AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ-ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಮಿತಿ ಮೀರಿದ ವ್ಹೀಲಿಂಗ್ ಪುಂಡರ ಹಾವಳಿ

ವೀಕೆಂಡ್​ನಲ್ಲಿ ನಂದಿಬೆಟ್ಟ ಹಾಗೂ ಈಶಾ ಪೌಂಡೇಶನ್​ಗೆ ಲಾಂಗ್ ಡ್ರೈವ್ ಬರುವ ಪುಂಡರು ಹೆದ್ದಾರಿಯುದ್ದಕ್ಕೂ ವೀಲಿಂಗ್ ಮಾಡುತ್ತಾ ವಿಡಿಯೋ ಮಾಡುತ್ತಿದ್ದಾರೆ. ವೀಲಿಂಗ್ ಹಾವಳಿಯಿಂದ ಟೋಲ್ ಸುಂಕ ಕಟ್ಟುವ ವಾಹನ ಸವಾರರ ಪರದಾಡುವಂತಾಗಿದೆ. ಸದ್ಯ ವೀಲಿಂಗ್ ಪುಂಡರಿಗೆ ತಕ್ಕ ಶಾಸ್ತಿ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಹೊಸಕೋಟೆ-ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಮಿತಿ ಮೀರಿದ ವ್ಹೀಲಿಂಗ್ ಪುಂಡರ ಹಾವಳಿ
ಹೊಸಕೋಟೆ-ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಮಿತಿ ಮೀರಿದ ವ್ಹೀಲಿಂಗ್
ನವೀನ್ ಕುಮಾರ್ ಟಿ
| Edited By: |

Updated on: Dec 10, 2023 | 10:24 AM

Share

ದೇವನಹಳ್ಳಿ, ಡಿ.10: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಹೊಸಕೋಟೆ ದೊಡ್ಡಬಳ್ಳಾಪುರ ನೂತನ ಹೆದ್ದಾರಿಯಲ್ಲಿ ಪುಂಡರ ಹುಚ್ಚಾಟ ಹೆಚ್ಚಾಗಿದೆ. ವೀಕೆಂಡ್ ಬಂತೆಂದರೆ ಸಾಕು ಬೆಳ್ಳಂ ಬೆಳಗ್ಗೆ ರಸ್ತೆಗಿಳಿಯುವ ಪುಂಡರು ನೂತನ ಹೆದ್ದಾರಿಯಲ್ಲಿ ‌ವ್ಹೀಲಿಂಗ್ (Wheeling)  ಮಾಡುತ್ತಿದ್ದಾರೆ. ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಾ ಹುಚ್ಚಾಟ ಮೆರೆಯುತ್ತಿದ್ದಾರೆ. ಹಿಂಬದಿಯಲ್ಲಿ ಯುವಕ ಯುವತಿಯರನ್ನ ಕೂರಿಸಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ.

ವೀಕೆಂಡ್​ನಲ್ಲಿ ನಂದಿಬೆಟ್ಟ ಹಾಗೂ ಈಶಾ ಪೌಂಡೇಶನ್​ಗೆ ಲಾಂಗ್ ಡ್ರೈವ್ ಬರುವ ಪುಂಡರು ಹೆದ್ದಾರಿಯುದ್ದಕ್ಕೂ ವೀಲಿಂಗ್ ಮಾಡುತ್ತಾ ವಿಡಿಯೋ ಮಾಡುತ್ತಿದ್ದಾರೆ. ಹೆದ್ದಾರಿಯಲ್ಲಿ ಹೈಟೆಕ್ ಕ್ಯಾಮರಾಗಳಿದ್ದರೂ ಪೊಲೀಸರ ಭಯವಿಲ್ಲದೆ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದಾರೆ. ಪುಂಡರ ವೀಲಿಂಗ್ ಹುಚ್ಚಾಟದ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ವಿಶ್ವನಾಥಪುರ, ಚನ್ನರಾಯಪಟ್ಟಣ ಮತ್ತು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುವ ಯುವಕರ ಸಂಖ್ಯೆ ಹೆಚ್ಚಾಗಿದೆ. ಇನ್ನು ವ್ಹೀಲಿಂಗ್ ಹಾವಳಿಯಿಂದ ಟೋಲ್ ಸುಂಕ ಕಟ್ಟುವ ವಾಹನ ಸವಾರರ ಪರದಾಡುವಂತಾಗಿದೆ. ಸದ್ಯ ವ್ಹೀಲಿಂಗ್ ಪುಂಡರಿಗೆ ತಕ್ಕ ಶಾಸ್ತಿ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮದವೇರಿದ ಕಾಡಾನೆ ಜೊತೆ ಕಾದಾಡಿ ಮಂಡಿ ಊರಿದ ಅರ್ಜುನ; ಕಾರ್ಯಾಚರಣೆ ವಿಡಿಯೋ ಲಭ್ಯ

ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ

ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಅನ್ಯಕೋಮಿನ ಯುವತಿ ಜೊತೆ ಅನುಚಿತವಾಗಿ ವರ್ತಿಸಿದ್ದಾಗಿ ಆರೋಪಿಸಿ ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಿಗ್ಗಾಮುಗ್ಗಾ ಥಳಿಸಲಾಗಿದೆ. ಜಾಲಿನಗರದ ನಿವಾಸಿ ಶ್ರೀನಿವಾಸ್​ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್​ಗಿರಿ ನಡೆಸಿದ್ದಾರೆ. ಕಿಡಿಗೇಡಿಗಳನ್ನ ಬಂಧಿಸುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿದ್ವು. ಹಲ್ಲೆಗೊಳಗಾದ ಯುವಕನ ಮೇಲೆಯೇ ಪೋಕ್ಸೋ ಕೇಸ್ ದಾಖಲಿಸಿದ್ದಾರೆ. ದಾಳಿ ಮಾಡಿರೋ ಅನ್ಯಕೋಮಿನ ಯುವರನ್ನ ಬಂಧಿಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಮೆಡಿಕಲ್ ಶಾಪ್ ಶೆಟರ್ ಮುರಿದು ಕಳ್ಳತನ

ಕಡಬ ಗ್ರಾಮದಲ್ಲಿ ಮೆಡಿಕಲ್ ಶಾಪ್ ಶೆಟರ್ ಮುರಿದು ನಗದು ಕಳವು ಮಾಡಲಾಗಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ಕಳ್ಳ ಕೈಚಳಕ ತೋರಿದ್ದಾನೆ. ವಿನಯ್ ಪಟೇಲ್ ಮತ್ತು ವೆಂಕಟರಂಗಯ್ಯಗೆ ಸೇರಿದ ಮೆಡಿಕಲ್ಸ್​ನಲ್ಲಿ ಖದೀಮ ಕನ್ನ ಹಾಕಿದ್ದಾನೆ. ಕಳ್ಳನ ಕೈಚಳಕ ಮೆಡಿಕಲ್ ಶಾಪ್​ನಲ್ಲಿ ಅಳವಡಿಸಿದ್ದ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ