AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹ್ಯಾಂಡ್​​ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ, ಎಲ್ಲೆಡೆ ಕಟ್ಟೆಚ್ಚರ

ಡಿಟೋನೇಟರ್ ತಂತ್ರಜ್ಞಾನದಿಂದ ತಯಾರಾಗುವ ಸ್ಪೋಟಕವೇ ಗ್ರೆನೇಡ್. ಇದು ಸೇಫ್ಟಿ ಫಿನ್ ಅಥವಾ ಕಾಟರ್ ಪಿನ್​​​ನಿಂದ ನಿಯಂತ್ರಿಸಲ್ಪಡುತ್ತದೆ.

ಬೆಂಗಳೂರಿನಲ್ಲಿ ಹ್ಯಾಂಡ್​​ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ, ಎಲ್ಲೆಡೆ ಕಟ್ಟೆಚ್ಚರ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 20, 2023 | 4:01 PM

Share

ಬೆಂಗಳೂರು, ಜುಲೈ 20: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬಂಧನಕ್ಕೊಳಗಾಗಿದ್ದ ಐವರು ಶಂಕಿತ ಉಗ್ರರ ಪೈಕಿ ಒಬ್ಬನ ನಿವಾಸದಲ್ಲಿ ಹ್ಯಾಂಡ್​​ ಗ್ರೆನೇಡ್(live hand grenade) ಪತ್ತೆಯಾಗಿರುವುದು ಪೊಲೀಸರಲ್ಲಿ (CCB Police) ಆತಂಕಕ್ಕೆ ಕಾರಣವಾಗಿದೆ. ಶಂಕಿತ ಉಗ್ರ ಜಾಹೀದ್​​ನ (Zahid Tabrez) ಕೊಡಿಗೆಹಳ್ಳಿಯಲ್ಲಿರುವ ಮನೆಯಲ್ಲಿ 4 ಗ್ರೆನೇಡ್ ಪತ್ತೆಯಾಗಿದೆ. ಈವರೆಗೂ ರಾಜ್ಯದಲ್ಲಿ ಜೀವಂತ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರಲಿಲ್ಲ ಎನ್ನಲಾಗಿದೆ. ಆದರೆ, ಇದೀಗ ಸಿಲಿಕಾನ್ ಸಿಟಿಯಲ್ಲಿ ಒಂದೇ ಬಾರಿಗೆ ನಾಲ್ಕು ಸಜೀವ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ.

ಈ ಹಿಂದೆ 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ಐದು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದವು. ಆದರೆ, ಅವುಗಳು 40 ವರ್ಷಗಳಷ್ಟು ಹಳೆಯವು ಎನ್ನಲಾಗಿದ್ದು, ನೆಲದಡಿಯಲ್ಲಿ ಪತ್ತೆಯಾಗಿದ್ದವು.

ನಂತರ 2022 ರಲ್ಲಿ ಅಥಣಿ ಬಳಿಯ ಶಾಲೆಯೊಂದರಲ್ಲಿ ಒಂದು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿತ್ತು. ಮಕ್ಕಳು ಚೆಂಡು ಎಂದು ಭಾವಿಸಿ ಆಟವಾಡುವಾಗ ಪತ್ತೆಯಾಗಿದ್ದ ಅದು ನಿರ್ಜೀವ ಗ್ರೆನೇಡ್ ಆಗಿತ್ತು. ಆನಂತರ ಇದೇ ಮೊದಲ ಬಾರಿಗೆ ಗ್ರೆನೇಡ್, ಅದೂ ಸಜೀವ ಗ್ರೆನೇಡ್ ಪತ್ತೆಯಾಗಿದೆ.

ಗ್ರೆನೇಡ್ ಎಂದರೇನು?

ಡಿಟೋನೇಟರ್ ತಂತ್ರಜ್ಞಾನದಿಂದ ತಯಾರಾಗುವ ಸ್ಪೋಟಕವೇ ಗ್ರೆನೇಡ್. ಇದು ಸೇಫ್ಟಿ ಫಿನ್ ಅಥವಾ ಕಾಟರ್ ಪಿನ್​​​ನಿಂದ ನಿಯಂತ್ರಿಸಲ್ಪಡುತ್ತದೆ. ಈ ಹ್ಯಾಂಡ್ ಗ್ರೆನೇಡ್​​​ಗಳಲ್ಲಿ ರಾಸಾಯನಿಕ ಗ್ರೆನೇಡ್​​ಗಳು, ಸ್ಟನ್ ಗನ್ ಗ್ರೆನೇಡ್​​​ಗಳು, ಭಾರಿ ಸ್ಪೋಟಕದ ಗ್ರೆನೇಡ್​​​ಗಳು ಹೀಗೆ ಹಲವು ವಿಧಗಳಿವೆ. ಇವುಗಳು ಕೇವಲ ಕೆಲವೊಂದು ಆಡಿಗಳಷ್ಟು ಮಾತ್ರ ಪರಿಣಾಮ ಬೀರುತ್ತವೆ. ಆದರೆ ವಿದೇಶಿ ಗ್ರೆನೇಡ್​​​ಗಳಾದ Dam51, mk3a2 ಗ್ರೆನೇಡ್​​ಗಳು ಭಾರಿ ಪ್ರಮಾಣ ಸ್ಪೋಟ ಉಂಟುಮಾಡುತ್ತವೆ. 40 ಮೀಟರ್ ನಿಂದ 200 ಮೀಟರ್ ವರೆಗೂ ಈ ಗ್ರೆನೇಡ್ ಗಳು ಪರಿಣಾಮ ಬೀರುತ್ತವೆ. ಹೀಗಾಗಿ ಈಗ ಸಿಕ್ಕಿರುವ ಗ್ರೆನೇಡ್​​​ಗಳ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರನ ಮನೆಯಲ್ಲಿ 4 ಗ್ರೆನೇಡ್​ ಪತ್ತೆ, ಸಿಸಿಬಿ ಶಾಕ್

ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಾಂಬ್ ಸ್ಕ್ವಾಡ್ ಕರೆದುಕೊಂಡು ಹೋಗಿ ಆರೋಪಿಯ ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಇದೇ ವೇಳೆ ಸಜೀವ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Thu, 20 July 23

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ