AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ವ್ಹೀಲಿಂಗ್​ ವೇಳೆ ಬೈಕ್​ಗಳ ನಡುವೆ ಡಿಕ್ಕಿ, ಯುವತಿ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರಿನ ಯುವಕ-ಯುವತಿಯರ ತಂಡವೊಂದು ಕೋಲಾರದ ಕಾಫಿಡೇ ಕಡೆ ಬೈಕ್​ಗಳಲ್ಲಿ ತೆರಳುತ್ತಿದ್ದರು. ಆದರೆ, ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ವ್ಹೀಲಿಂಗ್ ಮಾಡಿಕೊಂಡು ಹೋಗುವ ವೇಳೆ ಬೈಕ್​ಗಳ ನಡುವೆ ಡಿಕ್ಕಿ ಹೊಡೆದು ಯುವತಿಯೊಬ್ಬಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದೇವನಹಳ್ಳಿ: ವ್ಹೀಲಿಂಗ್​ ವೇಳೆ ಬೈಕ್​ಗಳ ನಡುವೆ ಡಿಕ್ಕಿ, ಯುವತಿ ಸಾವು, ಇಬ್ಬರಿಗೆ ಗಂಭೀರ ಗಾಯ
ವ್ಹೀಲಿಂಗ್​ ವೇಳೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಯುವತಿ
ನವೀನ್ ಕುಮಾರ್ ಟಿ
| Edited By: |

Updated on: Aug 15, 2023 | 6:01 PM

Share

ದೇವನಹಳ್ಳಿ, ಆಗಸ್ಟ್ 15: ಬೈಕ್ ವ್ಹೀಲಿಂಗ್ (Bike Wheeling) ಮಾಡುತ್ತಿದ್ದಾಗ ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ನಡೆದಿದೆ. ಬೆಂಗಳೂರಿನಿಂದ (Bengaluru) ಕೋಲಾರದ ಕಾಫೀ ಡೇ ಕಡೆ ಹೋಗುವಾಗ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

20ಕ್ಕೂ ಹೆಚ್ಚು ಯುವಕ ಯುವತಿಯರ ಗುಂಪೊಂದು ಬೆಂಗಳೂರಿನಿಂದ ಕೋಲಾರದ ಕಾಫೀ ಡೇ ಕಡೆ ಬೈಕ್​ಗಳ ಮೂಲಕ ಹೋಗುತ್ತಿದ್ದರು. ರಸ್ತೆಗಳಲ್ಲಿ ವ್ಹೀಲಿಂಗ್ ಮಾಡಿಕೊಂಡು ಜಾಲಿ ರೈಡ್ ಮಾಡುತ್ತಿದ್ದರು. ಆದರೆ, ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ತಲುಪುತ್ತಿದ್ದಂತೆ ವ್ಹೀಲಿಂಗ್ ಮಾಡುತ್ತಿದ್ದಾಗ ಎರಡು ಬೈಕ್​ಗಳು ಪರಸ್ಪರ ತಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬೈಕ್ ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಪರಿಣಾಮ, ರಸ್ತೆಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕ ಮತ್ತು ಯುವತಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಂತರ ಜೊತೆಯಲ್ಲಿದ್ದ ಸ್ನೇಹಿತರು ಬೈಕ್ ಸಹಿತ ಪರಾರಿಯಾಗಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಹೆದ್ದಾರಿಗಳಲ್ಲಿ ವ್ಹೀಲಿಂಗ್ ಹಾವಳಿ ಬೆಳಗ್ಗೆಯಿಂದಲೇ ಆರಂಭವಾಗಿದೆ. ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್​ಗಳ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ