AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇತರೆ ಖೈದಿಗಳ ಜತೆ ಉಗ್ರ ನಸೀರ್ ಸಂಪರ್ಕ, ಆಂತರಿಕ ತನಿಖೆಗೆ ಆದೇಶ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್​ಇಟಿ ಉಗ್ರ ನಜೀರ್ ಇತರೆ ಖೈದಿಗಳ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಆತಂರಿಕ ತನಿಖೆಗೆ ಆದೇಶಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇತರೆ ಖೈದಿಗಳ ಜತೆ ಉಗ್ರ ನಸೀರ್ ಸಂಪರ್ಕ, ಆಂತರಿಕ ತನಿಖೆಗೆ ಆದೇಶ
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on:Jul 21, 2023 | 3:19 PM

ಬೆಂಗಳೂರು, (ಜುಲೈ 21): ಬೆಂಗಳೂರಿನಲ್ಲಿ(Bengaluru( ಐವರು ಶಂಕಿತ ಭಯೋತ್ಪಾದಕರ(suspected terrorists) ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಎಲ್​ಇಟಿ ಉಗ್ರ ಟಿ ನಸೀರ್ ಇತರ ಖೈದಿಗಳ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ  ಆಂತರಿಕ ತನಿಖೆಗೆ ಆದೇಶಿಸಲಾಗಿದೆ.  ಆಂತರಿಕ ತನಿಖೆಗೆ ಆದೇಶಿಸಿ ಇಂದು(ಜುಲೈ 21) ಕಾರಾಗೃಹ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ಅಷ್ಟೇ ನಸೀರ್​ನನ್ನ ಕೇರಳ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಆದ್ರೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಇತರೆ ಖೈದಿಗಳ ಜೊತೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾದಗಿದೆ. ಹೀಗಾಗಿ ತನಿಖೆಗೆ ಆದೇಶಿಸಲಾಗಿದೆ.

ಇದನ್ನೂ ಓದಿ: 2008ರ ಬೆಂಗಳೂರು ಸರಣಿ ಸ್ಪೋಟದ ರುವಾರಿ ನಾಸೀರ್​ನ ಮತ್ತೊಂದು ಸಂಚು ಬಯಲು

ಉಗ್ರ ನಸೀರ್​ಗೂ ಈಗ ಬಂಧಿತ ಐವರು ಶಂಕಿತ ಉಗ್ರರಿಗೂ ಯಾವುದೇ ಸಂಪರ್ಕವಿರಲಿಲ್ಲ. ಆದ್ರೆ, ಜೈಲಿನಲ್ಲಿರುವ ನಜೀರ್ ನನ್ನ ಭೇಟಿ ಮಾಡಬೇಕು ಅಂದಾಗಲೆಲ್ಲ ಜುನೈದ್ ಜೈಲು ಸೇರುತ್ತಿದ್ದ. ಬರೋಬ್ಬರಿ 4 ಬಾರಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ನಜೀರ್ ನನ್ನು ಜುನೈದ್ ಭೇಟಿ ಮಾಡಿದ್ದ. ಟಿ ನಸೀರ್ ಕೊಡುತ್ತಿದ್ದ ಮಾರ್ಗದರ್ಶನದಂತೆ ಜುನೈದ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಜೈಲಿಗೆ ಹೋಗಬೇಕು ಅನಿಸಿದಾಗಲೆಲ್ಲಾ ಬೇರೆ ಬೇರೆ ಕೇಸ್ ನಲ್ಲಿ ಭಾಗಿಯಾಗಿ ಜೈಲು ಸೇರುತ್ತಿದ್ದ. 2 ಬಾರಿ ವಿದೇಶಕ್ಕೆ ಹೋಗಿ ಬಂದಿರುವ ಶಂಕಿತ ಉಗ್ರ ಜುನೈದ್, ಸದ್ಯ ಅರೆಸ್ಟ್ ಆಗಿರುವ ಶಂಕಿತ ಉಗ್ರರನ್ನು ಈ ಜುನೈದ್​ ಹ್ಯಾಂಡಲ್ ಮಾಡುತ್ತಿದ್ದ. ಜುನೈದ್ ಹೇಳಿದ್ದಂತೆ ಈ ಐವರು ಶಂಕಿತ ಉಗ್ರರು ಕೆಲಸ ಮಾಡುತ್ತಿದ್ದರು ಎನ್ನುವ ಮಾಹಿತಿ ಹೊರಬಿದ್ದಿದೆ. ಮೂಲತ ಕೇರಳ ನಿವಾಸಿಯಾಗಿರುವ ಉಗ್ರ ನಸೀರ್ ನನ್ನು  ನಾನಾ ಕಾರಣಗಳಿಂದ 3 ತಿಂಗಳ ಹಿಂದೆ ಕೇರಳ ಜೈಲ್​ಗೆ ಶಿಫ್ಟ್ ಮಾಡಲಾಗಿತ್ತು. ಆದ್ರೆ, ಅದರಕ್ಕೂ ಮೊದಲು ಬೆಂಗಳೂರಿನ ಪರಪ್ಪನ ಅಗ್ರಾಹರ ಜೈಲಿನಲ್ಲಿ ಇತರೆ ಖೈದಿಗಳನ್ನು ಸಂಪರ್ಕಿಸಿದ್ದ ಎನ್ನಲಾಗಿದೆ. ಇದರಿಂದ ಈ ಬಗ್ಗೆ ತನಿಖೆಗೆ ಆದೇಶಿಸಿಸಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:39 pm, Fri, 21 July 23

ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ