AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಯುವಕರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ಐಕ್ಯಾಟ್​ 3ನೇ ಕೇಂದ್ರ

ಕರ್ನಾಟಕದ ಜನರಿಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸಿಹಿ ಸುದ್ದಿ ನೀಡಿದ್ದಾರೆ. ಕರ್ನಾಟಕದ ಯುವಕರಿಗೆ ಉದ್ಯೋಗವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಬೆಂಗಳೂರಿನಲ್ಲಿ ಐಕ್ಯಾಟ್​ನ ಮೂರನೇ ಕೇಂದ್ರ ಸ್ಥಾಪನೆ ಬಗ್ಗೆ ಒಪ್ಪಂದವಾಗಿದೆ. ಶೀಘ್ರದಲ್ಲೇ ಬೆಂಗಳೂರಿನಲ್ಲಿ ಐಕ್ಯಾಟ್​ ಆರಂಭವಾಗಲಿದೆ. ಈ ಮೂಲಕ ಆಟೋಮೊಬೈಲ್​ ಕ್ಷೇತ್ರಕ್ಕೆ ಭಾರಿ ಉತ್ತೇಜನ ದೊರೆಯಲಿದೆ.

ಕರ್ನಾಟಕದ ಯುವಕರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ಐಕ್ಯಾಟ್​ 3ನೇ ಕೇಂದ್ರ
ಹೆಚ್​ಡಿ ಕುಮಾರಸ್ವಾಮಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jan 21, 2025 | 9:13 AM

Share

ಬೆಂಗಳೂರು, ಜನವರಿ 21: ಬೆಂಗಳೂರಿನಲ್ಲಿ (Bengaluru) ಅಂತಾರಾಷ್ಟ್ರೀಯ ಆಟೋಮೋಟಿವ್​ ಟೆಕ್ನಾಲಜಿ ಕೇಂದ್ರ-ಐಕ್ಯಾಟ್​ (Establishment of ICAT center in Bangolore) ಮೂರನೇ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumarasawmy) ತಿಳಿಸಿದರು.

ನಾವೀನ್ಯತೆ, ಆವಿಷ್ಕಾರ ಹಾಗೂ ಉದ್ಯಮಶೀಲತೆಯಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಆಟೋಮೊಬೈಲ್ ಕ್ಷೇತ್ರದ ಹಬ್​ ಆಗಿಯೂ ಬೆಳೆಯುತ್ತಿದೆ. ಹೀಗಾಗಿ, ಬೆಂಗಳೂರಿನಲ್ಲಿ ಐಕ್ಯಾಟ್​ ಕೇಂದ್ರ ಆರಂಭ ಮಾಡುವ ಬಗ್ಗೆ ಪ್ರಕ್ರಿಯೆಗಳನ್ನು ಶುರುಮಾಡುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ: ಗುತ್ತಿಗೆದಾರರು 1 ವರ್ಷ ಯಾವುದೇ ಗುತ್ತಿಗೆ ಪಡೆಯಬೇಡಿ, ಕೆಲಸ ಮಾಡಬೇಡಿ: ಕುಮಾರಸ್ವಾಮಿ

ಬೆಂಗಳೂರಿನಲ್ಲಿ ಐಕ್ಯಾಟ್​ ಸ್ಥಾಪನೆ ಮಾಡುವುದರಿಂದ ಎಲೆಕ್ಟ್ರಿಕ್​ ವಾಹನ ತಂತ್ರಜ್ಞಾನ, ಸಾಫ್ಟ್​ವೇರ್​ ನಿಯಂತ್ರಿತ ವಾಹನಗಳು, ಸ್ವಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯ ದೃಷ್ಟಿಯಲ್ಲಿ ಐಕ್ಯಾಟ್​ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ. ಬೆಂಗಳೂರಿನಲ್ಲಿ ಐಕ್ಯಾಟ್​ ಕೇಂದ್ರ ಸ್ಥಾಪನೆ ಮಾಡುವುದರಿಂದ ಅಕ್ಕಪಕ್ಕದ ರಾಜ್ಯಗಳಿಗೂ ಅನುಕೂಲವಾಗಿದೆ. ಆಟೋಮೊಬೈಲ್​ ಆವಿಷ್ಕಾರಕ್ಕೆ ಉತ್ತೇಜನ ದೊರೆಯಲಿದೆ ಮತ್ತು ಐಕ್ಯಾಟ್​ ಸ್ಥಾಪನೆಯಿಂದ ಮುಂದಿನ ಪೀಳಿಗೆಗೆ ಆಟೋಮೊಬೈಲ್​ ಕ್ಷೇತ್ರದಲ್ಲಿ ಹೊಸ ಅವಿಷ್ಕಾರಕ್ಕೆ ಹೆಚ್ಚು ಉತ್ತೇಜನ ದೊರೆಯಲಿದೆ ಎಂದರು.

ಇದಕ್ಕೂ ಮುನ್ನ ಗುರುಗ್ರಾಮ್ ಬಳಿಯ ಮನೇಸರ್‌ನಲ್ಲಿರುವ ಐಸಿಎಟಿಯ ಎರಡು ಕೇಂದ್ರಗಳಿಗೆ ಭೇಟಿ ನೀಡಿದ ಹೆಚ್​ಡಿ ಕುಮಾರಸ್ವಾಮಿ, ಅವುಗಳ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 am, Tue, 21 January 25

Follow Us
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ