AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ-ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಮಿತಿ ಮೀರಿದ ವ್ಹೀಲಿಂಗ್ ಪುಂಡರ ಹಾವಳಿ

ವೀಕೆಂಡ್​ನಲ್ಲಿ ನಂದಿಬೆಟ್ಟ ಹಾಗೂ ಈಶಾ ಪೌಂಡೇಶನ್​ಗೆ ಲಾಂಗ್ ಡ್ರೈವ್ ಬರುವ ಪುಂಡರು ಹೆದ್ದಾರಿಯುದ್ದಕ್ಕೂ ವೀಲಿಂಗ್ ಮಾಡುತ್ತಾ ವಿಡಿಯೋ ಮಾಡುತ್ತಿದ್ದಾರೆ. ವೀಲಿಂಗ್ ಹಾವಳಿಯಿಂದ ಟೋಲ್ ಸುಂಕ ಕಟ್ಟುವ ವಾಹನ ಸವಾರರ ಪರದಾಡುವಂತಾಗಿದೆ. ಸದ್ಯ ವೀಲಿಂಗ್ ಪುಂಡರಿಗೆ ತಕ್ಕ ಶಾಸ್ತಿ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಹೊಸಕೋಟೆ-ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಮಿತಿ ಮೀರಿದ ವ್ಹೀಲಿಂಗ್ ಪುಂಡರ ಹಾವಳಿ
ಹೊಸಕೋಟೆ-ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಮಿತಿ ಮೀರಿದ ವ್ಹೀಲಿಂಗ್
ನವೀನ್ ಕುಮಾರ್ ಟಿ
| Edited By: |

Updated on: Dec 10, 2023 | 10:24 AM

Share

ದೇವನಹಳ್ಳಿ, ಡಿ.10: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಹೊಸಕೋಟೆ ದೊಡ್ಡಬಳ್ಳಾಪುರ ನೂತನ ಹೆದ್ದಾರಿಯಲ್ಲಿ ಪುಂಡರ ಹುಚ್ಚಾಟ ಹೆಚ್ಚಾಗಿದೆ. ವೀಕೆಂಡ್ ಬಂತೆಂದರೆ ಸಾಕು ಬೆಳ್ಳಂ ಬೆಳಗ್ಗೆ ರಸ್ತೆಗಿಳಿಯುವ ಪುಂಡರು ನೂತನ ಹೆದ್ದಾರಿಯಲ್ಲಿ ‌ವ್ಹೀಲಿಂಗ್ (Wheeling)  ಮಾಡುತ್ತಿದ್ದಾರೆ. ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಾ ಹುಚ್ಚಾಟ ಮೆರೆಯುತ್ತಿದ್ದಾರೆ. ಹಿಂಬದಿಯಲ್ಲಿ ಯುವಕ ಯುವತಿಯರನ್ನ ಕೂರಿಸಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ.

ವೀಕೆಂಡ್​ನಲ್ಲಿ ನಂದಿಬೆಟ್ಟ ಹಾಗೂ ಈಶಾ ಪೌಂಡೇಶನ್​ಗೆ ಲಾಂಗ್ ಡ್ರೈವ್ ಬರುವ ಪುಂಡರು ಹೆದ್ದಾರಿಯುದ್ದಕ್ಕೂ ವೀಲಿಂಗ್ ಮಾಡುತ್ತಾ ವಿಡಿಯೋ ಮಾಡುತ್ತಿದ್ದಾರೆ. ಹೆದ್ದಾರಿಯಲ್ಲಿ ಹೈಟೆಕ್ ಕ್ಯಾಮರಾಗಳಿದ್ದರೂ ಪೊಲೀಸರ ಭಯವಿಲ್ಲದೆ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದಾರೆ. ಪುಂಡರ ವೀಲಿಂಗ್ ಹುಚ್ಚಾಟದ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ವಿಶ್ವನಾಥಪುರ, ಚನ್ನರಾಯಪಟ್ಟಣ ಮತ್ತು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುವ ಯುವಕರ ಸಂಖ್ಯೆ ಹೆಚ್ಚಾಗಿದೆ. ಇನ್ನು ವ್ಹೀಲಿಂಗ್ ಹಾವಳಿಯಿಂದ ಟೋಲ್ ಸುಂಕ ಕಟ್ಟುವ ವಾಹನ ಸವಾರರ ಪರದಾಡುವಂತಾಗಿದೆ. ಸದ್ಯ ವ್ಹೀಲಿಂಗ್ ಪುಂಡರಿಗೆ ತಕ್ಕ ಶಾಸ್ತಿ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮದವೇರಿದ ಕಾಡಾನೆ ಜೊತೆ ಕಾದಾಡಿ ಮಂಡಿ ಊರಿದ ಅರ್ಜುನ; ಕಾರ್ಯಾಚರಣೆ ವಿಡಿಯೋ ಲಭ್ಯ

ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ

ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಅನ್ಯಕೋಮಿನ ಯುವತಿ ಜೊತೆ ಅನುಚಿತವಾಗಿ ವರ್ತಿಸಿದ್ದಾಗಿ ಆರೋಪಿಸಿ ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಿಗ್ಗಾಮುಗ್ಗಾ ಥಳಿಸಲಾಗಿದೆ. ಜಾಲಿನಗರದ ನಿವಾಸಿ ಶ್ರೀನಿವಾಸ್​ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್​ಗಿರಿ ನಡೆಸಿದ್ದಾರೆ. ಕಿಡಿಗೇಡಿಗಳನ್ನ ಬಂಧಿಸುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿದ್ವು. ಹಲ್ಲೆಗೊಳಗಾದ ಯುವಕನ ಮೇಲೆಯೇ ಪೋಕ್ಸೋ ಕೇಸ್ ದಾಖಲಿಸಿದ್ದಾರೆ. ದಾಳಿ ಮಾಡಿರೋ ಅನ್ಯಕೋಮಿನ ಯುವರನ್ನ ಬಂಧಿಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಮೆಡಿಕಲ್ ಶಾಪ್ ಶೆಟರ್ ಮುರಿದು ಕಳ್ಳತನ

ಕಡಬ ಗ್ರಾಮದಲ್ಲಿ ಮೆಡಿಕಲ್ ಶಾಪ್ ಶೆಟರ್ ಮುರಿದು ನಗದು ಕಳವು ಮಾಡಲಾಗಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ಕಳ್ಳ ಕೈಚಳಕ ತೋರಿದ್ದಾನೆ. ವಿನಯ್ ಪಟೇಲ್ ಮತ್ತು ವೆಂಕಟರಂಗಯ್ಯಗೆ ಸೇರಿದ ಮೆಡಿಕಲ್ಸ್​ನಲ್ಲಿ ಖದೀಮ ಕನ್ನ ಹಾಕಿದ್ದಾನೆ. ಕಳ್ಳನ ಕೈಚಳಕ ಮೆಡಿಕಲ್ ಶಾಪ್​ನಲ್ಲಿ ಅಳವಡಿಸಿದ್ದ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ