ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಕಡೆಯಿಂದ ಅಯೋಧ್ಯೆಗೆ 11 ವಿಶೇಷ ರೈಲು

ದರ, ಮಾರ್ಗಗಳು ಮತ್ತು ವೇಳಾಪಟ್ಟಿಯ ವಿವರಗಳನ್ನು ರೂಪಿಸಲಾಗುತ್ತಿದೆ. ಆ ಕುರಿತ ಹೆಚ್ಚಿನ ವಿವರ ಶೀಘ್ರದಲ್ಲೇ ದೊರೆಯಲಿದೆ ಎಂದು ಮೂಲಗಳು ಹೇಳಿವೆ. ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ಬಳಿಕ ಒಂದು ತಿಂಗಳ ಒಳಗಾಗಿ ರೈಲುಗಳು ಸಂಚಾರ ಆರಂಭಿಸುವ ನಿರೀಕ್ಷೆ ಇದೆ.

ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಕಡೆಯಿಂದ ಅಯೋಧ್ಯೆಗೆ 11 ವಿಶೇಷ ರೈಲು
ಸಾಂದರ್ಭಿಕ ಚಿತ್ರ
Follow us
| Updated By: Digi Tech Desk

Updated on:Jan 22, 2024 | 11:38 AM

ಬೆಂಗಳೂರು, ಜನವರಿ 11: ಕರ್ನಾಟಕದ ವಿವಿಧ ಕಡೆಗಳಿಂದ ಅಯೋಧ್ಯೆಗೆ (Ayodhya) 11 ವಿಶೇಷ ರೈಲುಗಳನ್ನು (Special Trains) ಫೆಬ್ರವರಿ ತಿಂಗಳಿನಿಂದ ಆರಂಭಿಸಲು ಭಾರತೀಯ ರೈಲ್ವೆ ಮುಂದಾಗಿರುವ ಬಗ್ಗೆ ವರದಿಯಾಗಿದೆ. ಈ ಪೈಕಿ ಮೂರು ರೈಲುಗಳು ಬೆಂಗಳೂರಿನಿಂದ, ತಲಾ ಎರಡು ಹುಬ್ಬಳ್ಳಿ, ಮೈಸೂರು ಮತ್ತು ಮಂಗಳೂರಿನಿಂದ, ತಲಾ ಒಂದು ರೈಲು ಶಿವಮೊಗ್ಗ ಮತ್ತು ಬೆಳಗಾವಿಯಿಂದ ಹೊರಡಲಿವೆ ಎಂದು ನೈಋತ್ಯ ರೈಲ್ವೆಯ ಉನ್ನತ ಮೂಲಗಳು ತಿಳಿಸಿವೆ.

ಆನ್​ಲೈನ್​ ಟಿಕೆಟ್​ಗೆ ಮಾತ್ರ ಅವಕಾಶ

ಅಯೋಧ್ಯೆಗೆ ಸಂಚರಿಸಲಿರುವ ರೈಲುಗಳನ್ನು ಐಆರ್​ಸಿಟಿಸಿ ನಿರ್ವಹಿಸಲಿದೆ. ಈ ರೈಲು ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಕಾಯ್ದಿರಿಸಬಹುದಾಗಿದೆ. ಇವು ಸಾಮಾನ್ಯ ರೈಲುಗಳಾಗಿರುವುದಿಲ್ಲ. ಕೌಂಟರ್‌ನಲ್ಲಿ ಯಾವುದೇ ಟಿಕೆಟ್‌ಗಳನ್ನು ನೀಡಲಾಗುವುದಿಲ್ಲ. ಹಾಗೆಯೇ ಯಾವುದೇ ಕೊನೆಯ ಕ್ಷಣದ ಬುಕಿಂಗ್‌ಗಳು ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ದರ, ಮಾರ್ಗಗಳು ಮತ್ತು ವೇಳಾಪಟ್ಟಿಯ ವಿವರಗಳನ್ನು ರೂಪಿಸಲಾಗುತ್ತಿದೆ. ಆ ಕುರಿತ ಹೆಚ್ಚಿನ ವಿವರ ಶೀಘ್ರದಲ್ಲೇ ದೊರೆಯಲಿದೆ ಎಂದು ಮೂಲಗಳು ಹೇಳಿವೆ.

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ಬಳಿಕ ಒಂದು ತಿಂಗಳ ಒಳಗಾಗಿ ರೈಲುಗಳು ಸಂಚಾರ ಆರಂಭಿಸುವ ನಿರೀಕ್ಷೆ ಇದೆ.

ರೈಲ್ವೆಯು ಪ್ರಸ್ತುತ ಅಯೋಧ್ಯಾ ಧಾಮ್, ಅಯೋಧ್ಯಾ ಕಂಟೋನ್ಮೆಂಟ್ ಮತ್ತು ಸಲಾರ್‌ಪುರ ನಿಲ್ದಾಣಗಳಲ್ಲಿನ ಯಾರ್ಡ್‌ಗಳನ್ನು ಮರುರೂಪಿಸುತ್ತಿದೆ. ಹೀಗಾಗಿ ಈ ಸ್ಥಳಗಳಿಂದ ಬೆಂಗಳೂರಿಗೆ ತೆರಳುವ ಎರಡು ರೈಲುಗಳನ್ನು ಬೇರೆಡೆಯಿಂದ ಸಂಚರಿಸುವಂತೆ ಮಾಡಲಾಗಿದೆ. ಯಾರ್ಡ್ ಪುನರ್ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ.

ಇದನ್ನೂ ಓದಿ: ಕಿಷ್ಕಿಂಧೆಯಲ್ಲಿ ರಾಮನ ಹೆಜ್ಜೆ ಗುರುತು; ಹನುಮಂತನ ತಾಯಿ ಅಂಜನಾದೇವಿ ಭೇಟಿ ಮಾಡಿ ಆಶಿರ್ವಾದ ಪಡೆದಿದ್ದ ಪ್ರಭು ಶ್ರೀರಾಮ

ಅಯೋಧ್ಯೆಗೆ ರೈಲುಗಳನ್ನು ಆರಂಭಿಸಿದ ನಂತರ, ಐಆರ್​ಸಿಟಿಸಿಯು ಕರ್ನಾಟಕ ಭಾರತ್ ಗೌರವ್ ಯಾತ್ರಾ ರೈಲುಗಳನ್ನು ನಿಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.

ಶ್ರೀರಾಮನಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Thu, 11 January 24

ತಾಜಾ ಸುದ್ದಿ
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​