AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ಫೆ.6ರಿಂದ ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಬಜೆಟ್​ಗೂ ಮುನ್ನ ಸರ್ಕಾರಕ್ಕೆ ಶುರುವಾಯ್ತು ಬೇಡಿಕೆಗಳ ಸುರಿಮಳೆ, ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ನಾಳೆ (ಫೆ.6) ಫ್ರೀಡಂ ಪಾರ್ಕ್​ನಲ್ಲಿ 4 ನಿಗಮದ ಸಾರಿಗೆ ನೌಕರರು, ಕುಟುಂಬ ಸಮೇತ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ.

Bengaluru: ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ಫೆ.6ರಿಂದ ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ
ಸಾಂದರ್ಭಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 05, 2023 | 8:00 AM

Share

ಬೆಂಗಳೂರು: ಇತ್ತೀಚೆಗಷ್ಟೇ ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯೂಟಿ ಸೇರಿದಂತೆ ವಿವಿಧ ಭೇಡಿಕೆಗಳನ್ನ ಈಡೇರಿಸಲು ಫ್ರೀಡಂ ಪಾರ್ಕ್​ನಲ್ಲಿ ಕಳೆದ 10 ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನಡೆಸುತ್ತಿದ್ದು, ಸರ್ಕಾರದ ಭರವಸೆ ಮೇರೆಗೆ ಮೊನ್ನೆಯಷ್ಟೆ ತಮ್ಮ ಪ್ರತಿಭಟನೆಯನ್ನ ನಿಲ್ಲಿಸಿದ್ದರು. ಇದರ ಬೆನ್ನಲ್ಲೆ ಇದೀಗ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ಇಲಾಖೆಯ 4 ನಿಗಮಗಳ ನೌಕರರು ಸೇರಿದಂತೆ ತಮ್ಮ ಕುಟುಂಬ ಸಮೇತ ನಾಳೆ(ಫೆ.6) ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ.

ಹಾಗಿದ್ರೆ ಸಾರಿಗೆ ನೌಕರರ ಬೇಡಿಕೆಗಳೇನು?

* ಜನವರಿ 1 2020 ರಿಂದ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಬಾಕಿ ಇದ್ದು, ಕೂಡಲೆ ವೇತನ ಹೆಚ್ಚಳ ಮಾಡುವುದು.

* ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರು ನೇಮಕಾತಿ ಮಾಡಿಕೊಳ್ಳುವುದು.

* ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು.

* ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡಿರುವ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು, ಅವರಿಗೆ ಸರಿಯಾದ ರೀತಿ ಪಿಂಚಣಿ ಸೌಲಭ್ಯವನ್ನು ಒದಗಿಸುವುದು.

* ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ಉತ್ತಮವಾದ ಆರೋಗ್ಯ ಯೋಜನೆಗಳನ್ನು ಒದಗಿಸುವುದು.

ಇವಿಷ್ಟು ಭೇಡಿಕೆಗಳನ್ನ ಈಡೇರಿಸುವಂತೆ ನಾಳೆ ಫ್ರೀಡಂಪಾರ್ಕ್​ನಲ್ಲಿ 4 ನಿಗಮದ ಸಾರಿಗೆ ನೌಕರರು ಕುಟುಂಬ ಸಮೇತ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!