AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇತರೆ ಖೈದಿಗಳ ಜತೆ ಉಗ್ರ ನಸೀರ್ ಸಂಪರ್ಕ, ಆಂತರಿಕ ತನಿಖೆಗೆ ಆದೇಶ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್​ಇಟಿ ಉಗ್ರ ನಜೀರ್ ಇತರೆ ಖೈದಿಗಳ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಆತಂರಿಕ ತನಿಖೆಗೆ ಆದೇಶಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇತರೆ ಖೈದಿಗಳ ಜತೆ ಉಗ್ರ ನಸೀರ್ ಸಂಪರ್ಕ, ಆಂತರಿಕ ತನಿಖೆಗೆ ಆದೇಶ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 21, 2023 | 3:19 PM

Share

ಬೆಂಗಳೂರು, (ಜುಲೈ 21): ಬೆಂಗಳೂರಿನಲ್ಲಿ(Bengaluru( ಐವರು ಶಂಕಿತ ಭಯೋತ್ಪಾದಕರ(suspected terrorists) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಎಲ್​ಇಟಿ ಉಗ್ರ ಟಿ ನಸೀರ್ ಇತರ ಖೈದಿಗಳ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ  ಆಂತರಿಕ ತನಿಖೆಗೆ ಆದೇಶಿಸಲಾಗಿದೆ.  ಆಂತರಿಕ ತನಿಖೆಗೆ ಆದೇಶಿಸಿ ಇಂದು(ಜುಲೈ 21) ಕಾರಾಗೃಹ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ಅಷ್ಟೇ ನಸೀರ್​ನನ್ನ ಕೇರಳ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಆದ್ರೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಇತರೆ ಖೈದಿಗಳ ಜೊತೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾದಗಿದೆ. ಹೀಗಾಗಿ ತನಿಖೆಗೆ ಆದೇಶಿಸಲಾಗಿದೆ.

ಇದನ್ನೂ ಓದಿ: 2008ರ ಬೆಂಗಳೂರು ಸರಣಿ ಸ್ಪೋಟದ ರುವಾರಿ ನಾಸೀರ್​ನ ಮತ್ತೊಂದು ಸಂಚು ಬಯಲು

ಉಗ್ರ ನಸೀರ್​ಗೂ ಈಗ ಬಂಧಿತ ಐವರು ಶಂಕಿತ ಉಗ್ರರಿಗೂ ಯಾವುದೇ ಸಂಪರ್ಕವಿರಲಿಲ್ಲ. ಆದ್ರೆ, ಜೈಲಿನಲ್ಲಿರುವ ನಜೀರ್ ನನ್ನ ಭೇಟಿ ಮಾಡಬೇಕು ಅಂದಾಗಲೆಲ್ಲ ಜುನೈದ್ ಜೈಲು ಸೇರುತ್ತಿದ್ದ. ಬರೋಬ್ಬರಿ 4 ಬಾರಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ನಜೀರ್ ನನ್ನು ಜುನೈದ್ ಭೇಟಿ ಮಾಡಿದ್ದ. ಟಿ ನಸೀರ್ ಕೊಡುತ್ತಿದ್ದ ಮಾರ್ಗದರ್ಶನದಂತೆ ಜುನೈದ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಜೈಲಿಗೆ ಹೋಗಬೇಕು ಅನಿಸಿದಾಗಲೆಲ್ಲಾ ಬೇರೆ ಬೇರೆ ಕೇಸ್ ನಲ್ಲಿ ಭಾಗಿಯಾಗಿ ಜೈಲು ಸೇರುತ್ತಿದ್ದ. 2 ಬಾರಿ ವಿದೇಶಕ್ಕೆ ಹೋಗಿ ಬಂದಿರುವ ಶಂಕಿತ ಉಗ್ರ ಜುನೈದ್, ಸದ್ಯ ಅರೆಸ್ಟ್ ಆಗಿರುವ ಶಂಕಿತ ಉಗ್ರರನ್ನು ಈ ಜುನೈದ್​ ಹ್ಯಾಂಡಲ್ ಮಾಡುತ್ತಿದ್ದ. ಜುನೈದ್ ಹೇಳಿದ್ದಂತೆ ಈ ಐವರು ಶಂಕಿತ ಉಗ್ರರು ಕೆಲಸ ಮಾಡುತ್ತಿದ್ದರು ಎನ್ನುವ ಮಾಹಿತಿ ಹೊರಬಿದ್ದಿದೆ. ಮೂಲತ ಕೇರಳ ನಿವಾಸಿಯಾಗಿರುವ ಉಗ್ರ ನಸೀರ್ ನನ್ನು  ನಾನಾ ಕಾರಣಗಳಿಂದ 3 ತಿಂಗಳ ಹಿಂದೆ ಕೇರಳ ಜೈಲ್​ಗೆ ಶಿಫ್ಟ್ ಮಾಡಲಾಗಿತ್ತು. ಆದ್ರೆ, ಅದರಕ್ಕೂ ಮೊದಲು ಬೆಂಗಳೂರಿನ ಪರಪ್ಪನ ಅಗ್ರಾಹರ ಜೈಲಿನಲ್ಲಿ ಇತರೆ ಖೈದಿಗಳನ್ನು ಸಂಪರ್ಕಿಸಿದ್ದ ಎನ್ನಲಾಗಿದೆ. ಇದರಿಂದ ಈ ಬಗ್ಗೆ ತನಿಖೆಗೆ ಆದೇಶಿಸಿಸಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:39 pm, Fri, 21 July 23

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ