AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್​ ಟ್ರಂಪ್​ ಹಾಗೂ ಮಸ್ಕ್​ರಿಂದ​ ಸಹಾಯ ಕೇಳಿದ್ದ ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್

ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್​ ಎಂಬುವವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 24 ಪುಟಗಳ ಡೆತ್​ ನೋಟ್ ಒಂದು ವಿಡಿಯೋವನ್ನು ಮಾಡಿಟ್ಟು ಸಾವನ್ನಪ್ಪಿದ್ದಾರೆ. ಅವರ ಡೆತ್​ನೋಟ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹಾಗೂ ಎಲಾನ್ ಮಸ್ಕ್​ ಬಳಿ ಸಹಾಯ ಕೇಳಿದ್ದಾರೆ.

ಡೊನಾಲ್ಡ್​ ಟ್ರಂಪ್​ ಹಾಗೂ ಮಸ್ಕ್​ರಿಂದ​ ಸಹಾಯ ಕೇಳಿದ್ದ ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್
ಟೆಕ್ಕಿ
ನಯನಾ ರಾಜೀವ್
| Edited By: |

Updated on:Dec 12, 2024 | 11:00 AM

Share

ಪತ್ನಿಯ ಕಿರುಕುಳದಿಂದ ಬೇಸತ್ತು ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್​ ಎಂಬುವವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 24 ಪುಟಗಳ ಡೆತ್​ ನೋಟ್ ಒಂದು ವಿಡಿಯೋವನ್ನು ಮಾಡಿಟ್ಟು ಸಾವನ್ನಪ್ಪಿದ್ದಾರೆ. ಅವರ ಡೆತ್​ನೋಟ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹಾಗೂ ಎಲಾನ್ ಮಸ್ಕ್​ ಬಳಿ ಸಹಾಯ ಕೇಳಿದ್ದಾರೆ.

ತನ್ನ ಪತ್ನಿ ನಿಖಿತಾ ಹಾಗೂ ಆಕೆಯ ಕುಟುಂಬದವರು ಚಿತ್ರಹಿಂಸೆ ನೀಡುತ್ತಿದ್ದರು, ನನ್ನದೇನೂ ತಪ್ಪಿಲ್ಲದಿದ್ದರೂ ತನ್ನ ಮೇಲೆ 9 ಪ್ರಕರಣಗಳನ್ನು ದಾಖಲಿಸಿದ್ದರು. ಆರು ಪ್ರಕರಣಗಳು ಕೆಳ ನ್ಯಾಯಾಲಯದಲ್ಲಿದ್ದರೆ ಮೂರು ಪ್ರಕರಣಗಳು ಹೈಕೋರ್ಟ್​ನಲ್ಲಿವೆ. ಒಂದು ಬಾರಿ ಒಂದು ಪ್ರಕರಣವನ್ನು ವಾಪಸ್ ಪಡೆದಿದ್ದಳು ಆದರೆ ಕೊನೆಗೆ ಅದರ ಬದಲು ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಳು ಎನ್ನುವ ವಿಚಾರವನ್ನು ಅವರು ಬರೆದಿದ್ದಾರೆ.

ಇರುವುದು ಬೆಂಗಳೂರಿನಲ್ಲಿ ಆದರೆ 9 ಪ್ರಕರಣಗಳ ವಿಚಾರಣೆಗಾಗಿ ಪದೇ ಪದೇ ಉತ್ತರ ಪ್ರದೇಶಕ್ಕೆ ಹೋಗಬೇಕಿತ್ತು, ಜತೆಗೆ ಹಣದ ಬೇಡಿಕೆಯನ್ನು ಪೂರೈಸಿ ನನಗೆ ಸಾಕಾಗಿದೆ. ನಾನು ದುಡಿದಿರುವುದೆಲ್ಲಾ ಹಣವನ್ನು ಶತ್ರುಗಳನ್ನು ಸಾಕಲು ಕೊಡಬೇಕಾಗುತ್ತಿತ್ತು, ಅದರಿಂದ ಶತ್ರುಗಳು ಬಲವಾಗುತ್ತಾ ಹೋಗುತ್ತಿದ್ದಾರೆ ಎಂದು ಬರೆದಿದ್ದಾರೆ.

ಮತ್ತಷ್ಟು ಓದಿ: ಹೆಂಡತಿ ಕಾಟದಿಂದ ಬೆಂಗಳೂರಿನ ಇಂಜಿನಿಯರ್ ಆತ್ಮಹತ್ಯೆ; ಟ್ವಿಟ್ಟರ್​ನಲ್ಲಿ ಟ್ರೆಂಡ್ ಆಯ್ತು ಮೆನ್​ಟೂ ಹ್ಯಾಶ್​ಟ್ಯಾಗ್

ಭಾರತದಲ್ಲಿ ನರಮೇಧ ನಡೆಯುತ್ತಿದೆ, ಕೋಟಿಗಟ್ಟಲೆ ಜನರನ್ನು ರಕ್ಷಿಸಿ ವಾಕ್ ಸ್ವಾತಂತ್ರ್ಯವನ್ನು ಮರುಸ್ಥಾಪಿಸಿ ಎಂದು ಟ್ರಂಪ್ ಹಾಗೂ ಎಲಾನ್ ಮಸ್ಕ್​ಗೆ ಮನವಿ ಮಾಡಿದ್ದಾರೆ.

90 ನಿಮಿಷಗಳ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. ಸುಭಾಷ್ ಡೆಪ್ಯೂಟಿ ಜನರಲ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಟೆಕ್ಕಿ ಅವರು ತನ್ನ ಸಹೋದ್ಯೋಗಿಗಳು ಹಾಗೂ ಹಲವರಿಗೆ ಇ-ಮೇಲ್ ಹಾಗೂ ವಾಟ್ಸ್​ಆ್ಯಪ್ ವಿಡಿಯೋವನ್ನು ಕಳುಹಿಸಿದ್ದಾರೆ.

ಶವ ನೋಡುವುದೂ ಬೇಡ

ತನ್ನ ಮಗನನ್ನು ಪೋಷಕರಿಗೆ ಒಪ್ಪಿಸಲು ಕೇಳಿಕೊಂಡಿದ್ದು, ಯಾವುದೇ ಕಾರಣಕ್ಕೂ ತನ್ನ ಪತ್ನಿ ಹಾಗೂ ಆಕೆಯ ಮನೆಯವರು ತನ್ನ ಶವವನ್ನೂ ನೋಡಬಾರದು ಎಂದು ಬರೆದಿದ್ದಾರೆ.

ಗಿಫ್ಟ್​ ಬಾಕ್ಸ್​

ಗಿಫ್ಟ್ ಬಾಕ್ಸ್ಅನ್ನು ಮನೆಯಲ್ಲಿಟ್ಟು, ತನ್ನ ನಾಲ್ಕು ವರ್ಷದ ಪುತ್ರನಿಗೆ ತಲುಪಿಸುವಂತೆ ಉಲ್ಲೇಖಿಸಿದ್ದರು. ನಂತರ ‘JUSTICE IS DUE’ ಎಂಬ ಬರಹವಿರುವ ಪೋಸ್ಟರ್, ಹಾಗೂ ಪೂರ್ಣಗೊಳಿಸಿರುವ ತನ್ನ ಕೆಲಸಗಳ ಪಟ್ಟಿಯನ್ನ ಗೋಡೆಗೆ ಅಂಟಿಸಿ ಅತುಲ್​ ಸುಭಾಷ್​ ತನ್ನ ಬದುಕಿಗೆ ಕೊನೆಹಾಡಿದ್ದರು.

ನ್ಯಾಯ ಸಿಗುವವರೆಗೂ ಚಿತಾಭಸ್ಮ ನೀರಿನಲ್ಲಿ ಬಿಡಬೇಡಿ ತನಗೆ ನ್ಯಾಯ ಸಿಗುವವರೆಗೂ ಅವರ ಚಿತಾಭಸ್ಮವನ್ನು ನೀರಿನಲ್ಲಿ ಬಿಡುವುದು ಬೇಡ ಎಂದು ಸುಭಾಷ್ ಬರೆದಿದ್ದರು. ನ್ಯಾಯ ಕೊಡಲು ಸಾಧ್ಯವಾಗದಿದ್ದರೆ ನನ್ನ ಚಿತಾಭಸ್ಮವನ್ನು ನ್ಯಾಯಾಲಯದ ಮುಂದೆ ಚರಂಡಿಗೆ ಎಸೆಯಬೇಕು, ಈ ದೇಶದಲ್ಲಿ ಮನುಷ್ಯನ ಜೀವನವು ಗಟಾರವಾಗಿದೆ ಎಂದು ನೋವು ತೋಡಿಕೊಂಡಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Wed, 11 December 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ