AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡ ಸಂಗ್ರಹ; ಇದುವರೆಗೂ ಪಾವತಿಯಾದ ದಂಡವೆಷ್ಟು ಗೊತ್ತಾ?

ಕರ್ನಾಟಕ ಸರ್ಕಾರವು ಸಂಚಾರ ದಂಡದ ಮೇಲೆ 50% ರಿಯಾಯಿತಿ ಘೋಷಿಸಿದ್ದು, ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಈ ಆಫರ್ ಲಭ್ಯವಿದೆ. ಇದುವರೆಗೆ 2.25 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಿ, 5.98 ಕೋಟಿ ರೂ. ಸಂಗ್ರಹವಾಗಿದೆ ಎಂದು ಸಂಚಾರಿ ಪೊಲೀಸರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ನಾಗರಿಕರ ಪ್ರತಿಕ್ರಿಯೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡ ಸಂಗ್ರಹ; ಇದುವರೆಗೂ ಪಾವತಿಯಾದ ದಂಡವೆಷ್ಟು ಗೊತ್ತಾ?
ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆಯಿಂದ ಪಾವತಿಯಾದ ದಂಡವೆಷ್ಟು ಗೊತ್ತಾ?
ಭಾವನಾ ಹೆಗಡೆ
|

Updated on:Nov 28, 2025 | 11:49 AM

Share

ಬೆಂಗಳೂರು, ನವೆಂಬರ್ 28: ಕರ್ನಾಟಕ ಸರ್ಕಾರವು ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ (traffic violation fines discount) ಮೇಲೆ 50% ರಿಯಾಯಿತಿ ಘೋಷಿಸಿ, ನವೆಂಬರ್ 20 ರಂದು ಅಧಿಕೃತ ಆದೇಶ ಹೊರಡಿಸಲಾಗಿತ್ತು. ಈ ಪ್ರಕ್ರಿಯೆಯೀಗ 7 ನೇ ದಿನ ತಲುಪಿದ್ದು, ನಾಗರಿಕರಿಂದ ಅದ್ಭುತವಾದ ಪ್ರತಿಕ್ರಿಯೆ ಲಭಿಸದೆ ಎಂದು ಸಂಚಾರಿ ಪೊಲೀಸರು (Bengaluru Traffic Police) ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಒಂದೇ ದಿನದಲ್ಲಿ ರೂ.68 ಲಕ್ಷಕ್ಕೂ ಹೆಚ್ಚು ದಂಡ ಸಂಗ್ರಹ

ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಈ ರಿಯಾಯಿತಿ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಚಾಲಕರು ತಮ್ಮ ಬಾಕಿ ದಂಡವನ್ನು ಅರ್ಧ ಮೊತ್ತಕ್ಕೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಹೇಳಲಾಗಿದೆ. ಈ 7 ದಿನಗಳಲ್ಲಿ ಒಟ್ಟೂ 2,25,511 ಪ್ರಕರಣಗಳು ಇತ್ಯರ್ಥಗೊಂಡಿದ್ದು,ರೂ. 5,98,28,800 ಮೊತ್ತ ಸಂಗ್ರಹವಾಗಿದೆ. 7 ನೇ ದಿನವಾದ ಇಂದು 24,272 ಪ್ರಕರಣಗಳು ಇತ್ಯರ್ಥಗೊಂಡಿದ್ದು, 68,57,350 ರೂ. ದಂಡ ಪಾವತಿಯಾಗಿದೆ ಎಂದು ಇಲಾಖೆ ತನ್ನ ಪೋಸ್ಟ್​ನಲ್ಲಿ ತಿಳಿಸಿದೆ.

ಸಂಚಾರಿ ಪೊಲೀಸರ ಎಕ್ಸ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ ವಾಹನ ಸವಾರರಿಗೆ ಭರ್ಜರಿ ಆಫರ್, ಮತ್ತೊಮ್ಮೆ ಟ್ರಾಫಿಕ್ ಫೈನ್ 50% ರಿಯಾಯಿತಿ ಘೋಷಣೆ

ದಂಡ ಪಾವತಿಸುವ ವಿಧಾನ

ಬಾಕಿ ದಂಡವನ್ನು ರಿಯಾಯಿತಿಯೊಂದಿಗೆ ಪಾವತಿ ಮಾಡುವ ವಿಧಾನವನ್ನೂ ಇಲಾಖೆ ಹಂಚಿಕೊಂಡಿದೆ.

  • ಈ ಕೆಳಗಿನ ಮೊಬೈಲ್ ಆಪ್‌ಗಳನ್ನು ಬಳಸಿ (ಪ್ಲೇ ಸ್ಟೋರ್ ಮತ್ತು ಆಪಲ್ ಸ್ಟೋರ್‌ನಲ್ಲಿ ಲಭ್ಯ): ಕರ್ನಾಟಕ ರಾಜ್ಯ ಪೊಲೀಸ್ ಆಪ್, ಆಸ್ಟ್ರಿಮ್ (BTP/ಟ್ರಾಫಿಕ್ ಉಲ್ಲಂಘನೆ ವ್ಯವಸ್ಥೆ)
  • ಪ್ರಕ್ರಿಯೆ:
  1. ನಿಮ್ಮ ವಾಹನದ ಸಂಖ್ಯೆಯನ್ನು ನಮೂದಿಸಿ.
  2.  ನಿಮ್ಮ ವಾಹನದ ಫೋಟೋ/ವಿವರಗಳನ್ನು ಪರಿಶೀಲಿಸಿ.
  3. ರಿಯಾಯಿತಿಯೊಂದಿಗೆ ದಂಡವನ್ನು ಪಾವತಿಸಿ.
  4. ಯಾವುದೇ ಸಂಚಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮುಖೇನ ಪಾವತಿಸುವಿಕೆ.
  5. ಸಂಚಾರ ನಿರ್ವಹಣಾ ಕೇಂದ್ರ (TMC)ಗೆ ಭೇಟಿ ನೀಡಿ: ಮೊದಲನೇ ಮಹಡಿ, ಇನ್ಸಾಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್ ಹತ್ತಿರ, ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:35 am, Fri, 28 November 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!