AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ: ಯಾವುದೇ ನಿರ್ದೇಶನ ನೀಡದೇ ಪಿಐಎಲ್​ ವಿಚಾರಣೆ ಜೂ 12ಕ್ಕೆ ಮುಂದೂಡಿದ ಹೈಕೋರ್ಟ್

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ಮಾಡಲಾಗಿದೆ. ಸರ್ಕಾರದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೈಕೋರ್ಟ್ ತಿಳಿಸಿದ್ದು, ಯಾವುದೇ ನಿರ್ದೇಶನ ನೀಡದೇ ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ.

ಬೆಂಗಳೂರು ಕಾಲ್ತುಳಿತ: ಯಾವುದೇ ನಿರ್ದೇಶನ ನೀಡದೇ ಪಿಐಎಲ್​ ವಿಚಾರಣೆ ಜೂ 12ಕ್ಕೆ ಮುಂದೂಡಿದ ಹೈಕೋರ್ಟ್
ಕಾಲ್ತುಳಿತ ಪ್ರಕರಣ
Ramesha M
| Edited By: |

Updated on:Jun 10, 2025 | 11:43 AM

Share

ಬೆಂಗಳೂರು, ಜೂನ್​ 10: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತದಲ್ಲಿ ಆರ್​ಸಿಬಿಯ (RCB) 11 ಅಭಿಮಾನಿಗಳ ಸಾವು ರಾಜ್ಯ ಸರ್ಕಾರಕ್ಕೆ ಭಾರಿ ತಲೆ ನೋವಾಗಿದೆ. ಈ ವಿಚಾರವಾಗಿ ಹೈಕಮಾಂಡ್​ ಜೊತೆ​ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ಹೋಗಿದ್ದಾರೆ. ಇತ್ತ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್‌ (high court), ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಯಾವುದೇ ನಿರ್ದೇಶನ ನೀಡದೇ ಅರ್ಜಿಗಳ ವಿಚಾರಣೆಯನ್ನು ಜೂ.12 ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

ದುರಂತದ ಬಳಿಕ ಯಾವುದೇ ಪ್ರಕರಣಗಳನ್ನು ದಾಖಲಾಗಿರಲಿಲ್ಲ. ಹೈಕೋರ್ಟೇ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತ್ತು. ಹಲವರಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ವಿಚಾರಣೆಗೆ ಮನವಿ ಹಿನ್ನೆಲೆ ನ್ಯಾ.ವಿ.ಕಾಮೇಶ್ವರ ರಾವ್ ಮತ್ತು ನ್ಯಾ.ಸಿ.ಎಂ.ಜೋಶಿ ಅವರ ಪೀಠದಿಂದ ಇಂದು ವಿಚಾರಣೆ ಮಾಡಿದ್ದು, ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ತೀರ್ಮಾನ ನೀಡುವುದಾಗಿ ಹೇಳಿ ಜೂ.12 ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯವೆಂದ ಬಿವೈ ವಿಜಯೇಂದ್ರ: ಸಿಎಂಗೆ ಬಹಿರಂಗ ಪತ್ರ

ಇದನ್ನೂ ಓದಿ
Image
Stampede: ಸರ್ಕಾರದ ಅಮಾನತು ಪ್ರಶ್ನಿಸಿ ಸಿಎಟಿಗೆ ಐಪಿಎಸ್​ ಅಧಿಕಾರಿ ಅರ್ಜಿ
Image
ದಯಾನಂದ್ ಅಮಾನತು: ಭಾವನಾತ್ಮಕ ಆಕ್ರೋಶ ಪೊಲೀಸರ ನೈತಿಕ ಸ್ಥೈರ್ಯ ಹೆಚ್ಚಿಸದು
Image
ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು
Image
ಬೆಂಗಳೂರು ಕಾಲ್ತುಳಿತ ಕೇಸ್ ಸಿಐಡಿಗೆ, ಬೆಂಗಳೂರು ಕಮಿಷನರ್ ಅಮಾನತು..!

ಜೂನ್‌ 5ರಂದು ನಡೆದ ವಿಚಾರಣೆಯಲ್ಲಿ ಘಟನೆಯ ಸಂಪೂರ್ಣ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಕೋರ್ಟ್ ಸೂಚಿಸಿತ್ತು. ಆದರೆ ಸರ್ಕಾರ ಯಾವುದೇ ವರದಿ ಸಲ್ಲಿಸಿಲ್ಲ. ವಿಚಾರಣೆ ವೇಳೆ ಸರ್ಕಾರದಿಂದ ಇನ್ನೂ ವರದಿ ಏಕೆ ಸಲ್ಲಿಸಿಲ್ಲ ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ. ಈ ವೇಳೆ ಹೈಕೋರ್ಟ್​ಗೆ ಎಜಿ ಶಶಿಕಿರಣ್ ಶೆಟ್ಟಿ ಉತ್ತರಿಸಿದ್ದು, ನಾವು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದೇವೆ ಎಂದರು.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ: ಇನ್ಮುಂದೆ ಆರೋಗ್ಯ ಇಲಾಖೆಯ ಅನುಮತಿ ಕಡ್ಡಾಯ

ಮ್ಯಾಜಿಸ್ಟೀರಿಯಲ್ ತನಿಖೆ, ನ್ಯಾಯಾಂಗ ತನಿಖೆ ವರದಿ ಸಲ್ಲಿಸುತ್ತೇವೆ. ತನಿಖೆಗೆ ಮೊದಲೇ ಸರ್ಕಾರ ತೀರ್ಮಾನಿಸಿದೆ ಎಂದು ವಿವಾದ ಬೇಡ. ಹೀಗಾಗಿ ಒಂದು ತಿಂಗಳು ಕಾಲಾವಕಾಶ ನೀಡುವಂತೆ ಎಜಿ ಶಶಿಕಿರಣ್ ಶೆಟ್ಟಿ ಮನವಿ ಮಾಡಿದರು. ಜೂನ್ 12ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡುವಂತೆ ಹೈಕೋರ್ಟ್​ ಸೂಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:21 am, Tue, 10 June 25

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ