ಯೋಗೀಶ್ ಗೌಡ ಕೊಲೆ ಕೇಸ್: ಕೈ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಜನ ದೋಷಿ, ಕೋರ್ಟ್ ಮಹತ್ವದ ತೀರ್ಪು

Dharwad Yogesh Gowda Murder Case verdict: 2016 ಜೂನ್​​ನಲ್ಲಿ ಧಾರವಾಡ (Dharwad) ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಇಂದು (ಏಪ್ರಿಲ್ 15) ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕಟಿಸಿದೆ. ಸತತ 10 ವರ್ಷಗಳ ವಿಚಾರಣೆ ಬಳಿಕ ಕೋರ್ಟ್, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ ಇತರೆ ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ.

ಯೋಗೀಶ್ ಗೌಡ ಕೊಲೆ ಕೇಸ್: ಕೈ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಜನ ದೋಷಿ, ಕೋರ್ಟ್ ಮಹತ್ವದ ತೀರ್ಪು
Dharwad Yogesh Gowda Murder Case
Edited By:

Updated on: Apr 15, 2026 | 7:43 PM

ಬೆಂಗಳೂರು/ಧಾರವಾಡ, (ಏಪ್ರಿಲ್ 15): ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ  ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ (Dharwad Yogesh Gowda Murder Case) ಅಂತಿಮ ತೀರ್ಪು ಪ್ರಕಟವಾಗಿದೆ. ಮಾಜಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 21ರ ಪೈಕಿ 17  ಮಂದಿ ಆರೋಪಿಗಳು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Bengaluru Special Court Verdict)   ಇಂದು (ಏಪ್ರಿಲ್ 15) ತೀರ್ಪು ನೀಡಿ ಆದೇಶ ಹೊರಡಿಸಿದೆ.  ಹೀಗಾಗಿ ಶಾಸಕ  ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ ಹೋಗಬೇಕಿದ್ದು,  ನಾಳೆ (ಏಪ್ರಿಲ್ 16) ಶಿಕ್ಷೆ  ಪ್ರಮಾಣದ ಬಗ್ಗೆ ವಾದಮಂಡನೆ ನಡೆಯಲಿದೆ. ಬಳಿಕ ಕೋರ್ಟ್ ಶಿಕ್ಷೆ ಪ್ರಮಾಣವನ್ನೂ ಸಹ ಪ್ರಕಟಿಸಲಿದೆ.

21ರಲ್ಲಿ 17 ಮಂದಿ ಅಪರಾಧಿಗಳು

21 ಆರೋಪಿಗಳ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ.  ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ.  ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ.  ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನ ಬಿಡುಗಡೆಗೆ ಕೋರ್ಟ್ ಆದೇಶಿಸಿದೆ.

ಇದನ್ನೂ ಓದಿ: ಕೊಲೆ ಅಪರಾಧಿಯ ಶಾಸಕ ಸ್ಥಾನಕ್ಕೂ ಕುತ್ತು: ವಿನಯ್ ಕುಲಕರ್ಣಿ ಮುಂದಿರುವ ಕಾನೂನು ಆಯ್ಕೆಗಳೇನು?

ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್.

ಪ್ರಕರಣದ ಹಿನ್ನೆಲೆ

ಧಾರವಾಡದ ಜಿಲ್ಲಾ  ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂನ್ 15ರಂದು  ಸಪ್ತಾಪುರ ಬಡಾವಣೆಯ ಜಿಮ್​​ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದ್ರೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ತಿಳಿದು ಬಂದಿತ್ತು. ಅಲ್ಲದೇ ಈ ಕೊಲೆಯಲ್ಲಿ ವಿನಯ್‌ ಕುಲಕರ್ಣಿ ಕೈವಾಡವಿರುವ ಶಂಕೆ ವ್ಯಕ್ತವಾಗಿತ್ತು.  ಈ ಹಿನ್ನೆಲೆಯಲ್ಲಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇತ್ತೀಚೆಗಷ್ಟೇ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು.

2016 ಜೂನ್‌ನಲ್ಲಿ ಯೋಗಿಶ್ ಗೌಡ ಕೊಲೆಯಾಗಿತ್ತು. ಶಾಸಕ ವಿನಯ್ ಕುಲಕರ್ಣಿ (Vinay Kulkarni) ಮೇಲೆ ಕೊಲೆಗೆ ಒಳಸಂಚು ಆರೋಪ ಕೇಳಿಬಂದಿತ್ತು. ತನಿಖೆ ನಡೆಸಿದ ಪೊಲೀಸರ ಮುಂದೆ ಆರು ಜನ ಆರೋಪಿಗಳು ಶರಣಾಗಿದ್ದರು. ಯೋಗಿಶ್ ಗೌಡ ಕುಟುಂಬಸ್ಥರ ಮನವಿ ಮೇರೆಗೆ ತನಿಖೆಯನ್ನು ಸಿಬಿಐಗೆ ನೀಡಲಾಗಿತ್ತು. 2019ರಲ್ಲಿ ಸಿಬಿಐ ಗೆ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ತನಿಖೆ ನಡಸಿದ್ದ ಸಿಬಿಐ ಅಧಿಕಾರಿಗಳು ಶಾಸಕ ವಿನಯ್ ಕುಲಕರ್ಣಿಯನ್ನು ಬಂಧಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:30 pm, Wed, 15 April 26

Follow Us