AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ವ್ಹೀಲಿಂಗ್​ ವೇಳೆ ಬೈಕ್​ಗಳ ನಡುವೆ ಡಿಕ್ಕಿ, ಯುವತಿ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರಿನ ಯುವಕ-ಯುವತಿಯರ ತಂಡವೊಂದು ಕೋಲಾರದ ಕಾಫಿಡೇ ಕಡೆ ಬೈಕ್​ಗಳಲ್ಲಿ ತೆರಳುತ್ತಿದ್ದರು. ಆದರೆ, ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ವ್ಹೀಲಿಂಗ್ ಮಾಡಿಕೊಂಡು ಹೋಗುವ ವೇಳೆ ಬೈಕ್​ಗಳ ನಡುವೆ ಡಿಕ್ಕಿ ಹೊಡೆದು ಯುವತಿಯೊಬ್ಬಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದೇವನಹಳ್ಳಿ: ವ್ಹೀಲಿಂಗ್​ ವೇಳೆ ಬೈಕ್​ಗಳ ನಡುವೆ ಡಿಕ್ಕಿ, ಯುವತಿ ಸಾವು, ಇಬ್ಬರಿಗೆ ಗಂಭೀರ ಗಾಯ
ವ್ಹೀಲಿಂಗ್​ ವೇಳೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಯುವತಿ
ನವೀನ್ ಕುಮಾರ್ ಟಿ
| Edited By: |

Updated on: Aug 15, 2023 | 6:01 PM

Share

ದೇವನಹಳ್ಳಿ, ಆಗಸ್ಟ್ 15: ಬೈಕ್ ವ್ಹೀಲಿಂಗ್ (Bike Wheeling) ಮಾಡುತ್ತಿದ್ದಾಗ ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ನಡೆದಿದೆ. ಬೆಂಗಳೂರಿನಿಂದ (Bengaluru) ಕೋಲಾರದ ಕಾಫೀ ಡೇ ಕಡೆ ಹೋಗುವಾಗ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

20ಕ್ಕೂ ಹೆಚ್ಚು ಯುವಕ ಯುವತಿಯರ ಗುಂಪೊಂದು ಬೆಂಗಳೂರಿನಿಂದ ಕೋಲಾರದ ಕಾಫೀ ಡೇ ಕಡೆ ಬೈಕ್​ಗಳ ಮೂಲಕ ಹೋಗುತ್ತಿದ್ದರು. ರಸ್ತೆಗಳಲ್ಲಿ ವ್ಹೀಲಿಂಗ್ ಮಾಡಿಕೊಂಡು ಜಾಲಿ ರೈಡ್ ಮಾಡುತ್ತಿದ್ದರು. ಆದರೆ, ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ತಲುಪುತ್ತಿದ್ದಂತೆ ವ್ಹೀಲಿಂಗ್ ಮಾಡುತ್ತಿದ್ದಾಗ ಎರಡು ಬೈಕ್​ಗಳು ಪರಸ್ಪರ ತಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬೈಕ್ ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಪರಿಣಾಮ, ರಸ್ತೆಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕ ಮತ್ತು ಯುವತಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಂತರ ಜೊತೆಯಲ್ಲಿದ್ದ ಸ್ನೇಹಿತರು ಬೈಕ್ ಸಹಿತ ಪರಾರಿಯಾಗಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಹೆದ್ದಾರಿಗಳಲ್ಲಿ ವ್ಹೀಲಿಂಗ್ ಹಾವಳಿ ಬೆಳಗ್ಗೆಯಿಂದಲೇ ಆರಂಭವಾಗಿದೆ. ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್​ಗಳ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!