AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ನಂಬಿಸಿ ಗರ್ಭಿಣಿ ಮಾಡಿ ಕೈ ಬಿಟ್ಟ ಯುವಕ; ನ್ಯಾಯಕ್ಕಾಗಿ ಯುವತಿ ಕಣ್ಣೀರು, ಆರೋಪಿಗೆ ಬಲೆ ಬೀಸಿದ ಪೊಲೀಸ್

ದಾಸರಹಳ್ಳಿಯ ಯುವತಿ ಹಾಗೂ ಆರೋಪಿ ಅರುಣ್ ಇಬ್ಬರು ಕಳೆದ 10 ತಿಂಗಳಿಂದ ಲಿವಿಂಗ್ ಟು ಗೆದರ್ನಲ್ಲಿದ್ದರು. ಇಬ್ಬರಲ್ಲಿ ಅತಿಯಾದ ಪ್ರೀತಿ ಇತ್ತು. ಒಪ್ಪಿಗೆ ಮೂಲಕವೇ ದೈಹಿಕ ಸಂಪರ್ಕ ಬೆಳೆಸಿದ್ದರು. ಅಲ್ಲದೆ ಅರುಣ್ ಮನೆಯಲ್ಲಿ ಸಮಸ್ಯೆಯಿದೆ ಎಂದು ಹೇಳಿ 4 ಲಕ್ಷ ರೂ ಹಣವನ್ನು ಸಹ ಪಡೆದಿದ್ದ. ಆದ್ರೆ ಈಗ ಯುವತಿ ಗರ್ಭಿಣಿಯೆಂದು ತಿಳಿದ ಮೇಲೆ ಇದಕ್ಕೂ ನನಗೂ ಸಂಬಂಧವೇ ಇಲ್ಲದಂತೆ ದೂರವಾಗಿದ್ದಾನೆ.

ಪ್ರೀತಿಸಿ ನಂಬಿಸಿ ಗರ್ಭಿಣಿ ಮಾಡಿ ಕೈ ಬಿಟ್ಟ ಯುವಕ; ನ್ಯಾಯಕ್ಕಾಗಿ ಯುವತಿ ಕಣ್ಣೀರು, ಆರೋಪಿಗೆ ಬಲೆ ಬೀಸಿದ ಪೊಲೀಸ್
ಬಾಗಲಗುಂಟೆ ಠಾಣೆ
TV9 Web
| Edited By: ಆಯೇಷಾ ಬಾನು|

Updated on:Nov 30, 2021 | 11:46 AM

Share

ನೆಲಮಂಗಲ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿ ಹಣವನ್ನೇಲ್ಲ ಪಡೆದು ಗರ್ಭಿಣಿಯೆಂದು ತಿಳಿದ ತಕ್ಷಣವೇ ಗರ್ಭಪಾತ ಮಾಡಿಸಿಕೊಳ್ಳುವಂತೆ ಜೀವ ಬೆದರಿಕೆ ಹಾಕಿದ್ದಾಗಿ ಬೆಂಗಳೂರಿನ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಸರಹಳ್ಳಿಯ ಯುವತಿ ಹಾಗೂ ಆರೋಪಿ ಅರುಣ್ ಇಬ್ಬರು ಕಳೆದ 10 ತಿಂಗಳಿಂದ ಲಿವಿಂಗ್ ಟು ಗೆದರ್ನಲ್ಲಿದ್ದರು. ಇಬ್ಬರಲ್ಲಿ ಅತಿಯಾದ ಪ್ರೀತಿ ಇತ್ತು. ಒಪ್ಪಿಗೆ ಮೂಲಕವೇ ದೈಹಿಕ ಸಂಪರ್ಕ ಬೆಳೆಸಿದ್ದರು. ಅಲ್ಲದೆ ಅರುಣ್ ಮನೆಯಲ್ಲಿ ಸಮಸ್ಯೆಯಿದೆ ಎಂದು ಹೇಳಿ 4 ಲಕ್ಷ ರೂ ಹಣವನ್ನು ಸಹ ಪಡೆದಿದ್ದ. ಆದ್ರೆ ಈಗ ಯುವತಿ ಗರ್ಭಿಣಿಯೆಂದು ತಿಳಿದ ಮೇಲೆ ಇದಕ್ಕೂ ನನಗೂ ಸಂಬಂಧವೇ ಇಲ್ಲದಂತೆ ದೂರವಾಗಿದ್ದಾನೆ. ಸದ್ಯ ಈ ಸಂಬಂಧ ಯುವತಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಅರುಣ್ಗಾಗಿ ಪೊಲೀಸರು ತಲಾಶ್ ಮಾಡ್ತಿದ್ದಾರೆ.

ಯುವತಿ ನೀಡಿದ ದೂರಿನಲ್ಲಿರುವ ಅಂಶಗಳು ಈ ಪ್ರಕರಣದ ಸಂಕ್ಷಿಪ್ತ ಸಾರಾಂಶವೇನೆಂದರೆ ನಾನು ಈ ಮೇಲ್ಕಂಡ ವಿಳಾಸದಲ್ಲಿ ವಾಸವಾಗಿದ್ದು ಖಾಸಗಿ ಕೆಲಸ ಮಾಡಿಕೊಂಡಿರುತ್ತೇನೆ, ನನಗೆ ಅರುಣ ಎಂಬ ಹುಡುಗನು ಸುಮಾರು 10 ತಿಂಗಳಿನಿಂದ ಪರಿಚಯವಾಗಿದ್ದು, ಅರುಣ ನನ್ನನ್ನು ಪ್ರೀತಿಸುವುದಾಗಿ 5ತಿಂಗಳ ಹಿಂದೆ ತಿಳಿಸಿದ್ದು ನಾವಿಬ್ಬರು ಪ್ರೀತಿಸುತ್ತಿದ್ದೆವು. ಹೀಗಿರುವಾಗ ನಾನು ಮತ್ತು ಅರುಣನು ಒಂದೇ ಮನೆಯಲ್ಲಿ ವಾಸವಿದ್ದು, ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದು ಅದಕ್ಕೆ ನನಗೂ ಒಪ್ಪಿಗೆಯಿರುತ್ತದೆ. ನಾನು ಈಗ ಗರ್ಭಿಣಿಯಾಗಿದ್ದು, ಈ ವಿಷಯವನ್ನು ಆರುಣನಿಗೆ ತಿಳಿಸಿದ್ದು, ಆತನು ಮಗುವನ್ನು ತೆಗೆಸಿಬಿಡು, ನಾನು ನಿನ್ನನ್ನು ಪ್ರೀತಿಸುತ್ತಿಲ್ಲ, ಮದುವೆಯೂ ಆಗುವುದಿಲ್ಲ, ನೀನು ಏನು ಮಾಡುತ್ತೀಯೋ ಮಾಡಿಕೊ ಎಂದು ಹೇಳಿರುತ್ತಾನೆ. ಅಲ್ಲದೆ ನನ್ನ ಬಳಿ ಮನೆಯ ಸಮಸ್ಯೆಯಿದೆಯೆಂದು ಹೇಳಿ 4 ಲಕ್ಷ ರೂ ಹಣವನ್ನು ಸಹ ಪಡೆದುಕೊಂಡು ಈಗ ಆ ಹಣವನ್ನು ಕೇಳಿದರೆ ನೀನು ನನಗೆ ಯಾವುದೇ ಹಣವನ್ನು ನೀಡುವುದಿಲ್ಲವೆಂದು ಸುಳ್ಳು ಹೇಳುತ್ತಿದ್ದಾನೆ. ಅಲ್ಲದೆ ಈ ವಿಚಾರವಾಗಿ ಪೊಲೀಸ್ ಕಂಪ್ಲೆಂಟ್ ಏನಾದರೂ ನೀಡಿದರೆ ನಿನ್ನನ್ನು ಸಾಯಿಸುತ್ತೇನೆಂದು ಬೆದರಿಕೆ ಹಾಕುತ್ತಿದ್ದಾನೆ, ಆದ್ದರಿಂದ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಗರ್ಭಿಣಿ ಮಾಡಿ ಹಣವನ್ನು ಪಡೆದು ಹಣ ನೀಡದೇ ಮೋಸ ಮಾಡಿ ಜೀವ ಬೆದರಿಕೆಯನ್ನು ಹಾಕಿರುವಂತ ಅರುಣ ಎಂಬಾತನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಯುವತಿ ದೂರು ನೀಡಿದ್ದಾಳೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ಗ್ಯಾಂಗ್​ವಾರ್! ಯುವಕನಿಗೆ ಗಂಭೀರ ಗಾಯ

Published On - 11:34 am, Tue, 30 November 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ