ಬೆಂಗಳೂರಿನಲ್ಲಿ ಹ್ಯಾಂಡ್​​ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ, ಎಲ್ಲೆಡೆ ಕಟ್ಟೆಚ್ಚರ

ಡಿಟೋನೇಟರ್ ತಂತ್ರಜ್ಞಾನದಿಂದ ತಯಾರಾಗುವ ಸ್ಪೋಟಕವೇ ಗ್ರೆನೇಡ್. ಇದು ಸೇಫ್ಟಿ ಫಿನ್ ಅಥವಾ ಕಾಟರ್ ಪಿನ್​​​ನಿಂದ ನಿಯಂತ್ರಿಸಲ್ಪಡುತ್ತದೆ.

ಬೆಂಗಳೂರಿನಲ್ಲಿ ಹ್ಯಾಂಡ್​​ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ, ಎಲ್ಲೆಡೆ ಕಟ್ಟೆಚ್ಚರ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Jul 20, 2023 | 4:01 PM

ಬೆಂಗಳೂರು, ಜುಲೈ 20: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬಂಧನಕ್ಕೊಳಗಾಗಿದ್ದ ಐವರು ಶಂಕಿತ ಉಗ್ರರ ಪೈಕಿ ಒಬ್ಬನ ನಿವಾಸದಲ್ಲಿ ಹ್ಯಾಂಡ್​​ ಗ್ರೆನೇಡ್(live hand grenade) ಪತ್ತೆಯಾಗಿರುವುದು ಪೊಲೀಸರಲ್ಲಿ (CCB Police) ಆತಂಕಕ್ಕೆ ಕಾರಣವಾಗಿದೆ. ಶಂಕಿತ ಉಗ್ರ ಜಾಹೀದ್​​ನ (Zahid Tabrez) ಕೊಡಿಗೆಹಳ್ಳಿಯಲ್ಲಿರುವ ಮನೆಯಲ್ಲಿ 4 ಗ್ರೆನೇಡ್ ಪತ್ತೆಯಾಗಿದೆ. ಈವರೆಗೂ ರಾಜ್ಯದಲ್ಲಿ ಜೀವಂತ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರಲಿಲ್ಲ ಎನ್ನಲಾಗಿದೆ. ಆದರೆ, ಇದೀಗ ಸಿಲಿಕಾನ್ ಸಿಟಿಯಲ್ಲಿ ಒಂದೇ ಬಾರಿಗೆ ನಾಲ್ಕು ಸಜೀವ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ.

ಈ ಹಿಂದೆ 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ಐದು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದವು. ಆದರೆ, ಅವುಗಳು 40 ವರ್ಷಗಳಷ್ಟು ಹಳೆಯವು ಎನ್ನಲಾಗಿದ್ದು, ನೆಲದಡಿಯಲ್ಲಿ ಪತ್ತೆಯಾಗಿದ್ದವು.

ನಂತರ 2022 ರಲ್ಲಿ ಅಥಣಿ ಬಳಿಯ ಶಾಲೆಯೊಂದರಲ್ಲಿ ಒಂದು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿತ್ತು. ಮಕ್ಕಳು ಚೆಂಡು ಎಂದು ಭಾವಿಸಿ ಆಟವಾಡುವಾಗ ಪತ್ತೆಯಾಗಿದ್ದ ಅದು ನಿರ್ಜೀವ ಗ್ರೆನೇಡ್ ಆಗಿತ್ತು. ಆನಂತರ ಇದೇ ಮೊದಲ ಬಾರಿಗೆ ಗ್ರೆನೇಡ್, ಅದೂ ಸಜೀವ ಗ್ರೆನೇಡ್ ಪತ್ತೆಯಾಗಿದೆ.

ಗ್ರೆನೇಡ್ ಎಂದರೇನು?

ಡಿಟೋನೇಟರ್ ತಂತ್ರಜ್ಞಾನದಿಂದ ತಯಾರಾಗುವ ಸ್ಪೋಟಕವೇ ಗ್ರೆನೇಡ್. ಇದು ಸೇಫ್ಟಿ ಫಿನ್ ಅಥವಾ ಕಾಟರ್ ಪಿನ್​​​ನಿಂದ ನಿಯಂತ್ರಿಸಲ್ಪಡುತ್ತದೆ. ಈ ಹ್ಯಾಂಡ್ ಗ್ರೆನೇಡ್​​​ಗಳಲ್ಲಿ ರಾಸಾಯನಿಕ ಗ್ರೆನೇಡ್​​ಗಳು, ಸ್ಟನ್ ಗನ್ ಗ್ರೆನೇಡ್​​​ಗಳು, ಭಾರಿ ಸ್ಪೋಟಕದ ಗ್ರೆನೇಡ್​​​ಗಳು ಹೀಗೆ ಹಲವು ವಿಧಗಳಿವೆ. ಇವುಗಳು ಕೇವಲ ಕೆಲವೊಂದು ಆಡಿಗಳಷ್ಟು ಮಾತ್ರ ಪರಿಣಾಮ ಬೀರುತ್ತವೆ. ಆದರೆ ವಿದೇಶಿ ಗ್ರೆನೇಡ್​​​ಗಳಾದ Dam51, mk3a2 ಗ್ರೆನೇಡ್​​ಗಳು ಭಾರಿ ಪ್ರಮಾಣ ಸ್ಪೋಟ ಉಂಟುಮಾಡುತ್ತವೆ. 40 ಮೀಟರ್ ನಿಂದ 200 ಮೀಟರ್ ವರೆಗೂ ಈ ಗ್ರೆನೇಡ್ ಗಳು ಪರಿಣಾಮ ಬೀರುತ್ತವೆ. ಹೀಗಾಗಿ ಈಗ ಸಿಕ್ಕಿರುವ ಗ್ರೆನೇಡ್​​​ಗಳ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರನ ಮನೆಯಲ್ಲಿ 4 ಗ್ರೆನೇಡ್​ ಪತ್ತೆ, ಸಿಸಿಬಿ ಶಾಕ್

ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಾಂಬ್ ಸ್ಕ್ವಾಡ್ ಕರೆದುಕೊಂಡು ಹೋಗಿ ಆರೋಪಿಯ ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಇದೇ ವೇಳೆ ಸಜೀವ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Thu, 20 July 23

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!