AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಶಂಕಿತ ಉಗ್ರರ ಬೇರೆಯದ್ದೆ ಕಥೆ ಹೇಳ್ತಿವೆ ಸಿಕ್ಕ ಪಿಸ್ತೂಲ್, ವಾಕಿಟಾಕಿ, ಜೀವಂತ ಗುಂಡುಗಳು

ಸಿಸಿಬಿ ಅಧಿಕಾರಿಗಳು ಐವರು ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿ ತನಿಖೆ ಶುರುಮಾಡಿದೆ ತನಿಖೆ ವೇಳೆ ಸ್ಪೋಟಕ ಅಂಶಗಳು ಹೊರಬರುತ್ತಿದೆ.. ಹಣದ ಮೂಲ. ಹಾಗು ಸಿಕ್ಕ ಜೀವಂತ ಗುಂಡುಗಳು, ವಾಕಿಟಾಕಿ, ಪಿಸ್ತೂಲ್​ ಬೇರೆಯದ್ದೆ ಕಥೆ ಹೇಳುತ್ತಿವೆ.

ಬೆಂಗಳೂರಿನ ಶಂಕಿತ ಉಗ್ರರ ಬೇರೆಯದ್ದೆ ಕಥೆ ಹೇಳ್ತಿವೆ ಸಿಕ್ಕ ಪಿಸ್ತೂಲ್, ವಾಕಿಟಾಕಿ, ಜೀವಂತ ಗುಂಡುಗಳು
ಶಂಕಿತ ಉಗ್ರರು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jul 20, 2023 | 9:27 AM

Share

ಬೆಂಗಳೂರು, (ಜುಲೈ 20): ಸಿಸಿಬಿ (CCB) ಅಧಿಕಾರಿಗಳು ಐವರು ಶಂಕಿತ ಉಗ್ರರನ್ನು(suspected terrorists) ಅರೆಸ್ಟ್ ಮಾಡಿ ತನಿಖೆ ಶುರುಮಾಡಿದೆ ತನಿಖೆ ವೇಳೆ ಸ್ಪೋಟಕ ಅಂಶಗಳು ಹೊರಬರುತ್ತಿದೆ.. ಹಣದ ಮೂಲ. ಹಾಗು ಸಿಕ್ಕ ಜೀವಂತ ಗುಂಡುಗಳು ಬೇರೆಯದ್ದೆ ಕಥೆ ಹೇಳುತ್ತಿವೆ. ಹೌದು.. ಸಿಸಿಬಿ ಕೈಯಲ್ಲಿ ಲಾಕ್ ಆಗಿರುವ ಕ್ರಿಮಿಗಳ ಬಳಿ 45 ಜೀವಂತ ಗುಂಡು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್​ಗಳು ಸಿಕ್ಕಿವೆ. ಇವುಗಳನ್ನೆಲ್ಲ ಖರೀದಿಸಲು ಖುದ್ದು ಎ2 ಆರೋಪಿ ಮಹಮ್ಮದ್ ಜುನೈದ್ ವಿದೇಶದಲ್ಲಿ ಕುಳಿತು ಫಂಡ್ ಕೊಡುತ್ತಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ. 2017 ರಲ್ಲಿ ಕೊಲೆ ಕೇಸ್ ಬಳಿಕ 2020ರಲ್ಲಿ ರಕ್ತ ಚಂದನ ಕೇಸ್, 2021ರಲ್ಲಿ ಎರಡು ಬಾರಿ ದರೋಡೆಗೆ ಸಂಚು ಪ್ರಕರಣದಲ್ಲಿ ಜೈಲು ಸೇರಿದ್ದ ಜುನೈದ್, 2021ರಲ್ಲಿ ಜೈಲಿಂದ ರಿಲೀಸ್ ಆದ್ಮೇಲೆ ನಾಪತ್ತೆಯಾಗಿದ್ದ. ಈಗ ವಿದೇಶದಲ್ಲಿ ಕುಳಿತು ಉಗ್ರವಾದಕ್ಕೆ ಮಸಲತ್ತು ಆತಂಕ ಮೂಡಿಸಿದೆ.. ಶಸ್ತ್ರಾಸ್ತ್ರ ಖರೀದಿಗೆ ಹಣ ಕೊಡುತ್ತಿದ್ದು, ಈ ಪಿಸ್ತೂಲ್, ಗುಂಡುಗಳು ಗುಜರಾತ್ ಮತ್ತು ಉತ್ತರ ಪ್ರದೇಶದಿಂದ ಬಂದಿರಬಹುದು ಎಂಬ ಮಾಹಿತಿ ಇದೆ.

ಇದನ್ನೂ ಓದಿ: ವಿಚಾರಣೆ ವೇಳೆ ಸಿಸಿಬಿ ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರರು

ಸಿಸಿಬಿ ವಶಕ್ಕೆ ಪಡೆದಿರುವ ಪಿಸ್ತೂಲ್ ಮತ್ತು ಗುಂಡುಗಳು ಎರಡು ಮಾದರಿಯವು. ಒಂದು ಹೊರಗಿನ ಮಾರ್ಕೆಟ್​ನಲ್ಲಿ ಸೇಲ್ ಮಾಡಿದ್ರೆ, 15 ಗುಂಡುಗಳು ಒಪನ್ ಮಾರ್ಕೆಟ್​ನಲ್ಲಿ ಸೇಲ್ ಮಾಡುವಂತವು. ಈ ಗುಂಡುಗಳನ್ನ ಪೊಲೀಸರು, ಮಿಲಿಟರಿ ಮತ್ತು ವಿದೇಶಿ ಟೆರರ್ ಸಂಘಟನೆಗಳು ಬಳಸುತ್ತವೆ. ಇವು 303 ಹೆವೀ ರೈಫಲ್​ಗಿಂತ ಕೆಳ ಹಂತದ ವೆಪನ್​ಗೆ ಬಳಸುವ ಗುಂಡುಗಳಾಗಿವೆ. ಸದ್ಯಕ್ಕೆ ಸಿಸಿಬಿ ಪೊಲೀಸರ ತನಿಖೆ ವೇಳೆ ಮೂರು ಹಂತದಲ್ಲಿ ಈ ಮಾಡ್ಯೂಲ್ ಆಪರೇಟ್ ಆಗಿರುವುದು ಕಂಡು ಬಂದಿದೆ.

ಇಲ್ಲಿ ಐವರು ಬಂಧಿತ ಉಗ್ರರಿಗೆ ಟಿ ನಸೀರ್ ಲಿಂಕ್ ಇರುವುದು ಕಡಿಮೆ ಎನ್ನಲಾಗಿದೆ. ಇಬ್ಬರಿಗೂ ಮಧ್ಯದಲ್ಲಿ ಇದ್ದು ಕೆಲಸ ಮಾಡಿದ್ದವನು ಜುನೈದ್. ಹೀಗಾಗಿ ಜುನೈದ್ ಈ ಕೇಸ್ ಗೆ ಅವಶ್ಯಕ. ಹೀಗಾಗಿ ಸಿಸಿಬಿ ಹಾಗು ಕೇಂದ್ರ ತನಿಖಾ ಸಂಸ್ಥೆಯ ಮೂಲಕ ವಿದೇಶದಲ್ಲಿ ಇರುವ ಜುನೈದ್ ನ ಪತ್ತೆ ಮಾಡಲು ತಯಾರಿ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಿತ ಉಗ್ರರಿಂದ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು​, ಸ್ಟೋಟಕ ಮಾಹಿತಿ ಬಹಿರಂಗಪಡಿಸಿದ ಪೊಲೀಸ್ ಕಮಿಷನರ್

ವಾಕಿಟಾಕಿ ಸುತ್ತ ಹಲವು ಅನುಮಾನ

ಇನ್ನು ಕಾರ್ಯಚರಣೆ ವೇಳೆ ಶಂಕಿತ ಉಗ್ರರ ಬಳಿ ಸಿಕ್ಕಿರುವ ವಾಕಿಟಾಕಿ ಸುತ್ತ ಹಲವಾರು ಸಂಶಯಗಳು ಹುಟ್ಟಿಕೊಂಡಿವೆ. ಮೊಬೈಲ್ ಬಳಸಲು ಸಾಧ್ಯವಿಲ್ಲದ ಕಡೆ ವಾಕಿಟಾಕಿ ಬಳಕೆ ಮಾಡಲಾಗುತ್ತೆ. ಕಾಡಿನಲ್ಲಿ ಟ್ರೈನಿಂಗ್ ನಡೆಸುವಾಗ ವಾಕಿಟಾಕಿ ಬಳಕೆ ಮಾಡಲಾಗುತ್ತೆ. ಒಂದ ನಿರ್ದಿಷ್ಟ ಪ್ರದೇಶದಲ್ಲಿ ಅಥವಾ ಕಟ್ಟಡದ ಮೇಲೆ ಅಟ್ಯಾಕ್ ಮಾಡಿದಾಗ ಪೊಲೀಸರು ಎಂಟ್ರಿ ಕೊಟ್ರೆ ಜಾಮರ್ ಬಳುತ್ತಾರೆ. ಈ ವೇಳೆ ಮೊಬೈಲ್ ವರ್ಕ್ ಆಗುವುದಿಲ್ಲ. ಹೀಗಾಗಿ ಆ ಸಮಯದಲ್ಲಿ ವಾಕಿಟಾಕಿ ಬಳಕೆ ಮಾಡುವ ಸಾದ್ಯತೆ ಇದೆ.

ಮುಂಬಯಿ ಅಟ್ಯಾಕ್ ಮಾದರಿಯಲ್ಲಿ ಕೃತ್ಯ ಎಸಗಿದ್ರೆ ವಾಕಿಟಾಕಿ ಸಹಾಯಕಾರಿ. ಹೀಗಾಗಿ ಬಂಧಿತರ ಅಸಲಿ ಪ್ಲ್ಯಾನ್​ ಏನು ಎಂದು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮತ್ತೊಂದೆಡೆ ಎನ್​ಐಎ ಅಧಿಕಾರಿಗಳು ಸಹ ಸಿಸಿಬಿ ತನಿಖೆಯ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದಾರೆ. ಅವಶ್ಯಕತೆ ಇದ್ದಲಿ ಕೇಸ್ ಮುಂದಿನ ಹಂತದಲ್ಲಿ ಎನ್ ಐ ಎ ತನಿಖೆ ನಡೆಸುವಾ ಸಾದ್ಯತೆಗಳಿವೆ.

ಶಂಕಿತ ಉಗ್ರರ ಬಳಿ ಸಿಕ್ಕ ಗನ್ ಅಸಲಿ ಕಥೆ ಏನು..?

ಇನ್ನು ಶಂಕಿತ ಉಗ್ರರ ಬಳಿ ಸಿಕ್ಕಿರುವ ಗನ್ ಅಸಲಿ ಕಥೆ ಏನು ಎನ್ನುವುದನ್ನು ನೋಡುವುದಾದರೆ, ಕಂಟ್ರಿ ಮೇಡ್ ಪಿಸ್ತೂಲ್ ತರಬೇತಿ ಪಡೆದಿದ್ರಾ ಎನ್ನುವ ಶಂಕೆಗಳು ವ್ಯಕ್ತವಾಗಿವೆ. ಗನ್ ಬಳಸೋದು ಹೇಗೆ ಎಂದು ಟ್ರೈನಿಂಗ್ ಪಡೆದಿರುವ ಶಂಕೆ ಇದ್ದು, ಈ ಬಗ್ಗೆ ಇನ್ನು ಯಾವುದೇ ವಿಚಾರ ಬಂಧಿತರು ಬಾಯ್ಬಿಟ್ಟಿಲ್ಲ. ಪಿಸ್ತೂಲ್ ಬಳಕೆ ಆಗಿದ್ಯಾ? ಎಷ್ಟು ಗುಂಡು ಬಳಕೆಯಾಗಿರಬಹುದು? ಮಾದರಿ ಯಾವುದು ಎಂಬುದೆಲ್ಲಾ ಪರಿಶೀಲನೆ ಮಾಡಲು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಪಿಸ್ತೂಲ್ ಗಳನ್ನು ಎಫ್​ಎಸ್​ಎಲ್​ಗೆ ಕಳುಹಿಸಲು ಸಿದ್ದತೆ ನಡೆಸಿದ್ದು, ವರದಿ ಬಳಿಕ ಪಿಸ್ತೂಲ್ ದುಷ್ಕೃತ್ಯಕ್ಕೆ ಬಳಕೆ ಬಗ್ಗೆ ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮಕೈಗೊಳ್ಳಲಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:23 am, Thu, 20 July 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ