AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ದಕ್ಷಿಣ ಭಾಗದವರು ಆಕ್ಸಿಜನ್ ಬೇಕಿದ್ದಲ್ಲಿ 080- 61914960ಕ್ಕೆ ಕರೆ ಮಾಡಿ: ಸಂಸದ ತೇಜಸ್ವಿ ಸೂರ್ಯ

Tejasvi Surya Oxy Bank: ಟೋರಿಕ್ಷಾ ಚಾಲಕರು ರೋಗಿಗಳ ಮನೆಗೆ ಕಾನ್ಸಂಟ್ರೇಟರ್​ಗಳನ್ನು ತಲುಪಿಸುತ್ತಾರೆ. 350 ಕಾನ್ಸಂಟ್ರೇಟರ್ ಗಳು ಪೇಟಿಎಂ ಕಂಪನಿಯಿಂದ ಜಯನಗರದ ಆಸ್ಪತ್ರೆಗೆ ಕಾನ್ಸಂಟ್ರೇಟರ್​ಗಳು ಬರಲಿದೆ ಎಂದು ಅವರು ತಿಳಿಸಿದರು.

ಬೆಂಗಳೂರು ದಕ್ಷಿಣ ಭಾಗದವರು ಆಕ್ಸಿಜನ್ ಬೇಕಿದ್ದಲ್ಲಿ 080- 61914960ಕ್ಕೆ ಕರೆ ಮಾಡಿ: ಸಂಸದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ
Follow us
guruganesh bhat
|

Updated on:May 09, 2021 | 8:28 PM

ಬೆಂಗಳೂರು: ನಗರದಲ್ಲಿ ಐಸಿಯು ಬೆಡ್​ಗಳ ಸಮಸ್ಯೆ ಎದ್ದು ಕಾಣಿಸುತ್ತಿದೆ. ಹೀಗಾಗಿ ವಿದೇಶದಲ್ಲಿರುವ ಕನ್ನಡಿಗರ ಸಹಾಯದಿಂದ ಬೆಂಗಳೂರು ದಕ್ಷಿಣ ಭಾಗದ ಜನರಿಗಾಗಿ ಆಕ್ಸಿ ಬ್ಯಾಂಕ್​ಗೆ ಚಾಲನೆ ನೀಡುತ್ತಿದ್ದೇವೆ. ಆಮ್ಲಜನಕ ಸಮಸ್ಯೆ ಇರುವವರಿಗೆ ಆಕ್ಸಿ ಬ್ಯಾಂಕ್​ನಿಂದ ಅನುಕೂಲವಾಗಲಿದೆ. ಸಹಾಯವಾಣಿ ಸಂಖ್ಯೆ 080- 61914960 ಕರೆ ಮಾಡಿದರೆ ಅಗತ್ಯವಿರುವವರಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ದೊರೆಯಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.

ವಿದೇಶಿ ಕನ್ನಡಿಗರ ಸಹಾಯದಿಂದ ಒಟ್ಟು 1 ಸಾವಿರ ಆಕ್ಸಿ ಬ್ಯಾಂಕ್​​​ಗಳನ್ನು ಸ್ಥಾಪಿಸುತ್ತೇವೆ. ಆಟೋರಿಕ್ಷಾ ಚಾಲಕರು ರೋಗಿಗಳ ಮನೆಗೆ ಕಾನ್ಸಂಟ್ರೇಟರ್​ಗಳನ್ನು ತಲುಪಿಸುತ್ತಾರೆ. ಪೇಟಿಎಂ ಕಂಪನಿಯಿಂದ ಜಯನಗರದ ಆಸ್ಪತ್ರೆಗೆ 350 ಕಾನ್ಸಂಟ್ರೇಟರ್​ಗಳು ಬರಲಿದೆ. ಈ ಸೇವೆ ಸಂಪೂರ್ಣ ಉಚಿತವಾಗಿರಲಿದೆ ಎಂದು ಅವರು ಮಾಹಿತಿ ನೀಡಿದರು.

ಈಗಾಗಲೇ 100 ಜನ ಕೋವಿಡ್ ಸೋಂಕಿತರಿಗೆ ಹಾಗೂ ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾದ 150 ರೋಗಿಗಳಿಗೆ ಮನೆಗೇ ಕಾನ್ಸನ್ಟ್ರೇಟರ್ ಸೇವೆ ಒದಗಿಸಲಾಗಿದೆ. ಕೊವಿಡ್​ನ ಅಲ್ಪ ಗುಣಲಕ್ಷಣಗಳನ್ನು ಹೊಂದಿದ ಹಲವು ರೋಗಿಗಳ ಆರೋಗ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಒಮ್ಮೆಗೆ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಆಸ್ಪತ್ರೆ ಬೆಡ್ ಹಂಚಿಕೆಗಿಂತ ಪೂರ್ವದಲ್ಲಿ ಆಕ್ಸಿಜನ್ ಒದಗಿಸಿದಲ್ಲಿ ರೋಗಿಗಳಿಗೆ ಅತ್ಯಂತ ಹೆಚ್ಚಿನ ಸಹಾಯವಾಗಲಿದ್ದು, ಮನೆಯಲ್ಲಿ ಇದ್ದುಕೊಂಡೇ ರೋಗಿಗಳಿಗೆ ಚಿಕಿತ್ಸೆ ನೀಡಬಹುದು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.

ಕೊವಿಡ್-19 ಸೋಂಕಿನಿಂದ ಬಳಲುತ್ತಿರುವ ನಾಗರಿಕರು, ಕೊವಿಡ್ ರಕ್ಷಾ ಸಹಾಯವಾಣಿ 080 6191 4960 ಸಂಖ್ಯೆಗೆ ಕರೆ ಮಾಡಿದಲ್ಲಿ ಸ್ವಯಂಸೇವಕರು ಕರೆಗೆ ಸ್ಪಂದಿಸಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಅನ್ನು ಅವರ ಮನೆಗೇ ನೇರವಾಗಿ ತಲುಪಿಸಲಾಗುತ್ತದೆ. ರೋಗಿಗಳ ಹೆಸರು, ವಯಸ್ಸು,ದೂರವಾಣಿ ಸಂಖ್ಯೆ,ಆಕ್ಸಿಜನ್ ಸ್ಯಾಚುರೇಷನ್ ಪ್ರಮಾಣ, ಆರೋಗ್ಯ ಸ್ಥಿತಿಗತಿಗಳ ವಿವರಗಳನ್ನು ಸಲ್ಲಿಸಿದ ನಂತರ ಆಧಾರ್ ಕಾರ್ಡ್, ಪಲ್ಸ್ ಆಕ್ಸಿಮೀಟರ್ ರೀಡಿಂಗ್ ನೊಂದಿಗೆ ರೋಗಿಯ ಫೋಟೋ ಕಳುಹಿಸಬೇಕಾಗುತ್ತದೆ. ಎಂ ಪಿ ಕಚೇರಿಯ ಸ್ವಯಂಸೇವಕರು ಡಾಕ್ಟರ್ ಪ್ರಿಸ್ಕ್ರಿಪ್ಷನ್ ಧೃಢೀಕರಿಸಿಕೊಂಡ ನಂತರ ಆಕ್ಸಿಜನ್ ಕಾನ್ಸನ್ಟ್ರೇಟರ್ ಅನ್ನು ನೇರವಾಗಿ ಮನೆಗೆ ತಲುಪಿಸುವ ವ್ಯವಸ್ಥೆಯನ್ನು ಆಟೋ ಅಥವಾ ಗೂಡ್ಸ್ ವೆಹಿಕಲ್ ಗಳಿಂದ ಮಾಡಲಿದ್ದಾರೆ. ಸುರಕ್ಷತೆಗಾಗಿ 3 ಸಾವಿರ ರೂ,ಗಳ ಡಿಪಾಸಿಟ್ ಅನ್ನು ಪಡೆಯಲಾಗುತ್ತಿದ್ದು, ಕಾನ್ಸನ್ಟ್ರೇಟರ್ ಮರಳಿ ಪಡೆಯುವಾಗ ಅದನ್ನು ಹಿಂದಿರುಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ:  ಸಂಸದೆ ಸುಮಲತಾ ಅಂಬರೀಷ್ ವಿಶೇಷ ಸಂದರ್ಶನ: ‘ಕರ್ತವ್ಯ ದೋಷದಿಂದ ಒಂದು ಜೀವ ಹೋದ್ರೂ ಅದಕ್ಕೆ ನಾವೇ ಜವಾಬ್ದಾರಿ…’

ಕೊವಿಡ್ ನಿಭಾಯಿಸಲು ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯಿಂದ 6 ಸಲಹೆ

(Bengaluru south MP Tejasvi Surya star Oxygen bank from the help of foreign Kannadigas)

Published On - 8:01 pm, Sun, 9 May 21

ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ
ಸಮಾಜದಲ್ಲಿ ಈ ರಾಶಿಯವರ ಗೌರವ ಹೆಚ್ಚಾಗುತ್ತದೆ, ಸಹೋದ್ಯೋಗಿಗಳ ಬೆಂಬಲ