AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್​ ಟ್ರಂಪ್​ ಹಾಗೂ ಮಸ್ಕ್​ರಿಂದ​ ಸಹಾಯ ಕೇಳಿದ್ದ ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್

ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್​ ಎಂಬುವವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 24 ಪುಟಗಳ ಡೆತ್​ ನೋಟ್ ಒಂದು ವಿಡಿಯೋವನ್ನು ಮಾಡಿಟ್ಟು ಸಾವನ್ನಪ್ಪಿದ್ದಾರೆ. ಅವರ ಡೆತ್​ನೋಟ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹಾಗೂ ಎಲಾನ್ ಮಸ್ಕ್​ ಬಳಿ ಸಹಾಯ ಕೇಳಿದ್ದಾರೆ.

ಡೊನಾಲ್ಡ್​ ಟ್ರಂಪ್​ ಹಾಗೂ ಮಸ್ಕ್​ರಿಂದ​ ಸಹಾಯ ಕೇಳಿದ್ದ ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್
ಟೆಕ್ಕಿ
ನಯನಾ ರಾಜೀವ್
| Edited By: |

Updated on:Dec 12, 2024 | 11:00 AM

Share

ಪತ್ನಿಯ ಕಿರುಕುಳದಿಂದ ಬೇಸತ್ತು ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್​ ಎಂಬುವವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 24 ಪುಟಗಳ ಡೆತ್​ ನೋಟ್ ಒಂದು ವಿಡಿಯೋವನ್ನು ಮಾಡಿಟ್ಟು ಸಾವನ್ನಪ್ಪಿದ್ದಾರೆ. ಅವರ ಡೆತ್​ನೋಟ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹಾಗೂ ಎಲಾನ್ ಮಸ್ಕ್​ ಬಳಿ ಸಹಾಯ ಕೇಳಿದ್ದಾರೆ.

ತನ್ನ ಪತ್ನಿ ನಿಖಿತಾ ಹಾಗೂ ಆಕೆಯ ಕುಟುಂಬದವರು ಚಿತ್ರಹಿಂಸೆ ನೀಡುತ್ತಿದ್ದರು, ನನ್ನದೇನೂ ತಪ್ಪಿಲ್ಲದಿದ್ದರೂ ತನ್ನ ಮೇಲೆ 9 ಪ್ರಕರಣಗಳನ್ನು ದಾಖಲಿಸಿದ್ದರು. ಆರು ಪ್ರಕರಣಗಳು ಕೆಳ ನ್ಯಾಯಾಲಯದಲ್ಲಿದ್ದರೆ ಮೂರು ಪ್ರಕರಣಗಳು ಹೈಕೋರ್ಟ್​ನಲ್ಲಿವೆ. ಒಂದು ಬಾರಿ ಒಂದು ಪ್ರಕರಣವನ್ನು ವಾಪಸ್ ಪಡೆದಿದ್ದಳು ಆದರೆ ಕೊನೆಗೆ ಅದರ ಬದಲು ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಳು ಎನ್ನುವ ವಿಚಾರವನ್ನು ಅವರು ಬರೆದಿದ್ದಾರೆ.

ಇರುವುದು ಬೆಂಗಳೂರಿನಲ್ಲಿ ಆದರೆ 9 ಪ್ರಕರಣಗಳ ವಿಚಾರಣೆಗಾಗಿ ಪದೇ ಪದೇ ಉತ್ತರ ಪ್ರದೇಶಕ್ಕೆ ಹೋಗಬೇಕಿತ್ತು, ಜತೆಗೆ ಹಣದ ಬೇಡಿಕೆಯನ್ನು ಪೂರೈಸಿ ನನಗೆ ಸಾಕಾಗಿದೆ. ನಾನು ದುಡಿದಿರುವುದೆಲ್ಲಾ ಹಣವನ್ನು ಶತ್ರುಗಳನ್ನು ಸಾಕಲು ಕೊಡಬೇಕಾಗುತ್ತಿತ್ತು, ಅದರಿಂದ ಶತ್ರುಗಳು ಬಲವಾಗುತ್ತಾ ಹೋಗುತ್ತಿದ್ದಾರೆ ಎಂದು ಬರೆದಿದ್ದಾರೆ.

ಮತ್ತಷ್ಟು ಓದಿ: ಹೆಂಡತಿ ಕಾಟದಿಂದ ಬೆಂಗಳೂರಿನ ಇಂಜಿನಿಯರ್ ಆತ್ಮಹತ್ಯೆ; ಟ್ವಿಟ್ಟರ್​ನಲ್ಲಿ ಟ್ರೆಂಡ್ ಆಯ್ತು ಮೆನ್​ಟೂ ಹ್ಯಾಶ್​ಟ್ಯಾಗ್

ಭಾರತದಲ್ಲಿ ನರಮೇಧ ನಡೆಯುತ್ತಿದೆ, ಕೋಟಿಗಟ್ಟಲೆ ಜನರನ್ನು ರಕ್ಷಿಸಿ ವಾಕ್ ಸ್ವಾತಂತ್ರ್ಯವನ್ನು ಮರುಸ್ಥಾಪಿಸಿ ಎಂದು ಟ್ರಂಪ್ ಹಾಗೂ ಎಲಾನ್ ಮಸ್ಕ್​ಗೆ ಮನವಿ ಮಾಡಿದ್ದಾರೆ.

90 ನಿಮಿಷಗಳ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. ಸುಭಾಷ್ ಡೆಪ್ಯೂಟಿ ಜನರಲ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಟೆಕ್ಕಿ ಅವರು ತನ್ನ ಸಹೋದ್ಯೋಗಿಗಳು ಹಾಗೂ ಹಲವರಿಗೆ ಇ-ಮೇಲ್ ಹಾಗೂ ವಾಟ್ಸ್​ಆ್ಯಪ್ ವಿಡಿಯೋವನ್ನು ಕಳುಹಿಸಿದ್ದಾರೆ.

ಶವ ನೋಡುವುದೂ ಬೇಡ

ತನ್ನ ಮಗನನ್ನು ಪೋಷಕರಿಗೆ ಒಪ್ಪಿಸಲು ಕೇಳಿಕೊಂಡಿದ್ದು, ಯಾವುದೇ ಕಾರಣಕ್ಕೂ ತನ್ನ ಪತ್ನಿ ಹಾಗೂ ಆಕೆಯ ಮನೆಯವರು ತನ್ನ ಶವವನ್ನೂ ನೋಡಬಾರದು ಎಂದು ಬರೆದಿದ್ದಾರೆ.

ಗಿಫ್ಟ್​ ಬಾಕ್ಸ್​

ಗಿಫ್ಟ್ ಬಾಕ್ಸ್ಅನ್ನು ಮನೆಯಲ್ಲಿಟ್ಟು, ತನ್ನ ನಾಲ್ಕು ವರ್ಷದ ಪುತ್ರನಿಗೆ ತಲುಪಿಸುವಂತೆ ಉಲ್ಲೇಖಿಸಿದ್ದರು. ನಂತರ ‘JUSTICE IS DUE’ ಎಂಬ ಬರಹವಿರುವ ಪೋಸ್ಟರ್, ಹಾಗೂ ಪೂರ್ಣಗೊಳಿಸಿರುವ ತನ್ನ ಕೆಲಸಗಳ ಪಟ್ಟಿಯನ್ನ ಗೋಡೆಗೆ ಅಂಟಿಸಿ ಅತುಲ್​ ಸುಭಾಷ್​ ತನ್ನ ಬದುಕಿಗೆ ಕೊನೆಹಾಡಿದ್ದರು.

ನ್ಯಾಯ ಸಿಗುವವರೆಗೂ ಚಿತಾಭಸ್ಮ ನೀರಿನಲ್ಲಿ ಬಿಡಬೇಡಿ ತನಗೆ ನ್ಯಾಯ ಸಿಗುವವರೆಗೂ ಅವರ ಚಿತಾಭಸ್ಮವನ್ನು ನೀರಿನಲ್ಲಿ ಬಿಡುವುದು ಬೇಡ ಎಂದು ಸುಭಾಷ್ ಬರೆದಿದ್ದರು. ನ್ಯಾಯ ಕೊಡಲು ಸಾಧ್ಯವಾಗದಿದ್ದರೆ ನನ್ನ ಚಿತಾಭಸ್ಮವನ್ನು ನ್ಯಾಯಾಲಯದ ಮುಂದೆ ಚರಂಡಿಗೆ ಎಸೆಯಬೇಕು, ಈ ದೇಶದಲ್ಲಿ ಮನುಷ್ಯನ ಜೀವನವು ಗಟಾರವಾಗಿದೆ ಎಂದು ನೋವು ತೋಡಿಕೊಂಡಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Wed, 11 December 24

Follow Us
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?