AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್​ನಲ್ಲಿ ಏರ್​ಪೋರ್ಟ್ ರಸ್ತೆಯಲ್ಲಿ ಬೆಲೆ ಬಾಳುವ ಬೈಕ್​ಗಳ ಜೊತೆ ಯುವಕರ ರೇಸ್; ಕಿರಿಕಿರಿಗೆ ಬೇಸತ್ತ ಇತರೆ ಸವಾರರು

ಲಕ್ಷಗಳಿಂದ ಕೋಟಿ ಬೆಲೆ ಬಾಳುವ ಬೈಕ್​ಗಳು ರಸ್ತೆಯಲ್ಲಿ ಕಾಣುವುದಕ್ಕಿಂತ ಶ್ರೀಮಂತರ ಮನೆಗಳಲ್ಲಿ ಕಾಣಿಸೋದೆ ಹೆಚ್ಚು. ಆದ್ರೆ, ಇಲ್ಲೊಂದು ಕಡೆ ಮಾತ್ರ ವೀಕೆಂಡ್ ಬಂತು ಅಂದರೆ ಸಾಕು ದುಬಾರಿ ಬೈಕ್​ಗಳದ್ದೆ ಕಾರುಬಾರು, ಈ ಬೆಲೆ ಬಾಳುವ ಬೈಕ್​ಗಳ ವೀಕ್ಷಣೆ ಒಂದು ಕಡೆ ಖುಷಿ ನೀಡಿದ್ರೆ, ಅದೇ ಕಾಸ್ಟ್ಲಿ ಬೈಕ್ಗಳ ಹುಚ್ಚಾಟ ಇದೀಗ ಇತರ ಸಾವರರ ಆತಂಕವನ್ನ ಹೆಚ್ಚಾಗುವಂತೆ ಮಾಡಿದೆ.

ವೀಕೆಂಡ್​ನಲ್ಲಿ ಏರ್​ಪೋರ್ಟ್ ರಸ್ತೆಯಲ್ಲಿ ಬೆಲೆ ಬಾಳುವ ಬೈಕ್​ಗಳ ಜೊತೆ ಯುವಕರ ರೇಸ್; ಕಿರಿಕಿರಿಗೆ ಬೇಸತ್ತ ಇತರೆ ಸವಾರರು
ಏರ್​ಪೋರ್ಟ್ ರಸ್ತೆಯಲ್ಲಿ ಬೆಲೆ ಬಾಳುವ ಬೈಕ್​ಗಳ ಜೊತೆ ಯುವಕರ ರೇಸ್
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 25, 2024 | 7:38 PM

Share

ಬೆಂಗಳೂರು ಗ್ರಾಮಾಂತರ, ಆ.25: ಬೆಳ್ಳಂ ಬೆಳಗ್ಗೆ ಟೆಕ್ಕಿಗಳು, ಯುವಕ-ಯುವತಿಯರು ಸೌಂಡ್ ಮಾಡುತ್ತಾ ಲಕ್ಷ ಲಕ್ಷ ಬೆಲೆ ಬಾಳುವ ಬೈಕ್​ಗಳನ್ನು ತೆಗೆದುಕೊಂಡು ಹೆದ್ದಾರಿಯಲ್ಲಿ ಶರವೇಗದಲ್ಲಿ ಹೋಗುತ್ತಿದ್ದರೆ, ಇತ್ತ ಸ್ಥಳೀಯರು ಬೈಕ್​ಗಳ ಹಾವಳಿಗೆ ಕಂಗಾಲಾಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಹೌದು, ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ದೇವನಹಳ್ಳಿ ಪಟ್ಟಣದ ಮೂಲಕ ಹಾದು ಹೋಗಿರುವ ಬೆಂಗಳೂರು ಹೈದರಾಬಾದ್ ಮತ್ತು ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯಾ ಹೆದ್ದಾರಿ, ಇದೀಗ ಹೈ ಸ್ಪೀಡ್ ಬೈಕ್ ಸವಾರರಿಗೆ ರಹದಾರಿಯಾಗಿ ಮಾರ್ಪಟ್ಟಿದೆ.

ವೀಕೆಂಡ್​ನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳ

ಅದರಲ್ಲೂ ವೀಕೆಂಡ್ ಬಂತೆಂದರೆ ಸಾಕು ವಿವಿಧ ಬ್ರಾಂಡ್​ಗಳ ದುಬಾರಿ ಬೆಲೆ ಬಾಳುವ ಬೈಕ್​ಗಳಲ್ಲಿ ಸಿಲಿಕಾನ್ ಸಿಟಿಯಿಂದ ಹೆದ್ದಾರಿಗೆ ಎಂಟ್ರಿಕೊಡುತ್ತಿರುವ ಯುವಕ-ಯುವತಿಯರು ಗುಂಪು ಗುಂಪಾಗಿ ಬಂದು ಏರ್ಪೋಟ್ ರಸ್ತೆ ಮತ್ತು ಹೊಸಕೋಟೆ ರಸ್ತೆಯಲ್ಲಿ ರೇಸ್ ಮಾಡ್ತಿದ್ದಾರೆ. ಜೊತೆಗೆ ಬೆಳ್ಳಂ ಬೆಳಗ್ಗೆ ರೇಸ್ ಮಾಡಿಕೊಂಡು ಬಂದು ಕಾಫೀ, ಟೀ ಎಂದು ಹೆದ್ದಾರಿ ಬದಿಯಲ್ಲಿ ಬೈಕ್ ಸವಾರರು ಬೀಡು ಬಿಡ್ತಿದ್ದಾರೆ. ಹೀಗಾಗೆ ಕಾಸ್ಟ್ಲಿ ಬೈಕ್​​ಗಳನ್ನ ನೋಡಿ ಸೆಲ್ಪಿ ತೆಗೆದುಕೊಳ್ಳುವ ಖುಷಿಯಲ್ಲಿ ಇತರೆ ಬೈಕ್ ಸವಾರರು ಹೆದ್ದಾರಿಯಲ್ಲಿ ಬರ್ತಿದ್ದು, ಸಾಕಷ್ಟು ಅಪಘಾತಗಳು ವೀಕೆಂಡ್​ನಲ್ಲಿಯೇ ಗಣನೀಯವಾಗಿ ಹೆಚ್ಚಾಗುತ್ತಿದೆ.

ಇದನ್ನೂ ಓದಿ:ಬೆಂಗಳೂರು: ಠಾಣೆಗೆ ಮುತ್ತಿಗೆ ಹಾಕಿದ ಶಾಸಕನ​ ಮುಂದೆಯೇ ACP ಚಂದನ್ ಕುಮಾರ್ ಆಕ್ರೋಶ

ಕಿಡಿಕಾರಿದ ಸಾರ್ವಜನಿಕರು

ಮುಂಜಾನೆ ನಂದಿಬೆಟ್ಟದಲ್ಲಿ ಸನ್ ರೈಸ್ ನೋಡಲು ಮತ್ತು ಮುಸ್ಸಂಜೆ ಚಿಕ್ಕಬಳ್ಳಾಪುರ ಬಳಿಯ ಈಶಾ ಪೌಂಡೇಶನ್​ನಲ್ಲಿ ಲೇಸರ್ ಶೋ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಯುವಕ-ಯುವತಿಯರು ಬರ್ತಿದ್ದು, ಬೇಗ ಹೋಗುವ ಭರದಲ್ಲಿ ರೇಸ್​ಗೆ ಇಳಿದು ಅತಿವೇಗದಲ್ಲಿ ಸಂಚಾರ ಮಾಡ್ತಿದ್ದಾರೆ. ಜೊತೆಗೆ ಇತ್ತೀಚೆಗೆ ಹೆದ್ದಾರಿಯಲ್ಲಿ ಸ್ವೀಡ್ ಮೀಟರ್​ಗಳನ್ನ ಸಂಚಾರಿ ಪೊಲೀಸರು ಹಾಕದ ಕಾರಣ ಪೊಲೀಸರ ಭಯವಿಲ್ಲದೆ ಬೇಕಾಬಿಟ್ಟಿ ಕಾರು, ಬೈಕ್ ಚಾಲನೆ ಮಾಡ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಅಲ್ಲದೆ ದುಬಾರಿ ಬೈಕ್​ಗಳಿಂದ ಪಕ್ಕದಲ್ಲೆ ಬಂದು ಒಂದೇ ಸಮನೆ ಸೌಂಡ್ ಮಾಡುವ ಕಾರಣ, ಪಕ್ಕದ ಸವಾರರು ಭಯದಿಂದ ಕೆಳಕ್ಕೆ ಬೀಳ್ತಿದ್ದು, ಅತಿವೇಗದ ಬೈಕ್ ರೇಸ್​ಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದ್ದಾರೆ. ಒಟ್ಟಾರೆ ಸಣ್ಣ ಸಣ್ಣ ರಸ್ತೆಗಳು ಹೆದ್ದಾರಿಗಳಾಗಿ ಮೇಲ್ದರ್ಜೆ ವಾಹನ ಸವಾರರಿಗೆ ಬೈಕ್ ರೇಸ್​ಗಳಿಂದ ಕಿರಿಕಿರಿ ಹೆಚ್ಚಾಗ್ತಿದ್ದು, ಜೋಶ್​ಗಾಗಿ ಕೆಲ ಯುವಕ- ಯುವತಿಯರು ಮಾಡುವ ರೇಸ್, ಇತರರ ಜೀವಕ್ಕೆ ಹಾನಿಯಾಗ್ತಿರುವುದಂತು ಸುಳ್ಳಲ್ಲ. ಇನ್ನಾದರೂ ಪೊಲೀಸರು ಎಚ್ಚೆತ್ತು ಹೆದ್ದಾರಿಯಲ್ಲಿ ರೇಸ್ ಬೈಕ್ ಸವಾರರಿಗೆ ಕಡಿವಾಣ ಹಾಕುವ ಕೆಲಸ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು