AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಾಲ್ತುಳಿತ: ಆರ್​ಸಿಬಿ ವಿರುದ್ಧ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ

ಬೆಂಗಳೂರು ಕಾಲ್ತುಳಿತ ಘಟನೆ ಸಂಬಂಧ ಕರ್ನಾಟಕ ಸಚಿವ ಸಂಪುಟ ಗುರುವಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಆರ್​ಸಿಬಿ, ಡಿಎನ್​ಎ ಹಾಗೂ ಕೆಎಸ್​ಸಿಎ ವಿರುದ್ಧ ಕ್ರಿಮಿನಲ್ ಕೇಸ್ ಹಾಗೂ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧರಿಸಿದೆ. ಇದರೊಂದಿಗೆ, ಆರ್​ಸಿಬಿ ಸಂಕಷ್ಟಕ್ಕೆ ಸಿಲುಕಲಿದೆ. ಸಂಪುಟ ಕೈಗೊಂಡ ನಿರ್ಧಾರಗಳ ಮಾಹಿತಿ ಇಲ್ಲಿದೆ.

ಬೆಂಗಳೂರು ಕಾಲ್ತುಳಿತ: ಆರ್​ಸಿಬಿ ವಿರುದ್ಧ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ
ಆರ್​ಸಿಬಿ ವಿರುದ್ಧ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ
ಪ್ರಸನ್ನ ಗಾಂವ್ಕರ್​
| Edited By: |

Updated on:Jul 24, 2025 | 1:06 PM

Share

ಬೆಂಗಳೂರು, ಜುಲೈ 24: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ (IPL) ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಅಷ್ಟೇ ಅಲ್ಲದೆ ಆರ್​ಸಿಬಿ, ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿ ಡಿಎನ್​ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೂಡ ಸಚಿವ ಸಂಪುಟ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್​ಸಿಬಿ, ಡಿಎನ್​ಎ ಹಾಗೂ ಕೆಎಸ್​​​ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೂಡ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.

ಕ್ರಿಮಿನಲ್ ಕೇಸ್: ಯಾರಿಗೆಲ್ಲ ಸಂಕಷ್ಟ?

ಇದೀಗ ಸಚಿವ ಸಂಪುಟ ಕ್ರಿಮಿನಲ್ ಕೇಸ್​​ಗೆ ತೀರ್ಮಾನ ಕೈಗೊಂಡಿರುವುದರಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಎ.ಶಂಕರ್, ಮಾಜಿ ಖಜಾಂಚಿ ಜಯರಾಂ, ಆರ್​​ಸಿಬಿ ತಂಡದ ರಾಜೇಶ್ ಮೆನನ್, ಡಿಎನ್​ಎ ನೆಟ್​ವರ್ಕ್​ ಲಿಮಿಟೆಡ್​​ ಎಂಡಿ ವೆಂಕಟ್ ವರ್ಧನ್ , ಡಿಎನ್​ಎ ನೆಟ್​ವರ್ಕ್​ ಲಿಮಿಟೆಡ್ ಉಪಾಧ್ಯಕ್ಷ ಸುನೀಲ್ ಮಾಥೂರ್ ಇವರಿಗೆ ಸಂಕಷ್ಟ ಎದುರಾಗಲಿದೆ.

ಇದನ್ನೂ ಓದಿ
Image
ವಿರಾಟ್ ಕೊಹ್ಲಿ ಮೇಲೂ ಕೇಸ್ ಆಗುತ್ತಾ? ಪರಮೇಶ್ವರ್ ಕೊಟ್ಟರು ಮಾಹಿತಿ
Image
ಸಿಎಂ ಕೊಹ್ಲಿ ಅಭಿಮಾನಿಗಳ ಕ್ಷಮೆ ಕೇಳಬೇಕೆಂದ ಮಾಜಿ ಡಿವೈಎಸ್​​ಪಿ: ಕಾರಣ ಏನು?
Image
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
Image
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು

ಬೆಂಗಳೂರು ನಗರ ಮಾಜಿ ಪೊಲೀಸ್ ಕಮಿಷನರ್​ ಬಿ.ದಯಾನಂದ್​, ಐಪಿಎಸ್​ ಅಧಿಕಾರಿಗಳಾದ ವಿಕಾಸ್​ ಕುಮಾರ್​ ವಿಕಾಸ್​, ಶೇಖರ್​, ಕಬ್ಬನ್ ಪಾರ್ಕ್ ಸಬ್​ ಡಿವಿಷನ್​ ಎಸಿಪಿ ಬಾಲಕೃಷ್ಣ, ಕಬ್ಬನ್ ಪಾರ್ಕ್‌ ಠಾಣೆಯ ಪಿಐ​ ಗಿರೀಶ್ ವಿರುದ್ಧವೂ ಪ್ರಕರಣ ದಾಖಲಾಗಲಿದೆ.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ವಿರಾಟ್ ಕೊಹ್ಲಿ ಮೇಲೂ ಕೇಸ್ ಆಗುತ್ತಾ? ಪರಮೇಶ್ವರ್ ಕೊಟ್ಟರು ಮಹತ್ವದ ಮಾಹಿತಿ

ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಸುಮಾರು 40 ಮಂದಿ ಗಾಯಗೊಂಡಿದ್ದರು. ಘಟನೆಯು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ರಾಜಕೀಯವಾಗಿಯೂ ತೀವ್ರ ಗದ್ದಲಕ್ಕೆ ಕಾರಣವಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Thu, 24 July 25

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ