AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಯುವಕರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ಐಕ್ಯಾಟ್​ 3ನೇ ಕೇಂದ್ರ

ಕರ್ನಾಟಕದ ಜನರಿಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸಿಹಿ ಸುದ್ದಿ ನೀಡಿದ್ದಾರೆ. ಕರ್ನಾಟಕದ ಯುವಕರಿಗೆ ಉದ್ಯೋಗವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಬೆಂಗಳೂರಿನಲ್ಲಿ ಐಕ್ಯಾಟ್​ನ ಮೂರನೇ ಕೇಂದ್ರ ಸ್ಥಾಪನೆ ಬಗ್ಗೆ ಒಪ್ಪಂದವಾಗಿದೆ. ಶೀಘ್ರದಲ್ಲೇ ಬೆಂಗಳೂರಿನಲ್ಲಿ ಐಕ್ಯಾಟ್​ ಆರಂಭವಾಗಲಿದೆ. ಈ ಮೂಲಕ ಆಟೋಮೊಬೈಲ್​ ಕ್ಷೇತ್ರಕ್ಕೆ ಭಾರಿ ಉತ್ತೇಜನ ದೊರೆಯಲಿದೆ.

ಕರ್ನಾಟಕದ ಯುವಕರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ಐಕ್ಯಾಟ್​ 3ನೇ ಕೇಂದ್ರ
ಹೆಚ್​ಡಿ ಕುಮಾರಸ್ವಾಮಿ
ವಿವೇಕ ಬಿರಾದಾರ
|

Updated on:Jan 21, 2025 | 9:13 AM

Share

ಬೆಂಗಳೂರು, ಜನವರಿ 21: ಬೆಂಗಳೂರಿನಲ್ಲಿ (Bengaluru) ಅಂತಾರಾಷ್ಟ್ರೀಯ ಆಟೋಮೋಟಿವ್​ ಟೆಕ್ನಾಲಜಿ ಕೇಂದ್ರ-ಐಕ್ಯಾಟ್​ (Establishment of ICAT center in Bangolore) ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumarasawmy) ತಿಳಿಸಿದರು.

ನಾವೀನ್ಯತೆ, ಆವಿಷ್ಕಾರ ಹಾಗೂ ಉದ್ಯಮಶೀಲತೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಆಟೋಮೊಬೈಲ್ ಕ್ಷೇತ್ರದ ಹಬ್​ ಆಗಿಯೂ ಬೆಳೆಯುತ್ತಿದೆ. ಹೀಗಾಗಿ, ಬೆಂಗಳೂರಿನಲ್ಲಿ ಐಕ್ಯಾಟ್​ ಕೇಂದ್ರ ಆರಂಭ ಮಾಡುವ ಬಗ್ಗೆ ಪ್ರಕ್ರಿಯೆಗಳನ್ನು ಶುರುಮಾಡುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ಗುತ್ತಿಗೆದಾರರು 1 ವರ್ಷ ಯಾವುದೇ ಗುತ್ತಿಗೆ ಪಡೆಯಬೇಡಿ, ಕೆಲಸ ಮಾಡಬೇಡಿ: ಕುಮಾರಸ್ವಾಮಿ

ಬೆಂಗಳೂರಿನಲ್ಲಿ ಐಕ್ಯಾಟ್​ ಸ್ಥಾಪನೆ ಮಾಡುವುದರಿಂದ ಎಲೆಕ್ಟ್ರಿಕ್​ ವಾಹನ ತಂತ್ರಜ್ಞಾನ, ಸಾಫ್ಟ್​ವೇರ್​ ನಿಯಂತ್ರಿತ ವಾಹನಗಳು, ಸ್ವಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯ ದೃಷ್ಟಿಯಲ್ಲಿ ಐಕ್ಯಾಟ್​ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ. ಬೆಂಗಳೂರಿನಲ್ಲಿ ಐಕ್ಯಾಟ್​ ಕೇಂದ್ರ ಸ್ಥಾಪನೆ ಮಾಡುವುದರಿಂದ ಅಕ್ಕಪಕ್ಕದ ರಾಜ್ಯಗಳಿಗೂ ಅನುಕೂಲವಾಗಿದೆ. ಆಟೋಮೊಬೈಲ್​ ಆವಿಷ್ಕಾರಕ್ಕೆ ಉತ್ತೇಜನ ದೊರೆಯಲಿದೆ ಮತ್ತು ಐಕ್ಯಾಟ್​ ಸ್ಥಾಪನೆಯಿಂದ ಮುಂದಿನ ಪೀಳಿಗೆಗೆ ಆಟೋಮೊಬೈಲ್​ ಕ್ಷೇತ್ರದಲ್ಲಿ ಹೊಸ ಅವಿಷ್ಕಾರಕ್ಕೆ ಹೆಚ್ಚು ಉತ್ತೇಜನ ದೊರೆಯಲಿದೆ ಎಂದರು.

ಇದಕ್ಕೂ ಮುನ್ನ ಗುರುಗ್ರಾಮ್ ಬಳಿಯ ಮನೇಸರ್‌ನಲ್ಲಿರುವ ಐಸಿಎಟಿಯ ಎರಡು ಕೇಂದ್ರಗಳಿಗೆ ಭೇಟಿ ನೀಡಿದ ಹೆಚ್​ಡಿ ಕುಮಾರಸ್ವಾಮಿ, ಅವುಗಳ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 am, Tue, 21 January 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್