AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ಪ್ರದೇಶವು ದೇಶದ ನಂಬರ್ 1 ಅಪಘಾತದ ಹಾಟ್​ಸ್ಪಾಟ್​

ಇಕೋ ಆ್ಯಕ್ಸಿಡೆಂಟ್ ಇಂಡೆಕ್ಸ್​ 2024ರಲ್ಲಿ ಭಾರತಾದ್ಯಂತ ಸಂಭವಿಸಿದ ಅಪಘಾತಗಳ ಕುರಿತು ವರದಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಬೆಂಗಳೂರಿನ ಈ ಪ್ರದೇಶವು ದೇಶದಲ್ಲೇ ನಂಬರ್​ 1 ಅಪಘಾತದ ಹಾಟ್​ಸ್ಪಾಟ್​ ಎಂದು ಕರೆಯಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯು ದೇಶದ ಅಗ್ರ ಅಪಘಾತ ಹಾಟ್‌ಸ್ಪಾಟ್ ಎಂದು ಹೇಳಲಾಗಿದೆ.

ಬೆಂಗಳೂರಿನ ಈ ಪ್ರದೇಶವು ದೇಶದ ನಂಬರ್ 1 ಅಪಘಾತದ ಹಾಟ್​ಸ್ಪಾಟ್​
ಸಾಂದರ್ಭಿಕ ಚಿತ್ರImage Credit source: Indian Express
Follow us
ನಯನಾ ರಾಜೀವ್
|

Updated on: Dec 05, 2024 | 12:35 PM

ಇಕೋ ಆ್ಯಕ್ಸಿಡೆಂಟ್ ಇಂಡೆಕ್ಸ್​ 2024ರಲ್ಲಿ ಭಾರತಾದ್ಯಂತ ಸಂಭವಿಸಿದ ಅಪಘಾತಗಳ ಕುರಿತು ವರದಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಬೆಂಗಳೂರಿನ ಈ ಪ್ರದೇಶವು ದೇಶದಲ್ಲೇ ನಂಬರ್​ 1 ಅಪಘಾತದ ಹಾಟ್​ಸ್ಪಾಟ್​ ಎಂದು ಕರೆಯಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯು ದೇಶದ ಅಗ್ರ ಅಪಘಾತ ಹಾಟ್‌ಸ್ಪಾಟ್ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ರಸ್ತೆಗುಂಡಿಗಳಿಂದಾಗಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಿವೆ. ಇದು ಒಟ್ಟು ಪ್ರಕರಣಗಳಲ್ಲಿ ಶೇಕಡಾ 44.8 ರಷ್ಟು ಆಘಾತಕಾರಿಯಾಗಿದೆ. ದೆಹಲಿಯು ಅಂತಹ ಅಪಘಾತಗಳು ಶೇ. 13.3 ರಷ್ಟಿವೆ.

ಮುಂಬೈ ಶೇ.12.3 ರಷ್ಟಿದೆ. 2024 ರಲ್ಲಿ ಒಟ್ಟಾರೆಯಾಗಿ ಅತಿ ಹೆಚ್ಚು ಅಪಘಾತಗಳಿಗೆ ಸಾಕ್ಷಿಯಾದ ಹೈದರಾಬಾದ್, ಶೇ. 16.4 ರಷ್ಟು ವರದಿ ಮಾಡಿದೆ, ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿಆರ್) 15.9 ಶೇಕಡಾವನ್ನು ಹೊಂದಿದೆ. ಬೊಮ್ಮನಹಳ್ಳಿಯ ಜೊತೆಗೆ, ದೆಹಲಿ-ಎನ್‌ಸಿಆರ್‌ನ ನೋಯ್ಡಾ, ಪುಣೆಯ ಮಾರುಂಜಿ ಮತ್ತು ಮುಂಬೈನ ಮೀರಾ ರೋಡ್ ಸೇರಿದಂತೆ ಇತರ ಅಪಘಾತ ಪೀಡಿತ ಪ್ರದೇಶಗಳಲ್ಲಿ ಸೇರಿವೆ.

ಕುಡಿದು ವಾಹನ ಚಲಾಯಿಸುವುದು, ಮರಗಳಿಂದ ತೆಂಗಿನ ಕಾಯಿ ಬೀಳುವುದು, ಸಂಚಾರ ನಿಯಮ ಉಲ್ಲಂಘನೆ ಸೇರಿದಂತೆ ಹಲವು ವಿಷಯಗಳಿವೆ. ರಸ್ತೆಗಳಲ್ಲಿ ದನ ಕರುಗಳು ಅಡ್ಡ ಬಂದು ಹೆಚ್ಚಿನ ಅಪಘಾತಗಳು ಸಂಭವಿಸಿವೆ. ಐಟಿ ರಾಜಧಾನಿ ಎಂದು ಜನಪ್ರಿಯವಾಗಿರುವ ಬೆಂಗಳೂರಿನಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ರಸ್ತೆ ಅಪಘಾತಗಳು ಮತ್ತು ಅದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.

ಮತ್ತಷ್ಟು ಓದಿ:Road Accident Deaths: 2022ರಲ್ಲಿ ರಸ್ತೆ ಅಪಘಾತದಿಂದ ಮೃತಪಟ್ಟವರ ಸಂಖ್ಯೆ ದೆಹಲಿಯಲ್ಲೇ ಹೆಚ್ಚು

ರಸ್ತೆ ಅಪಘಾತಗಳಿಗೆ ಒಂದು ಪ್ರಮುಖ ಕಾರಣವೆಂದರೆ ಅತಿವೇಗ ಮತ್ತು ಅಜಾಗರೂಕತೆಯ ಚಾಲನೆ ಕಾರಣ. 2020 ರಲ್ಲಿ 1,928 ರಸ್ತೆ ಅಪಘಾತ ಪ್ರಕರಣಗಳು ಮತ್ತು 2024 ರಲ್ಲಿ ಅಕ್ಟೋಬರ್ 31 ರವರೆಗೆ 3,969 ಪ್ರಕರಣಗಳು ವರದಿಯಾಗಿವೆ. ರಸ್ತೆ ಅಪಘಾತ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ. 2020 ರಲ್ಲಿ, 344 ಸಾವುಗಳು ವರದಿಯಾಗಿದ್ದು, 2024 ರಲ್ಲಿ 723 ಕ್ಕೆ ಏರಿದೆ.

ಅತಿ ಹೆಚ್ಚು ರಸ್ತೆ ಅಪಘಾತಗಳು, ಗಾಯಗಳು ಮತ್ತು ಸಾವುನೋವುಗಳಲ್ಲಿ ಬೆಂಗಳೂರು ಕರ್ನಾಟಕದಲ್ಲಿ ಅಗ್ರಸ್ಥಾನದಲ್ಲಿದೆ, ತುಮಕೂರು ನಂತರದ ಸ್ಥಾನದಲ್ಲಿದೆ ಎಂದು ಇತ್ತೀಚೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ನೇಮಕಾತಿ) ಮತ್ತು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಆಯುಕ್ತ ಕೆ.ವಿ.ಶರತ್ ಚಂದ್ರ ಹೇಳಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ