AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Today: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾಗಶಃ ಬಿಸಿಲಿನ ವಾತಾವರಣವಿರಲಿದೆ

ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾಗಶಃ ಬಿಸಿಲಿನ ವಾತಾವರಣವಿರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33°C ತಲುಪಬಹುದು. ಕಲಬುರ್ಗಿ, ರಾಯಚೂರು ಭಾಗಗಳಲ್ಲಿ 37°C ವರೆಗೆ ತಾಪಮಾನ ಏರಿಕೆಯಾಗಲಿದೆ. ಕರಾವಳಿಯಲ್ಲಿ ಸೆಕೆ ಹೆಚ್ಚಳ ಸಾಧ್ಯತೆ. ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ತಜ್ಞರು ನೀರಿನಂಶ ಕಾಯ್ದುಕೊಳ್ಳಲು ಮತ್ತು ಮಧ್ಯಾಹ್ನದ ಬಿಸಿಲಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಲು ಸಲಹೆ ನೀಡಿದ್ದಾರೆ.

Karnataka Weather Today: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾಗಶಃ ಬಿಸಿಲಿನ ವಾತಾವರಣವಿರಲಿದೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Feb 12, 2026 | 6:11 AM

Share

ಬೆಂಗಳೂರು, ಫೆ.12: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾಗಶಃ ಬಿಸಿಲಿನ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ (Karnataka Weather Today) ಹೇಳಿದೆ. ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಾಗಲಿದ್ದು, ಗರಿಷ್ಠ ತಾಪಮಾನ 31°C ನಿಂದ 33°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸಂಜೆ ಮತ್ತು ರಾತ್ರಿ ವೇಳೆ ಆಹ್ಲಾದಕರ ಹವಾಮಾನವಿರಲಿದ್ದು, ಕನಿಷ್ಠ ತಾಪಮಾನ 18°C ಆಸುಪಾಸಿನಲ್ಲಿರಲಿದೆ. ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ಇಲಾಖೆ ಹೇಳಿದೆ.

ಕಲ್ಬುರ್ಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ಇಲ್ಲಿ ಗರಿಷ್ಠ ತಾಪಮಾನವು 35°C ನಿಂದ 37°C ವರೆಗೆ ತಲುಪಬಹುದು. ಮಧ್ಯಾಹ್ನದ ವೇಳೆ ಒಣ ಹವೆ ಇರಲಿದ್ದು, ಬಿಸಿಲಿನ ಝಳ ಹೆಚ್ಚಾಗಿರುತ್ತದೆ. ಮಂಗಳೂರು, ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ಉಷ್ಣಾಂಶದ ಜೊತೆಗೆ ತೇವಾಂಶ ಕೂಡ ಇರಲಿದೆ. ಇದರಿಂದ ಸೆಕೆ ಹೆಚ್ಚಾಗುವ ಸಾಧ್ಯತೆ ಇದೆ.

ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿದ್ದು, ಹಗಲಿನಲ್ಲಿ ಸಾಧಾರಣ ಬಿಸಿಲಿರುತ್ತದೆ. ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಮಾನ್ಯ ಹವಾಮಾನವಿರಲಿದ್ದು, ತಾಪಮಾನವು ಸರಿಸುಮಾರು 32°C ಇರಲಿದೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ಸಾಕಷ್ಟು ನೀರು ಕುಡಿಯಿರಿ ಎಂದು ತಜ್ಞರು ಹೇಳಿದ್ದಾರೆ. ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ನೇರ ಬಿಸಿಲಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ ಎಂದು ಕೂಡ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಮತ್ತೆ ಕರ್ನಾಟಕದ ಪರ ಧ್ವನಿ ಎತ್ತಿದ ದೇವೇಗೌಡ್ರು, ಈ ಬಾರಿ ಕೇಳಿದ್ದೇನು?

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಹಗಲಿನಲ್ಲಿ ಸಾಧಾರಣ ಬಿಸಿಲಿದ್ದರೂ, ರಾತ್ರಿ ಮತ್ತು ಮುಂಜಾನೆ ತಂಪು ವಾತಾವರಣವಿರುತ್ತದೆ. ಮೈಸೂರು, ಹಾಸನ, ತುಮಕೂರು, ಮಂಡ್ಯ ಸಮತೋಲಿತ ಹವಾಮಾನವಿರಲಿದ್ದು, ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ ಇದೆ. ಗಾಳಿಯ ಮಟ್ಟದಲ್ಲೂ ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡದಂತಹ ನಗರಗಳಲ್ಲಿ ಸಾಧಾರಣ ಮಟ್ಟದಲ್ಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ