 12:24 PM

Share

ಹಾಡಹಗಲೇ ಗೃಹಿಣಿಯೋರ್ವಳನ್ನ (woman) ಕತ್ತು ಹಿಸುಕಿ ಹತ್ಯೆ (murder) ಮಾಡಿರುವ ಘಟನೆ ಸಿಲಿಕಾನ್ ವ್ಯಾಲಿ ಖ್ಯಾತಿಯ ಎಲೆಕ್ಟ್ರಾನಿಕ್ ಸಿಟಿಯ (Electronic City) ಮಗ್ಗಲಿನಲ್ಲಿಯೇ ನಡೆದಿದೆ. ಇದು ಐಟಿಬಿಟಿ ಸಿಲಿಕಾನ್​​ ಸಿಟಿಯ ಜನರನ್ನ ಬೆಚ್ಚಿ ಬೀಳಿಸಿದೆ. ಹಾಡಹಗಲೇ ಈ ರೀತಿಯ ಹತ್ಯೆ ನಡೆದ್ರೆ ನಮ್ಮ‌ಜೀವಕ್ಕೂ ರಕ್ಷಣೆ ಇದ್ಯಾ ಎನ್ನುವ ಪ್ರಶ್ನೆ ಜನರನ್ನ ಕಾಡ್ತಿದೆ.‌ ಅಷ್ಟಕ್ಕೂ ಹತ್ಯೆ ನಡೆದಿದ್ದು ಯಾವಾಗ, ಮೃತದೇಹವನ್ನ ಮೊದಲು ನೋಡಿದ್ದು ಯಾರು ಅಂತ ಕೇಳಿದ್ರೆ ನಿಮ್ಗೆ ಬೇಜಾರ್ ಆಗುತ್ತೆ.

ಮಕ್ಕಳು ಎಂದಿನಂತೆ ಶಾಲೆ ಮುಗಿಸಿ ಮನೆಗೆ ಬಂದಿದ್ರು, ಮನೆಗೆ ಬಂದವರೇ ಅಮ್ಮ ಅಮ್ಮ ಎಂದು ಕರೆದಿದ್ರು. ಆದ್ರೆ ಆಕೆ ಮನೆಯ ಹಾಲ್ ನಲ್ಲಿ ಕೊಲೆಯಾಗಿ ಬಿದ್ದಿದ್ರು. ಹೌದು ಮೇಲಿನ ಪೋಟೋದಲ್ಲಿ ಕಾಣ್ತಾ ಇರೋ ಲೇಡಿಯ ಹೆಸರು ನೀಲಂ (30) ಅಂತ, ಇದೇ ಮಹಿಳೆಯನ್ನ ಹಾಡಹಗಲೇ ದುಷ್ಕರ್ಮಿಗಳು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

ಮೂಲತಃ ಉತ್ತರ ಪ್ರದೇಶ ಮೂಲದವರಾಗಿದ್ದು, ಕಳೆದ ಕೆಲ ವರ್ಷಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬೆಟ್ಟದಾಸನಪುರದ ಸಾಯಿ ಶಕ್ತಿ ಬಡಾವಣೆಯ ಗಂಗಾ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಿದ್ರು. ಪತಿ ಹಾರ್ಡ್ ವೇರ್ ಶಾಪ್ ಜೊತೆಗೆ ಪೈಂಟಿಂಗ್ ಕಾಂಟ್ರಾಕ್ಟ್ ಕೆಲಸ ಮಾಡಿಕೊಂಡಿದ್ದ. ಎಂದಿನಂತೆ ಮಕ್ಕಳು ಶಾಲೆಗೆ ಹೋಗಿದ್ರೆ, ಪತಿ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ. ಮನೆಯಲ್ಲಿ ಮಹಿಳೆ ನೀಲಂ ಮಾತ್ರ ಒಬ್ಬಂಟಿಯಾಗಿದ್ದಾಗ ಯಾರೋ ಅಪರಿಚಿತರು ಮನೆಗೆ ನುಗ್ಗಿ ಮಹಿಳೆಯ ಹತ್ಯೆ ಮಾಡಿದ್ದಾರೆ.

Also Read: ಹಾಯಾಗಿದ್ದ ದಂಪತಿ ಬಾಳಲ್ಲಿ ಬಿರುಗಾಳಿಯಂತೆ ಮೂರನೆಯವ ಎಂಟ್ರಿ ಕೊಟ್ಟ, ಗರ್ಭಿಣಿಯಾದ ಬಳಿಕ ನಡು ನೀರಲ್ಲಿ ಕೈಬಿಟ್ಟ

ಸದ್ಯ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಶ್ವಾನದಳ ಹಾಗೂ ಎಫ್ಎಸ್ಎಲ್ ತಂಡ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕವಾಗಿ ಪರಿಚಿತರೇ ಹತ್ಯೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ಹಾಗೂ ಆಕೆಯ ಕಾಲ್ ಡಿಟೈಲ್ಸ್ ಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಪ್ರಕರಣ ಆರೋಪಿಯನ್ನ ಬಂಧಿಸಲು ವಿಶೇಷ ತಂಡ ಮಾಡಲಾಗಿದೆ.

ಇನ್ನು ಈ ಕೊಲೆ ಲಾಭಕ್ಕಾಗಿ ಅಲ್ಲ, ಬಹುಷಃ ವೈಯಕ್ತಿಕ ವಿಚಾರವಾಗಿ ನಡೆದಿದ್ಯಾ ಎನ್ನುವ ಶಂಕೆ ವ್ಯಕ್ತವಾಗಿದೆ.‌ ಒಟ್ಟಿನಲ್ಲಿ ಕೊಲೆ ಯಾವೊಂದು ವಿಚಾರವಾಗಿ ನಡೆದಿದೆ ಅನ್ನೋದು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್