AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟೆಕ್‌ ಸಮಿಟ್‌ ದಿನಾಂಕ ನಿಗದಿ; ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ಗೆ ಆಹ್ವಾನ

ಈ ಟೆಕ್‌ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸುವ ಉದ್ದೇಶ ಇದ್ದು ಅವರನ್ನು ಆಹ್ವಾನಿಸಲಾಗುವುದು. ಅದೇ ರೀತಿ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌ ಅವರನ್ನು ಸಮಿಟ್‌ಗೆ ಆಹ್ವಾನಿಸಲು ನಿರ್ಧರಿಸಲಾಗಿದೆ.

ಬೆಂಗಳೂರು ಟೆಕ್‌ ಸಮಿಟ್‌ ದಿನಾಂಕ ನಿಗದಿ;  ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​ಗೆ ಆಹ್ವಾನ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Jul 05, 2021 | 10:27 PM

Share

ಬೆಂಗಳೂರು: ರಾಜ್ಯ ಸರಕಾರ ಆಯೋಜಿಸುವ ಪ್ರತಿಷ್ಠಿತ ಬೆಂಗಳೂರು ಟೆಕ್‌ ಸಮಿಟ್‌-‌2021 (ಬಿಟಿಎಸ್) ನವೆಂಬರ್‌ 17-18 ಮತ್ತು 19ರಂದು ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಹೇಳಿದರು. ಟೆಕ್‌ ಸಮಿಟ್‌ಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಗಳ ಜತೆ ಪೂರ್ವಭಾವಿ ಸಭೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಕಳೆದ ವರ್ಷ ಈ ಸಮಿಟ್‌ಗೆ ‘ನೆಕ್ಸ್ಟ್‌ ಇಸ್‌ ನೌ’ (Next is Now) ಎಂಬ ಟ್ಯಾಗ್‌ಲೈನ್‌ ಇತ್ತು. ಈ ವರ್ಷ ‘ಡ್ರೈವಿಂಗ್ ದಿ ನೆಕ್ಸ್ಟ್‌’ (Driving th Next) ಎನ್ನುವ ಟ್ಯಾಗ್‌ಲೈನ್‌ ನಿಗದಿ ಮಾಡಲಾಗಿದೆ ಎಂದರು. ಕೋವಿಡ್‌ ಕಾರಣಕ್ಕೆ ಈ ವರ್ಷವೂ ವರ್ಚುಯಲ್‌ ಮತ್ತು ಭೌತಿಕ ವೇದಿಕೆ ಒಳಗೊಂಡಂತೆ ಹೈಬ್ರಿಡ್‌ ಪದ್ಧತಿಯಲ್ಲಿ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರಿಂದ ಉದ್ಘಾಟನೆ ಈ ಟೆಕ್‌ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸುವ ಉದ್ದೇಶ ಇದ್ದು ಅವರನ್ನು ಆಹ್ವಾನಿಸಲಾಗುವುದು. ಅದೇ ರೀತಿ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌ ಅವರನ್ನು ಸಮಿಟ್‌ಗೆ ಆಹ್ವಾನಿಸಲು ನಿರ್ಧರಿಸಲಾಗಿದೆ. ಜತೆಗೆ, ತಂತ್ರಜ್ಞಾನ ಮತ್ತು ಹೆಲ್ತ್‌ಕೇರ್‌ ಕ್ಷೇತ್ರದ ಪ್ರಮುಖ ಕಂಪನಿಗಳ ಮುಖ್ಯಸ್ಥರನ್ನು ಕರೆಯುವ ಉದ್ದೇಶ ಇದೆ ಎಂದು ಹೇಳಿದರು.

ಬಿಯಾಂಡ್‌ ಬೆಂಗಳೂರು ಟೆಕ್‌ ಸಮಿಟ್‌ಗೆ ಪೂರ್ವಭಾವಿಯಾಗಿ ಬಿಯಾಂಡ್‌ ಬೆಂಗಳೂರು ಉಪಕ್ರಮದ ಅಡಿಯಲ್ಲಿ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲಿ ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಟೆಕ್‌ ಸಮಿಟ್‌ಗಳನ್ನು ನಡೆಸಲಾಗುವುದು. ಈ ಕಾರ್ಯಕ್ರಮಗಳನ್ನೂ ದೊಡ್ಡ ಪ್ರಮಾಣದಲ್ಲೇ ನಡೆಸಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

ಹಿಂದಿನ ಶೃಂಗದಲ್ಲಿ ಗ್ಲೋಬಲ್‌ ಅಲೆಯನ್ಸ್‌ ಒಕ್ಕೂಟಕ್ಕೆ ಹೆಚ್ಚು ಒತ್ತು ನೀಡಲಾಗಿತ್ತು. ಈ ಬಾರಿ ಭಾರತೀಯ ಹೂಡಿಕೆದಾರರ ಮೈತ್ರಿಕೂಟಕ್ಕೆ ಮಹತ್ವ ಕೊಡಲಾಗುತ್ತಿದೆ. ಈ ಮೂಲಕ ವಿವಿಧ ರಾಜ್ಯಗಳು ಹಾಗೂ ಎತ್ತರದ ಸಾಧನೆ ಮಾಡಿರುವ ಖಾಸಗಿ ಕಂಪನಿ, ವ್ಯಕ್ತಿಗಳು ಭಾಗಿಯಾಗವಂತೆ ಮಾಡಲಾಗುತ್ತಿದೆ ಎಂದು ಡಿಸಿಎಂ ವಿವರಿಸಿದರು.

ಈ ಮೂರು ನಗರಗಳಲ್ಲಿ ನಡೆಯಲಿರುವ ಸಭೆಗಳಲ್ಲಿ ವರ್ಚುಯಲ್‌ ವೇದಿಕೆಯಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಐಟಿ ಸಚಿವ ರವಿಶಂಕರ್‌ ಪ್ರಸಾದ್‌, ಆರೋಗ್ಯ ಸಚಿವ ಡಾ.ಹರ್ಷವರ್ಧನ್‌, ಸಾರಿಗೆ ಸಚಿವ ನಿತಿನ್‌ ಗಡ್ಕರಿ ಭಾಗವಹಿಸಲಿದ್ದಾರೆ. ಜತೆಗೆ, ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್.‌ಯಡಿಯೂರಪ್ಪ ಅವರು ಪಾಲ್ಗೊಳ್ಳುವರು ಎಂದು ಡಿಸಿಎಂ ಮಾಹಿತಿ ನೀಡಿದರು.

ಈ ಸಭೆಗಳಲ್ಲಿ ರಾಜ್ಯದ ಉದ್ಯಮಶೀಲತಾ ಗುಣಮಟ್ಟದ ಚೌಕಟ್ಟು ಮಾಹಿತಿ ನೀಡಿದರು ಜಿಲ್ಲೆಗಳಲ್ಲಿ ನಡೆಯುವ ಟೆಕ್‌ ಸಮಿಟ್‌ ಪೂರ್ವಭಾವಿ ಸಭೆಗಳಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM), ಎಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ (ER &D) ಹಾಗೂ ಭಾರತೀಯ ಎಲೆಕ್ಟ್ರಾನಿಕ್ ಮತ್ತು ಸೆಮಿಕಂಡಕ್ಟರ್ ಅಸೋಸಿಯೇಷನ್ (IESA)ಗೆ ಸಂಬಂಧಿಸಿದ ವರದಿಗಳನ್ನು ಅನಾವರಣ ಮಾಡಲಾಗುವುದು ಎಂದು ಡಿಸಿಎಂ ತಿಳಿಸಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಹಾಗೂ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ ಕೂಡ ಈ ಬಾರಿಯ ಬಿಟಿಎಸ್ ನಲ್ಲಿ ಹೆಚ್ಚಿನ ಪಾತ್ರ ವಹಿಸಲಿವೆ ಎಂದು ಅವರು ತಿಳಿಸಿದರು.

ರಾಜ್ಯದ ಮಾಹಿತಿ ತಂತ್ರಜ್ಞಾನ ವಿಷನ್‌ ಗ್ರೂಪ್‌ ಅಧ್ಯಕ್ಷ ಕ್ರಿಸ್‌ ಗೋಪಾಲ ಕೃಷ್ಣ, ಜೈವಿಕ ತಂತ್ರಜ್ಣಾನ ವಿಷನ್ ಗ್ರೂಪ್ ನ ಅಧ್ಯಕ್ಷೆ ಕಿರಣ್‌ ಮಜುಂದಾರ್‌ ಶಾ, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕರೂ ಆದ ಮುಖ್ಯಮಂತ್ರಿಗಳ ಸಲಹೆಗಾರ ಪ್ರಶಾಂತ್‌ ಪ್ರಕಾಶ್‌, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Bengaluru Tech Summit 2020 ನೆಕ್ಸ್ಟ್‌ ಈಸ್‌ ನೌ! ಎಂದ ಕರ್ನಾಟಕ

VivaTech Summit 2021: ಕೊರೊನಾ ನಿರ್ವಹಣೆಗೆ ಆವಿಷ್ಕಾರ, ನವೋದ್ಯಮಗಳ ಕೊಡುಗೆ ನೆನೆದ ಪ್ರಧಾನಿ ನರೇಂದ್ರ ಮೋದಿ

Published On - 10:26 pm, Mon, 5 July 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?