AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ನಂಬಿಸಿ ಗರ್ಭಿಣಿ ಮಾಡಿ ಕೈ ಬಿಟ್ಟ ಯುವಕ; ನ್ಯಾಯಕ್ಕಾಗಿ ಯುವತಿ ಕಣ್ಣೀರು, ಆರೋಪಿಗೆ ಬಲೆ ಬೀಸಿದ ಪೊಲೀಸ್

ದಾಸರಹಳ್ಳಿಯ ಯುವತಿ ಹಾಗೂ ಆರೋಪಿ ಅರುಣ್ ಇಬ್ಬರು ಕಳೆದ 10 ತಿಂಗಳಿಂದ ಲಿವಿಂಗ್ ಟು ಗೆದರ್ನಲ್ಲಿದ್ದರು. ಇಬ್ಬರಲ್ಲಿ ಅತಿಯಾದ ಪ್ರೀತಿ ಇತ್ತು. ಒಪ್ಪಿಗೆ ಮೂಲಕವೇ ದೈಹಿಕ ಸಂಪರ್ಕ ಬೆಳೆಸಿದ್ದರು. ಅಲ್ಲದೆ ಅರುಣ್ ಮನೆಯಲ್ಲಿ ಸಮಸ್ಯೆಯಿದೆ ಎಂದು ಹೇಳಿ 4 ಲಕ್ಷ ರೂ ಹಣವನ್ನು ಸಹ ಪಡೆದಿದ್ದ. ಆದ್ರೆ ಈಗ ಯುವತಿ ಗರ್ಭಿಣಿಯೆಂದು ತಿಳಿದ ಮೇಲೆ ಇದಕ್ಕೂ ನನಗೂ ಸಂಬಂಧವೇ ಇಲ್ಲದಂತೆ ದೂರವಾಗಿದ್ದಾನೆ.

ಪ್ರೀತಿಸಿ ನಂಬಿಸಿ ಗರ್ಭಿಣಿ ಮಾಡಿ ಕೈ ಬಿಟ್ಟ ಯುವಕ; ನ್ಯಾಯಕ್ಕಾಗಿ ಯುವತಿ ಕಣ್ಣೀರು, ಆರೋಪಿಗೆ ಬಲೆ ಬೀಸಿದ ಪೊಲೀಸ್
ಬಾಗಲಗುಂಟೆ ಠಾಣೆ
TV9 Web
| Edited By: |

Updated on:Nov 30, 2021 | 11:46 AM

Share

ನೆಲಮಂಗಲ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿ ಹಣವನ್ನೇಲ್ಲ ಪಡೆದು ಗರ್ಭಿಣಿಯೆಂದು ತಿಳಿದ ತಕ್ಷಣವೇ ಗರ್ಭಪಾತ ಮಾಡಿಸಿಕೊಳ್ಳುವಂತೆ ಜೀವ ಬೆದರಿಕೆ ಹಾಕಿದ್ದಾಗಿ ಬೆಂಗಳೂರಿನ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಸರಹಳ್ಳಿಯ ಯುವತಿ ಹಾಗೂ ಆರೋಪಿ ಅರುಣ್ ಇಬ್ಬರು ಕಳೆದ 10 ತಿಂಗಳಿಂದ ಲಿವಿಂಗ್ ಟು ಗೆದರ್ನಲ್ಲಿದ್ದರು. ಇಬ್ಬರಲ್ಲಿ ಅತಿಯಾದ ಪ್ರೀತಿ ಇತ್ತು. ಒಪ್ಪಿಗೆ ಮೂಲಕವೇ ದೈಹಿಕ ಸಂಪರ್ಕ ಬೆಳೆಸಿದ್ದರು. ಅಲ್ಲದೆ ಅರುಣ್ ಮನೆಯಲ್ಲಿ ಸಮಸ್ಯೆಯಿದೆ ಎಂದು ಹೇಳಿ 4 ಲಕ್ಷ ರೂ ಹಣವನ್ನು ಸಹ ಪಡೆದಿದ್ದ. ಆದ್ರೆ ಈಗ ಯುವತಿ ಗರ್ಭಿಣಿಯೆಂದು ತಿಳಿದ ಮೇಲೆ ಇದಕ್ಕೂ ನನಗೂ ಸಂಬಂಧವೇ ಇಲ್ಲದಂತೆ ದೂರವಾಗಿದ್ದಾನೆ. ಸದ್ಯ ಈ ಸಂಬಂಧ ಯುವತಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಅರುಣ್ಗಾಗಿ ಪೊಲೀಸರು ತಲಾಶ್ ಮಾಡ್ತಿದ್ದಾರೆ.

ಯುವತಿ ನೀಡಿದ ದೂರಿನಲ್ಲಿರುವ ಅಂಶಗಳು ಈ ಪ್ರಕರಣದ ಸಂಕ್ಷಿಪ್ತ ಸಾರಾಂಶವೇನೆಂದರೆ ನಾನು ಈ ಮೇಲ್ಕಂಡ ವಿಳಾಸದಲ್ಲಿ ವಾಸವಾಗಿದ್ದು ಖಾಸಗಿ ಕೆಲಸ ಮಾಡಿಕೊಂಡಿರುತ್ತೇನೆ, ನನಗೆ ಅರುಣ ಎಂಬ ಹುಡುಗನು ಸುಮಾರು 10 ತಿಂಗಳಿನಿಂದ ಪರಿಚಯವಾಗಿದ್ದು, ಅರುಣ ನನ್ನನ್ನು ಪ್ರೀತಿಸುವುದಾಗಿ 5ತಿಂಗಳ ಹಿಂದೆ ತಿಳಿಸಿದ್ದು ನಾವಿಬ್ಬರು ಪ್ರೀತಿಸುತ್ತಿದ್ದೆವು. ಹೀಗಿರುವಾಗ ನಾನು ಮತ್ತು ಅರುಣನು ಒಂದೇ ಮನೆಯಲ್ಲಿ ವಾಸವಿದ್ದು, ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದು ಅದಕ್ಕೆ ನನಗೂ ಒಪ್ಪಿಗೆಯಿರುತ್ತದೆ. ನಾನು ಈಗ ಗರ್ಭಿಣಿಯಾಗಿದ್ದು, ಈ ವಿಷಯವನ್ನು ಆರುಣನಿಗೆ ತಿಳಿಸಿದ್ದು, ಆತನು ಮಗುವನ್ನು ತೆಗೆಸಿಬಿಡು, ನಾನು ನಿನ್ನನ್ನು ಪ್ರೀತಿಸುತ್ತಿಲ್ಲ, ಮದುವೆಯೂ ಆಗುವುದಿಲ್ಲ, ನೀನು ಏನು ಮಾಡುತ್ತೀಯೋ ಮಾಡಿಕೊ ಎಂದು ಹೇಳಿರುತ್ತಾನೆ. ಅಲ್ಲದೆ ನನ್ನ ಬಳಿ ಮನೆಯ ಸಮಸ್ಯೆಯಿದೆಯೆಂದು ಹೇಳಿ 4 ಲಕ್ಷ ರೂ ಹಣವನ್ನು ಸಹ ಪಡೆದುಕೊಂಡು ಈಗ ಆ ಹಣವನ್ನು ಕೇಳಿದರೆ ನೀನು ನನಗೆ ಯಾವುದೇ ಹಣವನ್ನು ನೀಡುವುದಿಲ್ಲವೆಂದು ಸುಳ್ಳು ಹೇಳುತ್ತಿದ್ದಾನೆ. ಅಲ್ಲದೆ ಈ ವಿಚಾರವಾಗಿ ಪೊಲೀಸ್ ಕಂಪ್ಲೆಂಟ್ ಏನಾದರೂ ನೀಡಿದರೆ ನಿನ್ನನ್ನು ಸಾಯಿಸುತ್ತೇನೆಂದು ಬೆದರಿಕೆ ಹಾಕುತ್ತಿದ್ದಾನೆ, ಆದ್ದರಿಂದ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಗರ್ಭಿಣಿ ಮಾಡಿ ಹಣವನ್ನು ಪಡೆದು ಹಣ ನೀಡದೇ ಮೋಸ ಮಾಡಿ ಜೀವ ಬೆದರಿಕೆಯನ್ನು ಹಾಕಿರುವಂತ ಅರುಣ ಎಂಬಾತನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಯುವತಿ ದೂರು ನೀಡಿದ್ದಾಳೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್​ವಾರ್! ಯುವಕನಿಗೆ ಗಂಭೀರ ಗಾಯ

Published On - 11:34 am, Tue, 30 November 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ