AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ಫೆ.6ರಿಂದ ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಬಜೆಟ್​ಗೂ ಮುನ್ನ ಸರ್ಕಾರಕ್ಕೆ ಶುರುವಾಯ್ತು ಬೇಡಿಕೆಗಳ ಸುರಿಮಳೆ, ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ನಾಳೆ (ಫೆ.6) ಫ್ರೀಡಂ ಪಾರ್ಕ್​ನಲ್ಲಿ 4 ನಿಗಮದ ಸಾರಿಗೆ ನೌಕರರು, ಕುಟುಂಬ ಸಮೇತ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ.

Bengaluru: ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ಫೆ.6ರಿಂದ ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 05, 2023 | 8:00 AM

Share

ಬೆಂಗಳೂರು: ಇತ್ತೀಚೆಗಷ್ಟೇ ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯೂಟಿ ಸೇರಿದಂತೆ ವಿವಿಧ ಭೇಡಿಕೆಗಳನ್ನ ಈಡೇರಿಸಲು ಫ್ರೀಡಂ ಪಾರ್ಕ್​ನಲ್ಲಿ ಕಳೆದ 10 ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನಡೆಸುತ್ತಿದ್ದು, ಸರ್ಕಾರದ ಭರವಸೆ ಮೇರೆಗೆ ಮೊನ್ನೆಯಷ್ಟೆ ತಮ್ಮ ಪ್ರತಿಭಟನೆಯನ್ನ ನಿಲ್ಲಿಸಿದ್ದರು. ಇದರ ಬೆನ್ನಲ್ಲೆ ಇದೀಗ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ಇಲಾಖೆಯ 4 ನಿಗಮಗಳ ನೌಕರರು ಸೇರಿದಂತೆ ತಮ್ಮ ಕುಟುಂಬ ಸಮೇತ ನಾಳೆ(ಫೆ.6) ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ.

ಹಾಗಿದ್ರೆ ಸಾರಿಗೆ ನೌಕರರ ಬೇಡಿಕೆಗಳೇನು?

* ಜನವರಿ 1 2020 ರಿಂದ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಬಾಕಿ ಇದ್ದು, ಕೂಡಲೆ ವೇತನ ಹೆಚ್ಚಳ ಮಾಡುವುದು.

* ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರು ನೇಮಕಾತಿ ಮಾಡಿಕೊಳ್ಳುವುದು.

* ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು.

* ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡಿರುವ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು, ಅವರಿಗೆ ಸರಿಯಾದ ರೀತಿ ಪಿಂಚಣಿ ಸೌಲಭ್ಯವನ್ನು ಒದಗಿಸುವುದು.

* ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ಉತ್ತಮವಾದ ಆರೋಗ್ಯ ಯೋಜನೆಗಳನ್ನು ಒದಗಿಸುವುದು.

ಇವಿಷ್ಟು ಭೇಡಿಕೆಗಳನ್ನ ಈಡೇರಿಸುವಂತೆ ನಾಳೆ ಫ್ರೀಡಂಪಾರ್ಕ್​ನಲ್ಲಿ 4 ನಿಗಮದ ಸಾರಿಗೆ ನೌಕರರು ಕುಟುಂಬ ಸಮೇತ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ