AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೋಲ್ ಶುಲ್ಕ ಕಟ್ಟುವ ವಿಚಾರಕ್ಕೆ ಸಿಬ್ಬಂದಿ ಮೇಲೆ ಹಲ್ಲೆ; ಕಿಡಿಗೆಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಟೋಲ್ ಶುಲ್ಕ ಕಟ್ಟುವ ವಿಚಾರಕ್ಕೆ ಟೋಲ್ ಸಿಬ್ಬಂದಿ ಮತ್ತು ಯುವಕರ ನಡುವೆ ಮಾತಿನ ಚಕಮಕಿ ನೆಡೆದಿದ್ದು, ವಾಗ್ವಾದ, ವಿಕೋಪಕ್ಕೆ ತಿರುಗಿ ಟೋಲ್ ಸಿಬ್ಬಂದಿಗೆ ಕಾಲಿನಿಂದ ಒದ್ದು ಯುವಕರು ಹಲ್ಲೆ ನಡೆಸಿದ್ದಾರೆ.

ಟೋಲ್ ಶುಲ್ಕ ಕಟ್ಟುವ ವಿಚಾರಕ್ಕೆ ಸಿಬ್ಬಂದಿ ಮೇಲೆ ಹಲ್ಲೆ; ಕಿಡಿಗೆಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆ
ಸಿಬ್ಬಂದಿ ಮೇಲೆ ಹಲ್ಲೆ
TV9 Web
| Edited By: |

Updated on:Mar 11, 2022 | 6:35 PM

Share

ಬೆಂಗಳೂರು: ಟೋಲ್ ಶುಲ್ಕ ಕಟ್ಟುವ ವಿಚಾರಕ್ಕೆ ವಾಹನದಲ್ಲಿ ಬಂದ ಕಿಡಿಗೆಡಿಗಳು ಟೋಲ್ ಸಿಬ್ಬಂದಿಗಳ(Toll staff) ಮೇಲೆ ಹಲ್ಲೆ ನೆಡೆಸಿದ ಘಟನೆ ನೆಲಮಂಗಲ ತಾಲ್ಲೂಕು ಕರೆಕಲ್ ಕ್ರಾಸ್ ಬಳಿಯ ಕುಣಿಗಲ್ ರಸ್ತೆ ಲ್ಯಾಂಕೋ ದೇವಿ ಟೋಲ್​ನಲ್ಲಿ ನಡೆದಿದೆ. ಹಲ್ಲೆ(Attack) ನೆಡೆಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕುಣಿಗಲ್ ಕಡೆಯಿಂದ ಕಾರಿನಲ್ಲಿ ಬಂದ 7-8 ಮಂದಿ ಯುವಕರು, ಟೋಲ್​ ಸಿಬ್ಬಂದಿ ಜತೆ ಗಲಾಟೆ ಮಾಡಿದ್ದಾರೆ. ಟೋಲ್ ಶುಲ್ಕ ಕಟ್ಟುವ ವಿಚಾರಕ್ಕೆ ಟೋಲ್ ಸಿಬ್ಬಂದಿ ಮತ್ತು ಯುವಕರ ನಡುವೆ ಮಾತಿನ ಚಕಮಕಿ ನೆಡೆದಿದ್ದು, ವಾಗ್ವಾದ, ವಿಕೋಪಕ್ಕೆ ತಿರುಗಿ ಟೋಲ್ ಸಿಬ್ಬಂದಿಗೆ ಕಾಲಿನಿಂದ ಒದ್ದು ಯುವಕರು(Youths) ಹಲ್ಲೆ ನಡೆಸಿದ್ದಾರೆ.

ಚೇರ್​ನಿಂದ ಪ್ಲಾಜಾ ಗಾಜು ಹೊಡೆದು ಯುವಕರ ಗುಂಪು ಪುಂಡಾಟಿಕೆ ಮೆರೆದಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟೋಲ್ ಸಿಬ್ಬಂದಿಗೆ ಹಲ್ಲೆ ನೆಡೆಸಿದ ಪುಂಡರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಚಾಮರಾಜನಗರ: ವರದಕ್ಷಿಣೆ ಕಿರುಕುಳ ಗೃಹಿಣಿ ಸಾವು; ಆರೋಪಿ ಹೆಸರು ಕೈಬಿಟ್ಟಿದ್ದಕ್ಕೆ ವಿಷ ಸೇವಿಸುವುದಾಗಿ ಎಚ್ಚರಿಕೆ ಕೊಟ್ಟ ಪೋಷಕರು

ವರದಕ್ಷಿಣೆ ಕಿರುಕುಳದಿಂದ ಗೃಹಿಣಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದಲ್ಲಿ ಒಬ್ಬ ಆರೋಪಿಯ ಹೆಸರನ್ನು ಕೈಬಿಟ್ಟು ಚಾರ್ಜ್‌ಶೀಟ್ ಸಲ್ಲಿಸಿದ ಹಿನ್ನೆಲೆ ಗೃಹಿಣಿ ಪೋಷಕರು ಡಿವೈಎಸ್‌ಪಿ ಕಚೇರಿಯ ಮುಂದೆ ಧರಣಿ ನಡೆಸಿದ ಘಟನೆ ನಡೆದಿದೆ. ಪೋಷಕರು ಆರೋಪಿ ಹೆಸರನ್ನು ಚಾರ್ಜ್‌ಶೀಟ್‌ನಲ್ಲಿ ಸೇರಿಸಬೇಕೆಂದು ಒತ್ತಾಯಿಸಿದ್ದಾರೆ. ಆರೋಪಿ ಹೆಸರು ಸೇರಿಸದಿದ್ದರೆ ಇಲ್ಲೇ ವಿಷ ಕುಡಿದು ಸಾಯುತ್ತೇವೆಂದು ಬೆದರಿಕೆ ಹಾಕಿದ್ದಾರೆ.

ಮಗಳ ಸಾವಿನ ನೋವಿನಲ್ಲಿರುವ ಪೋಷಕರು ಮಗಳ ಸಾವಿಗೆ ನ್ಯಾಯ ಬೇಕೆಂದು ಡಿವೈಎಸ್‌ಪಿ ಕಚೇರಿಯ ಮುಂದೆ ಧರಣಿ ಕೂತಿದ್ದಾರೆ. ಚಾಮರಾಜನಗರದ ಉಡಿಗಾಲದಲ್ಲಿ ಕಳೆದ ಡಿಸೆಂಬರ್‌ನಲ್ಲಿ ದಿವ್ಯಾ ಎಂಬ ಮಹಿಳೆ ವರದಕ್ಷಿಣೆ ಕಿರುಕುಳ ಹಿನ್ನೆಲೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿತ್ತು. ಮೃತ ದಿವ್ಯಾಳ ಪತಿ, ಅತ್ತೆ, ಮಾವ, ಭಾವ, ವಾರಗಿತ್ತಿ ಮೇಲೆ ಪ್ರಕರಣ ದಾಖಲಿಸಿದ್ರು. ಆದ್ರೆ ಈಗ ಈ ಪ್ರಕರಣದಲ್ಲಿ ವಾರಗತ್ತಿ ರೇಖಾಳಿಗೆ ಯಾವುದೇ ಸಂಬಂಧವಿಲ್ಲ ಎಂದು ಪೋಲಿಸರು ಚಾರ್ಜ್ ಶೀಟ್ನಲ್ಲಿ ಹೆಸರು ಕೈ ಬಿಟ್ಟಿದ್ದಾರೆ. ಇದಕ್ಕೆ ಆಕ್ರೋಶಗೊಂಡ ದಿವ್ಯಾ ಪೋಷಕರು ರೇಖಾಳನ್ನು ಪ್ರಕರಣದಲ್ಲಿ ಸೇರಿಸಿ ಇಲ್ಲವೇ ನಾವು ವಿಷ ಕುಡಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಪೋಲಿಸರು ಪೋಷಕರನ್ನು ಸಮಾಧಾನಪಡಿಸಿದ್ದಾರೆ.

ಇದನ್ನೂ ಓದಿ:

ವಿಜಯನಗರದಲ್ಲಿ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ, ಬೆಂಗಳೂರಿನಲ್ಲಿ ಖಾಸಗಿ ಫೈನಾನ್ಸ್​​ನ 7 ಕಾರ್​ಗಳಿಗೆ ಬೆಂಕಿ

Doddaballapur: ದೊಡ್ಡಬಳ್ಳಾಪುರ ಬಳಿ ಮಹಿಳೆಯ ಸೀರೆ ಬಿಚ್ಚಿ, ಅದೇ ಸೀರೆಯಿಂದ ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಆರೋಪ

Published On - 6:32 pm, Fri, 11 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್