AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ತರಲು ಹೋದ ಮಹಿಳೆಯನ್ನು ಎಳೆದೊಯ್ಯಲು ಯತ್ನ: ಖದೀಮನನ್ನು ನಗ್ನಗೊಳಿಸಿ ಥಳಿಸಿದ ಯುವಕರು

ಹಾಲು ತರಲು ಅಂಗಡಿಗೆ ಹೋದ ವೇಳೆ ಮಹಿಳೆಯನ್ನು ವ್ಯಕ್ತಿಯೋರ್ವ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ. ಇದನ್ನು ನೋಡಿದ ಯುವಕ ತಂಡವೊಂದು ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿಸಿದ್ದಾರೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಕಲ್ಕೆರೆ ಕಾಲೋನಿ ಬಳಿ ಘಟನೆ ನಡೆದಿದೆ.

ಹಾಲು ತರಲು ಹೋದ ಮಹಿಳೆಯನ್ನು ಎಳೆದೊಯ್ಯಲು ಯತ್ನ: ಖದೀಮನನ್ನು ನಗ್ನಗೊಳಿಸಿ ಥಳಿಸಿದ ಯುವಕರು
ಬೆತ್ತಲೆಗೊಳಿಸಿ ಥಳಿತ
ರಾಮು, ಆನೇಕಲ್​
| Edited By: |

Updated on:Sep 08, 2024 | 1:47 PM

Share

ಬೆಂಗಳೂರು, (ಸೆಪ್ಟೆಂಬರ್ 08): ಅಂಗಡಿಗೆ ಹಾಲು ತರಲು ಬಂದಿದ್ದ ಮಹಿಳೆಯನ್ನು ಬಾಯಿ ಮುಚ್ಚಿ ಎಳೆದೊಯ್ಯಲು (Physical Abuse) ಯತ್ನಿಸಿದ ವ್ಯಕ್ತಿಗೆ ಧರ್ಮದೇಟು ಬಿದ್ದಿವೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಕಲ್ಕೆರೆ ಕಾಲೋನಿ ಬಳಿ ಘಟನೆ ನಡೆದಿದೆ. ಧಾರವಾಡ ಮೂಲದ ರವಿಕುಮಾರ್ ಎನ್ನುವಾತ ಕುಡಿದ ನಶೆಯಲ್ಲಿ ಮಹಿಳೆಯನ್ನು ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ. ಇದನ್ನು ನೋಡಿದ ಯುವಕ ತಂಡವೊಂದು ರವಿಕುಮಾರ್ ನನ್ನು ಹಿಡಿದು ನಗ್ನಗೊಳಿಸಿ ಮನಸೋ ಇಚ್ಛೆ ಥಳಿಸಿದ್ದಾರೆ.

ಧಾರವಾಡ ಮೂಲದ ರವಿಕುಮಾರ್ ರವಿಕುಮಾರ್‌ ಕಲ್ಕೆರೆ ಹೋಟೆಲ್‌ನಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಅಪರಿಚಿತ ಮಹಿಳೆಯೊಬ್ಬರು ಅಂಗಡಿಗೆ ಹಾಲು ತೆಗೆದುಕೊಂಡು ಬರಲು ಹೋಗಿದ್ದರು. ನಶೆ ಏರಿಸಿಕೊಂಡಿದ್ದ ರವಿಕುಮಾರ್‌, ಮಹಿಳೆಯ ಹಿಂದಿನಿಂದ ಬಂದು ಬಾಯಿ ಮುಚ್ಚಿಕೊಂಡು ಎಳೆದೊಯ್ಯಲು ಯತ್ನಿಸಿದ್ದಾನೆ.ಇದರಿಂದ ಆತಂಕಗೊಂಡ ಮಹಿಳೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದಾಳೆ.

ಇದನ್ನೂ ಓದಿ: ಕಲಬುರಗಿ ಹನಿಟ್ರ್ಯಾಪ್ ಪ್ರಕರಣ: ತಪ್ಪೊಪ್ಪಿಕೊಂಡ ವಿಡಿಯೋ ಬಿಡುಗಡೆ ಮಾಡಿದ ಆರೋಪಿ

ಅಲ್ಲಿಯೇ ಇದ್ದ ಗ್ರಾಮದ ಯುವಕರು ಮಹಿಳೆ ನೆರವಿಗೆ ಧಾವಿಸಿದ್ದಾರೆ. ಬಳಿಕ ಯುವಕರ ಕಂಡು ಎಸ್ಕೇಪ್ ಆಗಲು ಯತ್ನಿಸಿದ ರವಿಕುಮಾರ್‌ನನ್ನು ಹಿಡಿದು ಮನಸೋ ಇಚ್ಛೆ ಥಳಿಸಿದ್ದಾರೆ. ರವಿಕುಮಾರ್‌ನನ್ನು ನಗ್ನಗೊಳಿಸಿ ಹೊಡೆದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಆಗಮಿಸಿ ರವಿಕುಮಾರ್​ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ರವಿಕುಮಾರ್​​ನನ್ನು ಪೊಲೀಸರು, ಗೊಟ್ಟಿಗೆರೆಯ ವಿಜಯಶ್ರೀ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:10 pm, Sun, 8 September 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?