AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹ್ಯಾಂಡ್​​ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ, ಎಲ್ಲೆಡೆ ಕಟ್ಟೆಚ್ಚರ

ಡಿಟೋನೇಟರ್ ತಂತ್ರಜ್ಞಾನದಿಂದ ತಯಾರಾಗುವ ಸ್ಪೋಟಕವೇ ಗ್ರೆನೇಡ್. ಇದು ಸೇಫ್ಟಿ ಫಿನ್ ಅಥವಾ ಕಾಟರ್ ಪಿನ್​​​ನಿಂದ ನಿಯಂತ್ರಿಸಲ್ಪಡುತ್ತದೆ.

ಬೆಂಗಳೂರಿನಲ್ಲಿ ಹ್ಯಾಂಡ್​​ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ, ಎಲ್ಲೆಡೆ ಕಟ್ಟೆಚ್ಚರ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 20, 2023 | 4:01 PM

Share

ಬೆಂಗಳೂರು, ಜುಲೈ 20: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬಂಧನಕ್ಕೊಳಗಾಗಿದ್ದ ಐವರು ಶಂಕಿತ ಉಗ್ರರ ಪೈಕಿ ಒಬ್ಬನ ನಿವಾಸದಲ್ಲಿ ಹ್ಯಾಂಡ್​​ ಗ್ರೆನೇಡ್(live hand grenade) ಪತ್ತೆಯಾಗಿರುವುದು ಪೊಲೀಸರಲ್ಲಿ (CCB Police) ಆತಂಕಕ್ಕೆ ಕಾರಣವಾಗಿದೆ. ಶಂಕಿತ ಉಗ್ರ ಜಾಹೀದ್​​ನ (Zahid Tabrez) ಕೊಡಿಗೆಹಳ್ಳಿಯಲ್ಲಿರುವ ಮನೆಯಲ್ಲಿ 4 ಗ್ರೆನೇಡ್ ಪತ್ತೆಯಾಗಿದೆ. ಈವರೆಗೂ ರಾಜ್ಯದಲ್ಲಿ ಜೀವಂತ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರಲಿಲ್ಲ ಎನ್ನಲಾಗಿದೆ. ಆದರೆ, ಇದೀಗ ಸಿಲಿಕಾನ್ ಸಿಟಿಯಲ್ಲಿ ಒಂದೇ ಬಾರಿಗೆ ನಾಲ್ಕು ಸಜೀವ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ.

ಈ ಹಿಂದೆ 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ಐದು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದವು. ಆದರೆ, ಅವುಗಳು 40 ವರ್ಷಗಳಷ್ಟು ಹಳೆಯವು ಎನ್ನಲಾಗಿದ್ದು, ನೆಲದಡಿಯಲ್ಲಿ ಪತ್ತೆಯಾಗಿದ್ದವು.

ನಂತರ 2022 ರಲ್ಲಿ ಅಥಣಿ ಬಳಿಯ ಶಾಲೆಯೊಂದರಲ್ಲಿ ಒಂದು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿತ್ತು. ಮಕ್ಕಳು ಚೆಂಡು ಎಂದು ಭಾವಿಸಿ ಆಟವಾಡುವಾಗ ಪತ್ತೆಯಾಗಿದ್ದ ಅದು ನಿರ್ಜೀವ ಗ್ರೆನೇಡ್ ಆಗಿತ್ತು. ಆನಂತರ ಇದೇ ಮೊದಲ ಬಾರಿಗೆ ಗ್ರೆನೇಡ್, ಅದೂ ಸಜೀವ ಗ್ರೆನೇಡ್ ಪತ್ತೆಯಾಗಿದೆ.

ಗ್ರೆನೇಡ್ ಎಂದರೇನು?

ಡಿಟೋನೇಟರ್ ತಂತ್ರಜ್ಞಾನದಿಂದ ತಯಾರಾಗುವ ಸ್ಪೋಟಕವೇ ಗ್ರೆನೇಡ್. ಇದು ಸೇಫ್ಟಿ ಫಿನ್ ಅಥವಾ ಕಾಟರ್ ಪಿನ್​​​ನಿಂದ ನಿಯಂತ್ರಿಸಲ್ಪಡುತ್ತದೆ. ಈ ಹ್ಯಾಂಡ್ ಗ್ರೆನೇಡ್​​​ಗಳಲ್ಲಿ ರಾಸಾಯನಿಕ ಗ್ರೆನೇಡ್​​ಗಳು, ಸ್ಟನ್ ಗನ್ ಗ್ರೆನೇಡ್​​​ಗಳು, ಭಾರಿ ಸ್ಪೋಟಕದ ಗ್ರೆನೇಡ್​​​ಗಳು ಹೀಗೆ ಹಲವು ವಿಧಗಳಿವೆ. ಇವುಗಳು ಕೇವಲ ಕೆಲವೊಂದು ಆಡಿಗಳಷ್ಟು ಮಾತ್ರ ಪರಿಣಾಮ ಬೀರುತ್ತವೆ. ಆದರೆ ವಿದೇಶಿ ಗ್ರೆನೇಡ್​​​ಗಳಾದ Dam51, mk3a2 ಗ್ರೆನೇಡ್​​ಗಳು ಭಾರಿ ಪ್ರಮಾಣ ಸ್ಪೋಟ ಉಂಟುಮಾಡುತ್ತವೆ. 40 ಮೀಟರ್ ನಿಂದ 200 ಮೀಟರ್ ವರೆಗೂ ಈ ಗ್ರೆನೇಡ್ ಗಳು ಪರಿಣಾಮ ಬೀರುತ್ತವೆ. ಹೀಗಾಗಿ ಈಗ ಸಿಕ್ಕಿರುವ ಗ್ರೆನೇಡ್​​​ಗಳ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರನ ಮನೆಯಲ್ಲಿ 4 ಗ್ರೆನೇಡ್​ ಪತ್ತೆ, ಸಿಸಿಬಿ ಶಾಕ್

ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಾಂಬ್ ಸ್ಕ್ವಾಡ್ ಕರೆದುಕೊಂಡು ಹೋಗಿ ಆರೋಪಿಯ ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಇದೇ ವೇಳೆ ಸಜೀವ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Thu, 20 July 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!