AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆಯ ಕಲ್ಕುಂಟೆ ಅಗ್ರಹಾರದ ಬಳಿ ಒಂದೂವರೆ ವರ್ಷದ ಮಗು ಜತೆ ಕೆರೆಗೆ ಹಾರಿ ಗೃಹಿಣಿ ಆತ್ಮಹತ್ಯೆ

ಅಕ್ರಮ ಸಂಬಂಧ, ಪತಿಯಿಂದ ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಒಂದೂವರೆ ವರ್ಷದ ಯಕ್ಷಿತ್ ಜತೆ ಶ್ವೇತಾ(24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೊಸಕೋಟೆಯ ಕಲ್ಕುಂಟೆ ಅಗ್ರಹಾರದ ಬಳಿ ಒಂದೂವರೆ ವರ್ಷದ ಮಗು ಜತೆ ಕೆರೆಗೆ ಹಾರಿ ಗೃಹಿಣಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 20, 2022 | 10:16 AM

Share

ದೇವನಹಳ್ಳಿ: ಒಂದೂವರೆ ವರ್ಷದ ಮಗು ಜತೆ ಕೆರೆಗೆ ಹಾರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಕೋಟೆ ತಾಲೂಕಿನ ಕಲ್ಕುಂಟೆ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಅಕ್ರಮ ಸಂಬಂಧ, ಪತಿಯಿಂದ ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಒಂದೂವರೆ ವರ್ಷದ ಯಕ್ಷಿತ್ ಜತೆ ಶ್ವೇತಾ(24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2 ವರ್ಷದ ಹಿಂದೆ ರಾಕೇಶ್ ಎಂಬಾತನನ್ನು ಶ್ವೇತಾ ಮದುವೆಯಾಗಿದ್ದರು. ಮದುವೆ ನಂತರವೂ ಪತಿ ಅಕ್ರಮ ಸಂಬಂಧ ಹೊಂದಿದ್ದ ಆರೋಪ ಕೇಳಿ ಬಂದಿದೆ. ಅಲ್ಲದೆ ಪತಿ ರಾಕೇಶ್​​ ಹಾಗೂ ಮನೆಯವರಿಂದ ಕಿರುಕುಳ ಆರೋಪವಿದ್ದು ಇದೇ ವಿಚಾರವಾಗಿ ಕುಟುಂಬಸ್ಥರು ಅನೇಕ ಬಾರಿ ರಾಜಿ ಪಂಚಾಯಿತಿ ಮಾಡಿದ್ದಾರೆ. ಆದ್ರೆ ಇನ್ನಷ್ಟು ಕಿರುಕುಳದ ತಾಳದ ಪರಿಸ್ಥಿತಿಯಲ್ಲಿದ್ದ ಶ್ವಾತ ತನ್ನ ಪುಟ್ಟ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಆರೋಪಿ‌ ರಾಕೇಶ್​​ನನ್ನು ಅನುಗೊಂಡನಹಳ್ಳಿ ಪೊಲೀಸರು‌ ವಶಕ್ಕೆ‌ ಪಡೆದಿದ್ದಾರೆ. ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಕ್ಷ ಲಕ್ಷ ಹಣ ಆಭರಣಗಳನ್ನು ಕೊಟ್ಟು ಮದುವೆ ಮಾಡಿಕೊಟ್ಟಿದ್ರು ಕಿರುಕುಳದಿಂದ ಮಗಳು ಮೃತಪಟ್ಟಿದ್ದಾಳೆ ಎಂದು ಮೃತ ಶ್ವೇತಾ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತಾಯಿ, ಮಗಳು ಹಾಗೂ ಮಗ ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಗುಡಿಸಲು ತೆರವುಗೊಳಿಸಿದಕ್ಕೆ ಯುವಕನಿಂದ ಆತ್ಮಹತ್ಯೆ ಯತ್ನ

ತುಮಕೂರು ತಾಲೂಕಿನ ರಾಮಗೊಂಡನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಗುಡಿಸಲು ತೆರವಿಗೆ ಯತ್ನಿಸಿದರೆಂದು ಯುವಕ ಆತ್ಮಹತ್ಯೆಗೆ ಮುಂದಾಗಿದ್ದು ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಯುವಕನಿಗೆ ಚಿಕಿತ್ಸೆ ಮುಂದುವರೆದಿದೆ. ಯುವಕ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅರಣ್ಯ ಪ್ರದೇಶದಲ್ಲಿರುವ ಗುಡಿಸಲು ತೆರವಿಗೆ ಅಧಿಕಾರಿಗಳು ಬಂದಾಗ ನಾಗೇಶ್ ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ.

ನಾಗೇಶ್ ಕುಟುಂಬ, ಇದೇ ಜಾಗದಲ್ಲಿ ಸುಮಾರು 40 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿದ್ದರಂತೆ. ಆದ್ರೆ ಜಾಗಬಿಡಿ ಎಂದು ಪದೇ ಪದೇ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಕುಟುಂಬಸ್ಥರು ತುಮಕೂರು ವಲಯ ಅರಣ್ಯಾಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದಾರೆ. ಆರ್​ಎಫ್ ಈ ಪವಿತ್ರ ಹಾಗೂ ಸಿಬ್ಬಂದಿ ವಿರುದ್ಧ ಕಿರುಕುಳ ಆರೋಪ‌ ಕೇಳಿ ಬಂದಿದೆ. ಮೂರುವರೆ ಎಕರೆ ಸರ್ಕಾರದ ವತಿಯಿಂದ ಮಂಜೂರು ಆಗಿರುವ ಜಮೀನು ಸೇರಿದಂತೆ ಗುಡಿಸಲು ತೆರವುಗೊಳಿಸಲು ಭೇಟಿ ನೀಡಿದ್ದ ವೇಳೆ ಘಟನೆ ‌ನಡೆದಿದೆ. ಜಮೀನು ಲಕ್ಷ್ಮೀ ದೇವಮ್ಮ ಎಂಬುವರ ಹೆಸರಿನಲ್ಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:16 am, Tue, 20 December 22

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ