AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇತರೆ ಖೈದಿಗಳ ಜತೆ ಉಗ್ರ ನಸೀರ್ ಸಂಪರ್ಕ, ಆಂತರಿಕ ತನಿಖೆಗೆ ಆದೇಶ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್​ಇಟಿ ಉಗ್ರ ನಜೀರ್ ಇತರೆ ಖೈದಿಗಳ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಆತಂರಿಕ ತನಿಖೆಗೆ ಆದೇಶಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇತರೆ ಖೈದಿಗಳ ಜತೆ ಉಗ್ರ ನಸೀರ್ ಸಂಪರ್ಕ, ಆಂತರಿಕ ತನಿಖೆಗೆ ಆದೇಶ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 21, 2023 | 3:19 PM

Share

ಬೆಂಗಳೂರು, (ಜುಲೈ 21): ಬೆಂಗಳೂರಿನಲ್ಲಿ(Bengaluru( ಐವರು ಶಂಕಿತ ಭಯೋತ್ಪಾದಕರ(suspected terrorists) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಎಲ್​ಇಟಿ ಉಗ್ರ ಟಿ ನಸೀರ್ ಇತರ ಖೈದಿಗಳ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ  ಆಂತರಿಕ ತನಿಖೆಗೆ ಆದೇಶಿಸಲಾಗಿದೆ.  ಆಂತರಿಕ ತನಿಖೆಗೆ ಆದೇಶಿಸಿ ಇಂದು(ಜುಲೈ 21) ಕಾರಾಗೃಹ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ಅಷ್ಟೇ ನಸೀರ್​ನನ್ನ ಕೇರಳ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಆದ್ರೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಇತರೆ ಖೈದಿಗಳ ಜೊತೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾದಗಿದೆ. ಹೀಗಾಗಿ ತನಿಖೆಗೆ ಆದೇಶಿಸಲಾಗಿದೆ.

ಇದನ್ನೂ ಓದಿ: 2008ರ ಬೆಂಗಳೂರು ಸರಣಿ ಸ್ಪೋಟದ ರುವಾರಿ ನಾಸೀರ್​ನ ಮತ್ತೊಂದು ಸಂಚು ಬಯಲು

ಉಗ್ರ ನಸೀರ್​ಗೂ ಈಗ ಬಂಧಿತ ಐವರು ಶಂಕಿತ ಉಗ್ರರಿಗೂ ಯಾವುದೇ ಸಂಪರ್ಕವಿರಲಿಲ್ಲ. ಆದ್ರೆ, ಜೈಲಿನಲ್ಲಿರುವ ನಜೀರ್ ನನ್ನ ಭೇಟಿ ಮಾಡಬೇಕು ಅಂದಾಗಲೆಲ್ಲ ಜುನೈದ್ ಜೈಲು ಸೇರುತ್ತಿದ್ದ. ಬರೋಬ್ಬರಿ 4 ಬಾರಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ನಜೀರ್ ನನ್ನು ಜುನೈದ್ ಭೇಟಿ ಮಾಡಿದ್ದ. ಟಿ ನಸೀರ್ ಕೊಡುತ್ತಿದ್ದ ಮಾರ್ಗದರ್ಶನದಂತೆ ಜುನೈದ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಜೈಲಿಗೆ ಹೋಗಬೇಕು ಅನಿಸಿದಾಗಲೆಲ್ಲಾ ಬೇರೆ ಬೇರೆ ಕೇಸ್ ನಲ್ಲಿ ಭಾಗಿಯಾಗಿ ಜೈಲು ಸೇರುತ್ತಿದ್ದ. 2 ಬಾರಿ ವಿದೇಶಕ್ಕೆ ಹೋಗಿ ಬಂದಿರುವ ಶಂಕಿತ ಉಗ್ರ ಜುನೈದ್, ಸದ್ಯ ಅರೆಸ್ಟ್ ಆಗಿರುವ ಶಂಕಿತ ಉಗ್ರರನ್ನು ಈ ಜುನೈದ್​ ಹ್ಯಾಂಡಲ್ ಮಾಡುತ್ತಿದ್ದ. ಜುನೈದ್ ಹೇಳಿದ್ದಂತೆ ಈ ಐವರು ಶಂಕಿತ ಉಗ್ರರು ಕೆಲಸ ಮಾಡುತ್ತಿದ್ದರು ಎನ್ನುವ ಮಾಹಿತಿ ಹೊರಬಿದ್ದಿದೆ. ಮೂಲತ ಕೇರಳ ನಿವಾಸಿಯಾಗಿರುವ ಉಗ್ರ ನಸೀರ್ ನನ್ನು  ನಾನಾ ಕಾರಣಗಳಿಂದ 3 ತಿಂಗಳ ಹಿಂದೆ ಕೇರಳ ಜೈಲ್​ಗೆ ಶಿಫ್ಟ್ ಮಾಡಲಾಗಿತ್ತು. ಆದ್ರೆ, ಅದರಕ್ಕೂ ಮೊದಲು ಬೆಂಗಳೂರಿನ ಪರಪ್ಪನ ಅಗ್ರಾಹರ ಜೈಲಿನಲ್ಲಿ ಇತರೆ ಖೈದಿಗಳನ್ನು ಸಂಪರ್ಕಿಸಿದ್ದ ಎನ್ನಲಾಗಿದೆ. ಇದರಿಂದ ಈ ಬಗ್ಗೆ ತನಿಖೆಗೆ ಆದೇಶಿಸಿಸಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:39 pm, Fri, 21 July 23

ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ