AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru- Tirupati: ಬೆಂಗಳೂರಿನಿಂದ ತಿರುಪತಿಗೆ ಪ್ಯಾಕೇಜ್ ಟೂರ್​ ಹೋಗಲು ಕೆಎಸ್​ಆರ್​ಟಿಸಿ ಬಸ್ ಸೇವೆಯ ಮಾಹಿತಿ ಇಲ್ಲಿದೆ

KSRTC Bus Service: ಬೆಂಗಳೂರು-ತಿರುಪತಿ ಪ್ಯಾಕೇಜ್ ಟೂರ್​ನ ಪ್ರಯಾಣ ದರ ವಯಸ್ಕರಿಗೆ ಭಾನುವಾರದಿಂದ ಗುರುವಾರದವರೆಗೆ ಹೊರಡುವ ಸಾರಿಗೆಗಳಿಗೆ ರೂ. 2200/- + ಜಿಎಸ್‍ಟಿ, ಮಕ್ಕಳಿಗೆ (6 ರಿಂದ 12 ವರ್ಷ) ರೂ. 1800/- + ಜಿಎಸ್‍ಟಿ, ವಾರಾಂತ್ಯ ದಿನ (ಶುಕ್ರವಾರ ಹಾಗೂ ಶನಿವಾರ ಹೊರಡುವ ಸಾರಿಗೆಗಳಿಗೆ) ಪ್ರಯಾಣ ದರ ವಯಸ್ಕರಿಗೆ ರೂ. 2600/- + ಜಿಎಸ್‍ಟಿ, ಮಕ್ಕಳಿಗೆ (6 ರಿಂದ 12 ವರ್ಷ) ರೂ.2000/- + ಜಿಎಸ್‍ಟಿಯನ್ನು ನಿಗಧಿಪಡಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Bengaluru- Tirupati: ಬೆಂಗಳೂರಿನಿಂದ ತಿರುಪತಿಗೆ ಪ್ಯಾಕೇಜ್ ಟೂರ್​ ಹೋಗಲು ಕೆಎಸ್​ಆರ್​ಟಿಸಿ ಬಸ್ ಸೇವೆಯ ಮಾಹಿತಿ ಇಲ್ಲಿದೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jul 13, 2021 | 10:02 PM

Share

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ತಿರುಪತಿ ವಯಾ ಶಾಂತಿನಗರ, ಜಯನಗರ 4 ಬ್ಲಾಕ್, ನಾಗಸಂದ್ರ, ಎನ್.ಆರ್.ಕಾಲೋನಿ, ಕೆಂಪೇಗೌಡ ಬಸ್ ನಿಲ್ದಾಣ, ದೊಮ್ಮಲೂರು, ಮಾರತ್‍ಹಳ್ಳಿ, ಐ.ಟಿ.ಐ ಗೇಟ್, ಕೆ.ಆರ್.ಪುರಂ, ಹೊಸಕೋಟೆ ಮಾರ್ಗವಾಗಿ ಮತ್ತು ಬೆಂಗಳೂರು-ತಿರುಪತಿ ವಯಾ ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣ, ವಿಜಯನಗರ ಟಿಟಿಎಂಸಿ, ನವರಂಗ್, ಮಲ್ಲೇಶ್ವರಂ ಸರ್ಕಲ್, ಕೆಂಪೇಗೌಡ ಬಸ್ ನಿಲ್ದಾಣ, ಐ.ಟಿ.ಐ ಗೇಟ್, ಕೆ.ಆರ್.ಪುರಂ, ಹೊಸಕೋಟೆ ಮಾರ್ಗವಾಗಿ ಐರಾವತ ಕ್ಲಬ್‍ಕ್ಲಾಸ್ (ಮಲ್ಟಿ ಆಕ್ಸಲ್) ವಾಹನದೊಂದಿಗೆ ಪ್ಯಾಕೇಜ್ ಟೂರ್​ನ ದಿನಾಂಕ 16/07/2021 ರಿಂದ ಪುನರಾರಂಭಿಸಿ ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ಬೆಂಗಳೂರು-ತಿರುಪತಿ ಪ್ಯಾಕೇಜ್ ಟೂರ್​ನ ಪ್ರಯಾಣ ದರ ವಯಸ್ಕರಿಗೆ ಭಾನುವಾರದಿಂದ ಗುರುವಾರದವರೆಗೆ ಹೊರಡುವ ಸಾರಿಗೆಗಳಿಗೆ ರೂ. 2200/- + ಜಿಎಸ್‍ಟಿ, ಮಕ್ಕಳಿಗೆ (6 ರಿಂದ 12 ವರ್ಷ) ರೂ. 1800/- + ಜಿಎಸ್‍ಟಿ, ವಾರಾಂತ್ಯ ದಿನ (ಶುಕ್ರವಾರ ಹಾಗೂ ಶನಿವಾರ ಹೊರಡುವ ಸಾರಿಗೆಗಳಿಗೆ) ಪ್ರಯಾಣ ದರ ವಯಸ್ಕರಿಗೆ ರೂ. 2600/- + ಜಿಎಸ್‍ಟಿ, ಮಕ್ಕಳಿಗೆ (6 ರಿಂದ 12 ವರ್ಷ) ರೂ.2000/- + ಜಿಎಸ್‍ಟಿಯನ್ನು ನಿಗಧಿಪಡಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕೊರೊನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exams 2021) ಜುಲೈ 19 ಹಾಗೂ 22ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಕೆಎಸ್​ಆರ್​ಟಿಸಿ (KSRTC) ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಪರೀಕ್ಷೆಯ ದಿನಗಳಂದು ಅಂದರೆ ಜುಲೈ 19 ಹಾಗೂ ಜುಲೈ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು (Free Service) ಅವಕಾಶ ಮಾಡಿಕೊಡುವುದಾಗಿ ತಿಳಿಸಿದೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಪರೀಕ್ಷಾ ಪ್ರಮಾಣ ಪತ್ರ ತೋರಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ರಾಜ್ಯಾದ್ಯಂತ ಎಲ್ಲಾ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದ್ದು, ಪರೀಕ್ಷಾ ಕೇಂದ್ರದ ತನಕ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಈ ವಿಚಾರದ ಕುರಿತು ಕೆಎಸ್​ಆರ್​ಟಿಸಿ ಎಂಡಿ ಶಿವಯೋಗಿ ಕಳಸದ್​ ಆದೇಶ ಹೊರಡಿಸಿದ್ದು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಜುಲೈ 19 ಹಾಗೂ ಜುಲೈ 22ರಂದು ತಾವು ವಾಸಿಸುವ ಪ್ರದೇಶದಿಂದ ಪರೀಕ್ಷಾ ಕೇಂದ್ರದ ತನಕ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣ ಬೆಳೆಸಬಹುದಾಗಿದೆ. ಪರೀಕ್ಷಾ ಪ್ರಮಾಣ ಪತ್ರ ತೋರಿಸಿದರೆ ಸಾಕು ಯಾವುದೇ ರೀತಿಯ ಶುಲ್ಕ ತೆರಬೇಕಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸಾಮಾನ್ಯ ಹಾಗೂ ವೇಗಧೂತ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ ಮುಗಿಸಿ ವಾಪಾಸು ಮನೆಗೆ ಬರುವಾಗಲೂ ಇದು ಅನ್ವಯವಾಗಲಿದೆ. ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹಾಗೂ ಪರೀಕ್ಷಾ ಕೇಂದ್ರದಿಂದ ಮರಳಿ ಮನೆಗೆ ಬರುವಾಗ ಪರೀಕ್ಷಾ ಪ್ರಮಾಣ ಪತ್ರ ತೋರಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಕೊರೊನಾ ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ.

ಇದನ್ನೂ ಓದಿ: 

ರಿಲೀಸ್​ಗೂ ಮುನ್ನ ರೋಚಕತೆ ಸೃಷ್ಟಿಸಿದ Nokia C30 ಸ್ಮಾರ್ಟ್​ಫೋನ್: ಪ್ರಮುಖ ಮಾಹಿತಿ ಸೋರಿಕೆ

(Bengaluru Tirupati Here is information on the package tour bus)

Follow Us
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ಸಭೆಗೆ ಗೈರಾದ ಹೆಸ್ಕಾಂ ಅಧಿಕಾರಿ ವಿರುದ್ಧ ಎಂ.ಬಿ. ಪಾಟೀಲ್​​ ಗರಂ
ಸಭೆಗೆ ಗೈರಾದ ಹೆಸ್ಕಾಂ ಅಧಿಕಾರಿ ವಿರುದ್ಧ ಎಂ.ಬಿ. ಪಾಟೀಲ್​​ ಗರಂ